15ಕ್ಕೂ ಮಿಕ್ಕಿ ಗ್ರಾ.ಪಂ. ಅಭಿವೃದ್ಧಿಗೆ ತೊಡಕು

ಪಂಚಾಯತ್‌ ರಾಜ್‌ ಸಹಾಯಕ ಎಂಜಿನಿಯರ್ ಹುದ್ದೆ ಖಾಲಿ

Team Udayavani, Sep 20, 2022, 11:21 AM IST

4

ಸಾಂದರ್ಭಿಕ ಚಿತ್ರ

ಕುಂದಾಪುರ: ಬೈಂದೂರು ಹಾಗೂ ಕುಂದಾಪುರ ಎರಡು ತಾಲೂಕಿನ ಎಲ್ಲ 60 ಗ್ರಾ.ಪಂ. ಗಳಿಗೆ ಸಂಬಂಧ ಪಡುವ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಬೈಂದೂರು ಉಪವಿಭಾಗ (ರಸ್ತೆ) ಇದರ ಸಹಾಯಕ ಎಂಜಿನಿಯರ್ ಹುದ್ದೆಗಳು ಖಾಲಿಯಿದ್ದು, ಇದರಿಂದ ಉಭಯ ತಾಲೂಕಿನ 15ಕ್ಕೂ ಅಧಿಕ ಗ್ರಾಮ ಪಂಚಾಯತ್‌ಗಳ 15ನೇ ಹಣಕಾಸು ಯೋಜನೆ ಸಹಿತ ಶಾಸಕರ, ಜಿ.ಪಂ., ತಾ.ಪಂ. ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕಾಗಿ ಪರಿಣಮಿಸಿದೆ.

ಕುಂದಾಪುರ ತಾಲೂಕಿನ 44 ಹಾಗೂ ಬೈಂದೂರು ತಾಲೂಕಿನ 16 ಸೇರಿದಂತೆ ಎಲ್ಲ 60 ಗ್ರಾ.ಪಂ.ಗಳ 15ನೇ ಹಣಕಾಸು ಯೋಜನೆ, ಶಾಸಕರ ಪ್ರದೇಶಾಭಿವೃದ್ಧಿ ಅನುದಾನದ ಕಾಮಗಾರಿ, ಜಿ.ಪಂ., ತಾ.ಪಂ. ರಸ್ತೆ ಅಭಿವೃದ್ಧಿ ಕಾಮಗಾರಿಗಳ ನಿರ್ವಹಣೆ ಹೊಣೆ ಬೈಂದೂರಿನ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗದ್ದಾಗಿರುತ್ತದೆ.

ನಾಲ್ವರಲ್ಲಿ ಒಬ್ಬರು ಮಾತ್ರ

ಈ ವಿಭಾಗದಲ್ಲಿ ಒಬ್ಬರು ಸಹಾಯಕ ಕಾರ್ಯವಾಹಕ ಎಂಜಿನಿಯರ್‌ ಹಾಗೂ ಇನ್ನು ನಾಲ್ಕು ಮಂದಿ ಸಹಾಯಕ ಎಂಜಿನಿಯರ್‌ಗಳಿರುತ್ತಾರೆ. ಈ ಪೈಕಿ ಸಹಾಯಕ ಕಾರ್ಯವಾಹಕ ಎಂಜಿನಿಯರ್‌ ಹಾಗೂ ಒಬ್ಬರು ಸಹಾಯಕ ಎಂಜಿನಿಯರ್‌ ಇದ್ದಾರೆ. ಇನ್ನುಳಿದ ಮೂರು ಹುದ್ದೆ ಖಾಲಿಯಿವೆ. ಒಬ್ಬರಿಗೆ ಜನಸಂಖ್ಯೆ ಆಧಾರದಲ್ಲಿ 7-8 ಗ್ರಾ.ಪಂ.ಗಳನ್ನು ವಹಿಸಲಾಗುತ್ತದೆ. ಕಳೆದ ಜೂನ್‌ನಲ್ಲಿ ಇಬ್ಬರು ಎಂಜಿನಿಯರ್‌ಗಳು ನಿವೃತ್ತಿಯಾಗಿದ್ದು, ಇನ್ನು 15ಕ್ಕೂ ಮಿಕ್ಕಿ ಗ್ರಾ.ಪಂ.ಗಳ ಬಹುತೇಕ ಅಭಿವೃದ್ಧಿ ಕಾಮಗಾರಿ ಸ್ಥಗಿತಗೊಂಡಿದೆ. ಈಗಿರುವವರಿಗೆ 20 ಹಾಗೂ 14 ಗ್ರಾ.ಪಂ.ಗಳನ್ನು ವಹಿಸಲಾಗಿದೆ.

