ಫ್ಲೈಓವರ್‌ ಅಡಿ ಅಭಿವೃದ್ಧಿ ಕುರಿತು ಸಭೆ: ನಗರ ಪ್ರವೇಶಕ್ಕೆ ಅವಕಾಶ ನೀಡಲು ಚಿಂತನೆ


Team Udayavani, Feb 25, 2022, 3:40 AM IST

ಫ್ಲೈಓವರ್‌ ಅಡಿ ಅಭಿವೃದ್ಧಿ ಕುರಿತು ಸಭೆ: ನಗರ ಪ್ರವೇಶಕ್ಕೆ ಅವಕಾಶ ನೀಡಲು ಚಿಂತನೆ

ಕುಂದಾಪುರ: ಫ್ಲೈಓವರ್‌ ಅಡಿಯಲ್ಲಿ ರಾಶಿಬಿದ್ದ ತ್ಯಾಜ್ಯ ರಾಶಿ ಇನ್ನೂ ಪೂರ್ಣ ಪ್ರಮಾಣದಲ್ಲಿ ತೆರವಾಗಿಲ್ಲ. ಇದನ್ನು ತೆರವುಗೊಳಿಸುವುದು ಸೇರಿದಂತೆ ಯಾವ ರೀತಿ ಅಭಿವೃದ್ಧಿ ನಡೆಸಬಹುದು ಎಂದು ಗುರುವಾರ ಸಹಾಯಕ ಕಮಿಷನರ್‌ ಅವರು ಸಭೆ ನಡೆಸಿದರು.

ಗಡುವು ಮೀರಿದೆ:

ಕಚೇರಿಯಲ್ಲಿ ಎಸಿ ಕೆ. ರಾಜು ಅವರು ಸಭೆ ನಡೆಸಿ, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು ತ್ಯಾಜ್ಯ ರಾಶಿ ಪೂರ್ಣವಾಗಿ ತೆರವಾಗಿಲ್ಲ. ಸೆಪ್ಟೆಂಬರ್‌ನಲ್ಲಿ 4 ದಿನಗಳ ಗಡುವು ಪಡೆದ ಗುತ್ತಿಗೆದಾರ ಸಂಸ್ಥೆ ಇನ್ನೂ ಪೈಪ್‌ಗ್ಳನ್ನು ತೆಗೆದಿಲ್ಲ. ಅಡಿಭಾಗದಲ್ಲಿ ಈವರೆಗೆ ವಾಹನ ನಿಲ್ಲಿಸುತ್ತಿದ್ದಲ್ಲಿ ಈಗ ಕಾಂಕ್ರಿಟ್‌ ಕಟ್ಟೆ ನಿರ್ಮಿಸಿದೆ. ಈ ಮೂಲಕ ಯಾವುದೇ ವಾಹನಗಳು ಪ್ರವೇಶಿಸದಂತೆ ಮಾಡಿದೆ. ಎಂಜಿನಿಯರ್‌ ಅಸೋಸಿಯೇಶನ್‌ನವರು ಯಾವ ರೀತಿಯಲ್ಲಿ ಅಭಿವೃದ್ಧಿ ನಡೆಸಬಹುದು ಎಂದು ಸಲಹೆಗಳನ್ನು ನೀಡಿದ್ದಾರೆ. ಈ ಕುರಿತು ಇನ್ನಷ್ಟು ವಿಚಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದರು.

