Kundapura: ಗಂಗಡಬೈಲು ಸೇತುವೆ ಕಾಮಗಾರಿ ಅಪೂರ್ಣ; ಸಂಚಾರ ದುಸ್ತರ

ಆಸುಪಾಸಿನ ಜನರು ಪ್ರತಿ ದಿನ ಕಷ್ಟಪಟ್ಟುಕೊಂಡೇ ಸಂಚರಿಸುವಂತಾಗಿದೆ.

Team Udayavani, Sep 29, 2023, 11:45 AM IST

Kundapura: ಗಂಗಡಬೈಲು ಸೇತುವೆ ಕಾಮಗಾರಿ ಅಪೂರ್ಣ; ಸಂಚಾರ ದುಸ್ತರ

ಕುಂದಾಪುರ: ಶೇಡಿಮನೆಯಿಂದ ಅಮಾಸೆಬೈಲು ಸಂಪರ್ಕಿಸುವ ಮಾಯಾಬಜಾರ್‌ ಹತ್ತಿರದ ಗಂಗಡಬೈಲು ಸೇತುವೆ ಕಾಮಗಾರಿ
ಅಪೂರ್ಣಗೊಂಡಿದ್ದು, ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಅರೆಬರೆ ಪೂರ್ಣಗೊಂಡ ಸೇತುವೆಯಲ್ಲಿಯೇ ಕಷ್ಟಪಟ್ಟು ಸಂಚರಿಸುವ ಅನಿವಾರ್ಯತೆ ವಾಹನ ಸವಾರರದ್ದಾಗಿದೆ.

ಮಡಾಮಕ್ಕಿ ಗ್ರಾ.ಪಂ. ವ್ಯಾಪ್ತಿಯ ಶೇಡಿಮನೆ ಸಮೀಪದ ಮಾಯಾಬಜಾರ್‌ನ ಗಂಗಡಬೈಲಿನಲ್ಲಿ ಈ ಹಿಂದೆ 4 ಮೀ. ಅಷ್ಟೇ ಅಗಲವಿದ್ದ ಕಿರು ಸೇತುವೆಯನ್ನು ತೆಗೆದು, ಹಿಂದಿನ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟರ ಮುತುವರ್ಜಿಯಿಂದಾಗಿ 90 ಲಕ್ಷ ರೂ. ವೆಚ್ಚದಲ್ಲಿ 12 ಮೀ. ಅಗಲದ ಹೊಸ ಸೇತುವೆ ಮಂಜೂರಾಗಿತ್ತು. ಅದರಂತೆ ಕಾಮಗಾರಿ ಆರಂಭಗೊಂಡು ಹಲವು ತಿಂಗಳೇ ಕಳೆದರೂ, ಇನ್ನೂ ಪೂರ್ಣಗೊಂಡಿಲ್ಲ.

ವಾಹನ ಸವಾರರ ಸಂಕಷ್ಟ ಹಿಂದೆ ಇದ್ದ ಸೇತುವೆಯನ್ನು ತೆಗೆದುಹಾಕಿ, ಅದೇ ಸ್ಥಳದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಜನ ಅನಿವಾರ್ಯವಾಗಿ ಈ ಸೇತುವೆಯಲ್ಲೇ ಸಂಚರಿಸಬೇಕಾಗಿದೆ. ಇದು ಒಂದು ಬದಿಯ ಕಾಮಗಾರಿ ಮಾತ್ರ ನಡೆದಿದ್ದು, ಇನ್ನೊಂದು ಬದಿಯ ಕಾಮಗಾರಿ ಕಾಂಕ್ರೀಟ್‌ ಮಾಡಿ, ಕ್ಯೂರಿಂಗ್‌ಗೆ ಅಂತ ಬಿಟ್ಟಿದ್ದಾರೆ. ಈಗ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಭಾಗದಲ್ಲೂ ಒಂದು ಬದಿ ಕುಸಿದಿರುವುದರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿದೆ.