ಯಾವೆಲ್ಲ ಗ್ರಾ.ಪಂ.ಗೆ ಸಮಸ್ಯೆ

ಬೀಜಾಡಿ, ಕೋಟೇಶ್ವರ, ಬಳ್ಕೂರು, ಬಸ್ರೂರು, ತಲ್ಲೂರು, ಹೆಮ್ಮಾಡಿ, ವಂಡ್ಸೆ, ಚಿತ್ತೂರು, ಯಡಮೊಗೆ, ಉಳ್ಳೂರು 74, ಹೊಸಂಗಡಿ, ಸಿದ್ದಾಪುರ, ಹೆಂಗವಳ್ಳಿ, ಅಮಾಸೆಬೈಲು, ಶಂಕರನಾರಾಯಣ. ಈಗ ತಾತ್ಕಾಲಿಕವಾಗಿ ಕಾರ್ಕಳ ಹಾಗೂ ಉಡುಪಿ ಉಪ ವಿಭಾಗದ ನಾಲ್ವರು ಎಂಜಿನಿಯರ್‌ಗಳಿಗೆ ಹೆಚ್ಚುವರಿಯಾಗಿ ಈ ಪಂಚಾಯತ್‌ಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಅವರಿಗೆ ಅಲ್ಲಿನ ಕೆಲಸವು ಇರುವುದರಿಂದ ಹೊರೆಯಾಗಿ ಪರಿಣಮಿಸಿದೆ.

ತುಂಬಾ ಸಮಸ್ಯೆ: ಹೆಮ್ಮಾಡಿಯಲ್ಲಿ ಹಿಂದೆ ಇದ್ದ ಎಂಜಿನಿಯರ್‌ ಜೂನ್‌ನಲ್ಲಿ ನಿವೃತ್ತಿಯಾಗಿದ್ದು, ಆ ಬಳಿಕ ಯಾವುದೇ ರಸ್ತೆ ಕಾಮಗಾರಿ ನಡೆಸಲು ಕಷ್ಟವಾಗಿದೆ. ಕಾಮಗಾರಿ ಮುಗಿಸಿದವರಿಗೆ ಎಂಜಿನಿಯರ್‌ಗಳು ಪರಿಶೀಲಿಸಿ, ವರದಿ ಕೊಡದಿರುವುದರಿಂದ ಗುತ್ತಿಗೆದಾರರಿಗೆ ಅನುದಾನ ಪಾವತಿಯು ಸಕಾಲದಲ್ಲಿ ಆಗುತ್ತಿಲ್ಲ. ಒಟ್ಟಾರೆ ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ತುಂಬಾ ಸಮಸ್ಯೆಯಾಗುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಮನವಿ ಮಾಡಿದ್ದು, ಆದಷ್ಟು ಬೇಗ ನೇಮಕ ಮಾಡಬೇಕಿದೆ. – ಸುಧಾಕರ ದೇವಾಡಿಗ ಕಟ್ಟು, ಹೆಮ್ಮಾಡಿ ಗ್ರಾ.ಪಂ.ಅಧ್ಯಕ್ಷರು

ಗಮನಕ್ಕೆ ತರಲಾಗಿದೆ: ಇಲ್ಲಿದ್ದ ಇಬ್ಬರು ಎಂಜಿನಿಯರ್ ನಿವೃತ್ತಿಯಾಗಿದ್ದರಿಂದ ಇರುವವರ ಕಾರ್ಯಭಾರ ಹೆಚ್ಚಾಗಿದೆ. ಈ ಬಗ್ಗೆ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರು ಉಡುಪಿ ಹಾಗೂ ಕಾರ್ಕಳ ಉಪ ವಿಭಾಗದಿಂದ ನಿಯೋಜನೆಗೆ ಸೂಚಿಸಿದ್ದಾರೆ. ಸದ್ಯಕ್ಕೆ ಸಮಸ್ಯೆಯಾಗದಂತೆ ಪ್ರಭಾರ ನೆಲೆಯಲ್ಲಿ ಜವಾಬ್ದಾರಿಯನ್ನು ವಹಿಸಿ ಕೊಡಲಾಗಿದೆ. ಖಾಲಿ ಹುದ್ದೆ ಭರ್ತಿಯಾದರೆ ಸಮಸ್ಯೆ ಪರಿಹಾರವಾಗಲಿದೆ. –ರಾಜ್‌ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜನಿಯರ್‌, ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ಉಪ ವಿಭಾಗ ಬೈಂದೂರು

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.