ಹೆದ್ದಾರಿಯಿಂದ…

ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಫ್ಲೈಓವರ್‌ ಅಡಿಯಲ್ಲಿ ಅಭಿವೃದ್ಧಿ ಆಗಬೇಕು. ಸುಂದರ ಕುಂದಾಪುರ ನಿರ್ಮಾಣವಾಗಬೇಕು. ಇದಕ್ಕೆ ಎಲ್ಲ ಸಂಘ ಸಂಸ್ಥೆಗಳ ಸಹಕಾರ ಬೇಕು. ಹೆದ್ದಾರಿಯಿಂದ ನಗರಕ್ಕೆ ಪ್ರವೇಶದ ಕುರಿತು ಸಾಕಷ್ಟು ಬೇಡಿಕೆಗಳಿವೆ. ನಗರದ ವ್ಯಾಪಾರ ವಹಿವಾಟಿನ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಿದೆ. ನಗರಕ್ಕೆ ಯಾವ ದಾರಿಯಲ್ಲಿ ಹೆದ್ದಾರಿಯಿಂದ ಬರಬೇಕು ಎನ್ನುವ ಗೊಂದಲ ಮುಂದುವರಿದಿದೆ. ಬಹಳ ದೂರದವರೆಗೆ ಹೋಗಿ ಕುಂದಾಪುರ ದಾಟಿತು ಎಂದಾಗುತ್ತಿದೆ. ಅದಕ್ಕಾಗಿ ಹೆದ್ದಾರಿಯಿಂದ ನೆಹರೂ ಮೈದಾನ ಬಳಿ ಅವಕಾಶ ನೀಡುವುದಾದರೆ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು. ಚರಂಡಿಗೆ ಅಳವಡಿಸಿದ ಸ್ಲಾéಬ್‌ಗಳ ಎತ್ತರ ತಗ್ಗಿಸಿ ಸ್ವಲ್ಪ  ಸ್ಥಳಾವಕಾಶ ದೊರೆಯುವಂತೆ ಮಾಡಿದರೆ ವಾಹನ ಸರಾಗವಾಗಿ, ಸಂಚಾರ ದಟ್ಟಣೆ ಆಗದಂತೆ, ಗೊಂದಲ ಆಗದಂತೆ ಸರ್ವಿಸ್‌ ರಸ್ತೆಗೆ ಪ್ರವೇಶ ಆಗಬಹುದು ಎಂದರು.

ಮಾಹಿತಿ :

ಎಂಜಿನಿಯರ್‌ ಅಸೋಸಿಯೇಶನ್‌ನವರು ಯಾವ ಮಾದರಿಯಲ್ಲಿ ಅಭಿವೃದ್ಧಿ ನಡೆಸಬಹುದು ಎಂದು ಮಾಹಿತಿಗಳನ್ನು ಜಿಲ್ಲಾಧಿಕಾರಿಗೆ ಕಳುಹಿಸಿಕೊಟ್ಟಿದ್ದರು. ಜಿಲ್ಲಾಧಿಕಾರಿಯಿಂದ ಎಸಿಯವರಿಗೆ ಸೂಚನೆ ಬಂದಿದ್ದು ಅದರಂತೆ ಸಭೆ ನಡೆಸಲಾಗಿದೆ. ತಹಶೀಲ್ದಾರ್‌ ಕಿರಣ್‌ ಗೌರಯ್ಯ, ಪುರಸಭೆ ಅಧಿಕಾರಿ ಗಣೇಶ್‌ ಜನ್ನಾಡಿ ಮೊದಲಾದವರಿದ್ದರು. ಸಭೆಯ ಬಳಿಕ ಫ್ಲೈಓವರ್‌ ಅಡಿಯಲ್ಲಿ ವೀಕ್ಷಣೆ ಎಂದು ನಿಗದಿಯಾಗಿತ್ತಾದರೂ ಕೊನೆಯ ಕ್ಷಣದಲ್ಲಿ ರದ್ದಾಯಿತು. ಮುಂದಿನ ದಿನಗಳಲ್ಲಿ ಈ ಕುರಿತಾದ ಪರಿಶೀಲನೆಯೂ ನಡೆಯಲಿದೆ.

ಜಿಲ್ಲಾಧಿಕಾರಿಯಿಂದ ಸಹಾಯಕ ಕಮಿಷನರ್‌ ಅವರಿಗೆ ಬಂದ ಸೂಚನೆಯಂತೆ ಸಭೆ ನಡೆಸಲಾಗಿದೆ. ಇನ್ನೊಮ್ಮೆ ಗುತ್ತಿಗೆದಾರ ಸಂಸ್ಥೆ, ಹೆದ್ದಾರಿ ಇಲಾಖೆ ಯೋಜನಾಧಿಕಾರಿಗಳಿದ್ದು ಸಭೆ ನಡೆಸುವುದಾಗಿ ಸಹಾಯಕ ಆಯುಕ್ತರು ಸೂಚಿಸಿದ್ದಾರೆ. –ಗೋಪಾಲಕೃಷ್ಣ  ಶೆಟ್ಟಿ,ಮುಖ್ಯಾಧಿಕಾರಿ, ಪುರಸಭೆ

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.