ಪ್ರಮುಖ ರಸ್ತೆ
ಇದು ಮಡಾಮಕ್ಕಿ, ಶೇಡಿಮನೆ, ಅರಸಮ್ಮಕಾನು ಭಾಗದವರಿಗೆ ಅಮಾಸೆಬೈಲು, ಹೆಂಗವಳ್ಳಿ, ಸಿದ್ದಾಪುರ, ಕಮಲಶಿಲೆ ಕಡೆಗೆ ಸಂಚರಿಸಲು ಇರುವ ಪ್ರಮುಖ ರಸ್ತೆಯಾಗಿದೆ. ಇದಲ್ಲದೆ ಅಮಾಸೆಬೈಲು ಭಾಗದವರಿಗೂ ಹೆಬ್ರಿ, ನಾಡಾ³ಲು, ಕುಚ್ಚಾರು ಕಡೆಗೆ ಸಂಪರ್ಕಿಸುವ ರಸ್ತೆಯೂ ಇದಾಗಿದೆ. ಜಡ್ಕಲ್‌- ಮುದೂರು- ಹಳ್ಳಿಹೊಳೆ- ಸಿದ್ದಾಪುರ- ಅಮಾಸೆಬೈಲು – ಶೇಡಿಮನೆ ಸಂಪರ್ಕಿಸುವ ಈ ರಸ್ತೆಯನ್ನು ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆಗಳು ಇದೆ.

ಶೀಘ್ರ ಪೂರ್ಣಕ್ಕೆ ಆಗ್ರಹ
ಈ ಸೇತುವೆಯ ಅರೆಬರೆ ಕಾಮಗಾರಿಯಿಂದಾಗಿ ಆಸುಪಾಸಿನ ಜನರು ಪ್ರತಿ ದಿನ ಕಷ್ಟಪಟ್ಟುಕೊಂಡೇ ಸಂಚರಿಸುವಂತಾಗಿದೆ. ಆದಷ್ಟು ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಿದರೆ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎನ್ನುವುದಾಗಿ
ಸ್ಥಳೀಯರು ಒತ್ತಾಯಿಸಿದ್ದಾರೆ.

ಸಂಪರ್ಕ ರಸ್ತೆ ಬಾಕಿ
ಸದ್ಯ ಸೇತುವೆಯ ಒಂದು ಕಡೆಯ ಕಾಂಕ್ರೀಟ್‌ ಆಗಿದ್ದು, ಅದರ ಕ್ಯೂರಿಂಗ್‌ ಗೆ ಬಿಡಲಾಗಿದೆ. ಇನ್ನು ಸೇತುವೆಯ ಎರಡೂ ಕಡೆಗಳಿಂದಲೂ ಸಂಪರ್ಕಿಸುವ ತಲಾ 20 ಮೀ.ನಷ್ಟು ಡಾಮರು ರಸ್ತೆ ಆಗಬೇಕಾಗಿದೆ. ಅದು ಮಳೆ ಬರುತ್ತಿರುವಾಗ ಕಷ್ಟ. ಹಾಗಾಗಿ ಅಕ್ಟೋಬರ್‌ ನವೆಂಬರ್‌ನಲ್ಲಿ ಆಗಬಹುದು. ಅದಾದ ಬಳಿಕ ಸಂಪೂರ್ಣ ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ
ಎನ್ನುವುದಾಗಿ ಲೋಕೋಪಯೋಗಿ ಇಲಾಖೆಯ ಕುಂದಾಪುರ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಾಡಿಕೊಡುವ ಭರವಸೆ
ಈ ಗಂಗಡಬೈಲು ಸೇತುವೆ ಕಾಮಗಾರಿ ನಿಧಾನಗತಿಯಲ್ಲಿ ಆಗುತ್ತಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ
ನಾನು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌, ಗುತ್ತಿಗೆದಾರರಲ್ಲಿ ಮಾತನಾಡಿದ್ದೇನೆ. ಆದಷ್ಟು ಬೇಗ
ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ. ಕಾಮಗಾರಿ ನಡೆಯುತ್ತಿದೆ. ಶೀಘ್ರ ಪೂರ್ಣಗೊಳ್ಳುವ ನಿರೀಕ್ಷೆಯಿದೆ.
ಉದಯ ಕುಮಾರ್‌ ಶೆಟ್ಟಿ, ಅಧ್ಯಕ್ಷ, ಮಡಾಮಕ್ಕಿ ಗ್ರಾ.ಪಂ

*ಪ್ರಶಾಂತ ಪಾದೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.