15ಕ್ಕೂ ಮಿಕ್ಕಿ ಗ್ರಾ.ಪಂ. ಅಭಿವೃದ್ಧಿಗೆ ತೊಡಕು

ಪಂಚಾಯತ್‌ ರಾಜ್‌ ಸಹಾಯಕ ಎಂಜಿನಿಯರ್ ಹುದ್ದೆ ಖಾಲಿ

Team Udayavani, Sep 20, 2022, 11:21 AM IST

4

ಸಾಂದರ್ಭಿಕ ಚಿತ್ರ

ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ಎರಡು ತಾಲೂಕಿನ ಎಲ್ಲ 60 ಗ್ರಾ.ಪಂ. ಗಳಿಗೆ ಸಂಬಂಧ ಪಡುವ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಬೈಂದೂರು ಉಪವಿಭಾಗ (ರಸ್ತೆ) ಇದರ ಸಹಾಯಕ ಎಂಜಿನಿಯರ್ ಹುದ್ದೆಗಳು ಖಾಲಿಯಿದ್ದು, ಇದರಿಂದ ಉಭಯ ತಾಲೂಕಿನ 15ಕ್ಕೂ ಅಧಿಕ ಗ್ರಾಮ ಪಂಚಾಯತ್‌ಗಳ 15ನೇ ಹಣಕಾಸು ಯೋಜನೆ ಸಹಿತ ಶಾಸಕರ, ಜಿ.ಪಂ., ತಾ.ಪಂ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿ ಪರಿಣಮಿಸಿದೆ.

ಕುಂದಾಪುರ ತಾಲೂಕಿನ 44 ಹಾಗೂ ಬೈಂದೂರು ತಾಲೂಕಿನ 16 ಸೇರಿದಂತೆ ಎಲ್ಲ 60 ಗ್ರಾ.ಪಂ.ಗಳ 15ನೇ ಹಣಕಾಸು ಯೋಜನೆ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಕಾಮಗಾರಿ, ಜಿ.ಪಂ., ತಾ.ಪಂ. ರಸ್ತೆ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಹೊಣೆ ಬೈಂದೂರಿನ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗದ್ದಾಗಿರುತ್ತದೆ.

ನಾಲ್ವರಲ್ಲಿ ಒಬ್ಬರು ಮಾತ್ರ

ಈ ವಿಭಾಗದಲ್ಲಿ ಒಬ್ಬರು ಸಹಾಯಕ ಕಾರ್ಯವಾಹಕ ಎಂಜಿನಿಯರ್‌ ಹಾಗೂ ಇನ್ನು ನಾಲ್ಕು ಮಂದಿ ಸಹಾಯಕ ಎಂಜಿನಿಯರ್‌ಗಳಿರುತ್ತಾರೆ. ಈ ಪೈಕಿ ಸಹಾಯಕ ಕಾರ್ಯವಾಹಕ ಎಂಜಿನಿಯರ್‌ ಹಾಗೂ ಒಬ್ಬರು ಸಹಾಯಕ ಎಂಜಿನಿಯರ್‌ ಇದ್ದಾರೆ. ಇನ್ನುಳಿದ ಮೂರು ಹುದ್ದೆ ಖಾಲಿಯಿವೆ. ಒಬ್ಬರಿಗೆ ಜನಸಂಖ್ಯೆ ಆಧಾರದಲ್ಲಿ 7-8 ಗ್ರಾ.ಪಂ.ಗಳನ್ನು ವಹಿಸಲಾಗುತ್ತದೆ. ಕಳೆದ ಜೂನ್‌ನಲ್ಲಿ ಇಬ್ಬರು ಎಂಜಿನಿಯರ್‌ಗಳು ನಿವೃತ್ತಿಯಾಗಿದ್ದು, ಇನ್ನು 15ಕ್ಕೂ ಮಿಕ್ಕಿ ಗ್ರಾ.ಪಂ.ಗಳ ಬಹುತೇಕ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿದೆ. ಈಗಿರುವವರಿಗೆ 20 ಹಾಗೂ 14 ಗ್ರಾ.ಪಂ.ಗಳನ್ನು ವಹಿಸಲಾಗಿದೆ.

ಯಾವೆಲ್ಲ ಗ್ರಾ.ಪಂ.ಗೆ ಸಮಸ್ಯೆ

ಬೀಜಾಡಿ, ಕೋಟೇಶ್ವರ, ಬಳ್ಕೂರು, ಬಸ್ರೂರು, ತಲ್ಲೂರು, ಹೆಮ್ಮಾಡಿ, ವಂಡ್ಸೆ, ಚಿತ್ತೂರು, ಯಡಮೊಗೆ, ಉಳ್ಳೂರು 74, ಹೊಸಂಗಡಿ, ಸಿದ್ದಾಪುರ, ಹೆಂಗವಳ್ಳಿ, ಅಮಾಸೆಬೈಲು, ಶಂಕರನಾರಾಯಣ. ಈಗ ತಾತ್ಕಾಲಿಕವಾಗಿ ಕಾರ್ಕಳ ಹಾಗೂ ಉಡುಪಿ ಉಪ ವಿಭಾಗದ ನಾಲ್ವರು ಎಂಜಿನಿಯರ್‌ಗಳಿಗೆ ಹೆಚ್ಚುವರಿಯಾಗಿ ಈ ಪಂಚಾಯತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಅವರಿಗೆ ಅಲ್ಲಿನ ಕೆಲಸವು ಇರುವುದರಿಂದ ಹೊರೆಯಾಗಿ ಪರಿಣಮಿಸಿದೆ.

ತುಂಬಾ ಸಮಸ್ಯೆ: ಹೆಮ್ಮಾಡಿಯಲ್ಲಿ ಹಿಂದೆ ಇದ್ದ ಎಂಜಿನಿಯರ್‌ ಜೂನ್‌ನಲ್ಲಿ ನಿವೃತ್ತಿಯಾಗಿದ್ದು, ಆ ಬಳಿಕ ಯಾವುದೇ ರಸ್ತೆ ಕಾಮಗಾರಿ ನಡೆಸಲು ಕಷ್ಟವಾಗಿದೆ. ಕಾಮಗಾರಿ ಮುಗಿಸಿದವರಿಗೆ ಎಂಜಿನಿಯರ್‌ಗಳು ಪರಿಶೀಲಿಸಿ, ವರದಿ ಕೊಡದಿರುವುದರಿಂದ ಗುತ್ತಿಗೆದಾರರಿಗೆ ಅನುದಾನ ಪಾವತಿಯು ಸಕಾಲದಲ್ಲಿ ಆಗುತ್ತಿಲ್ಲ. ಒಟ್ಟಾರೆ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಮಾಡಿದ್ದು, ಆದಷ್ಟು ಬೇಗ ನೇಮಕ ಮಾಡಬೇಕಿದೆ. – ಸುಧಾಕರ ದೇವಾಡಿಗ ಕಟ್ಟು, ಹೆಮ್ಮಾಡಿ ಗ್ರಾ.ಪಂ.ಅಧ್ಯಕ್ಷರು

ಗಮನಕ್ಕೆ ತರಲಾಗಿದೆ: ಇಲ್ಲಿದ್ದ ಇಬ್ಬರು ಎಂಜಿನಿಯರ್ ನಿವೃತ್ತಿಯಾಗಿದ್ದರಿಂದ ಇರುವವರ ಕಾರ್ಯಭಾರ ಹೆಚ್ಚಾಗಿದೆ. ಈ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರು ಉಡುಪಿ ಹಾಗೂ ಕಾರ್ಕಳ ಉಪ ವಿಭಾಗದಿಂದ ನಿಯೋಜನೆಗೆ ಸೂಚಿಸಿದ್ದಾರೆ. ಸದ್ಯಕ್ಕೆ ಸಮಸ್ಯೆಯಾಗದಂತೆ ಪ್ರಭಾರ ನೆಲೆಯಲ್ಲಿ ಜವಾಬ್ದಾರಿಯನ್ನು ವಹಿಸಿ ಕೊಡಲಾಗಿದೆ. ಖಾಲಿ ಹುದ್ದೆ ಭರ್ತಿಯಾದರೆ ಸಮಸ್ಯೆ ಪರಿಹಾರವಾಗಲಿದೆ. –ರಾಜ್‌ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್‌, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗ ಬೈಂದೂರು

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident 2

ಬೈಕ್‌ ಸ್ಕಿಡ್‌: ಮೂವರಿಗೆ ಗಾಯ

ಕುಂದಾಪುರ ಪುರಸಭೆ: ಖಾರ್ವಿಕೇರಿ ಹಕ್ಕುಪತ್ರಕ್ಕೆ ಬಿಡದ ಗ್ರಹಣ

ಕುಂದಾಪುರ ಪುರಸಭೆ: ಖಾರ್ವಿಕೇರಿ ಹಕ್ಕುಪತ್ರಕ್ಕೆ ಬಿಡದ ಗ್ರಹಣ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಬಾಳೆಬರೆ ಘಾಟಿ ಕಾಂಕ್ರಿಟೀಕರಣ ಬಹುತೇಕ ಪೂರ್ಣ: ಎ.10ರ ಬಳಿಕ ವಾಹನ ಸಂಚಾರಕ್ಕೆ ಮುಕ್ತ ಸಾಧ್ಯತೆ

ಮೇಲ್ದರ್ಜೆಗೇರದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ

ಮೇಲ್ದರ್ಜೆಗೇರದ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ

accident 2

ಬಸ್ಸಿನಿಂದ ಬಿದ್ದು ಬಾಲಕನಿಗೆ ಗಾಯ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್