ಕೆಎಸ್‌ಆರ್‌ಟಿಸಿ: ಶಾಸ್ತ್ರಿ ಸರ್ಕಲ್‌ ಪ್ರದಕ್ಷಿಣೆ ಖಾತರಿ!

ಅನವಶ್ಯಕ ಸುತ್ತಾಟದಿಂದಾಗಿ ಸಮಯ, ಡೀಸೆಲ್‌ ಎಲ್ಲದರ ಮೇಲೂ ಪರಿಣಾಮ

Team Udayavani, Dec 23, 2020, 5:09 AM IST

ಕೆಎಸ್‌ಆರ್‌ಟಿಸಿ: ಶಾಸ್ತ್ರಿ ಸರ್ಕಲ್‌ ಪ್ರದಕ್ಷಿಣೆ ಖಾತರಿ!

ಕುಂದಾಪುರ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಹೋಗಬೇಕಾದ ಬಸ್‌ಗಳು ಶಾಸ್ತ್ರಿ ಸರ್ಕಲ್‌ನ ಫ್ಲೈ ಓವರ್‌ಗೆ ಸುತ್ತು ಹಾಕಬೇಕಾದ್ದು ಅನಿವಾರ್ಯ ಎಂಬ ಸ್ಥಿತಿ ಬಂದಿದೆ.

ಫ್ಲೈ ಓವರ್‌ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅದರ ಜತೆಗೆ ಅಂಡರ್‌ಪಾಸ್‌, ಸಂಪರ್ಕ ಕೂಡು ರಸ್ತೆ ಇತ್ಯಾದಿ ಕಾಮಗಾರಿಗಳೂ ನಡೆಯುತ್ತಿವೆ. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಪ್ರವೇಶಿಕೆ ಸ್ಥಳದಲ್ಲಿಯೇ ಫ್ಲೈ ಓವರ್‌ನ ಇಳಿರಸ್ತೆ ಮುಕ್ತಾಯವಾಗುವ ಕಾರಣ ಅಲ್ಲಿ ಇನ್ನೊಂದು ರಸ್ತೆಯ ಪ್ರವೇಶಕ್ಕೆ ಅವಕಾಶ ನೀಡಿಲ್ಲ. ಪರಿಣಾಮ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಪ್ರವೇಶಕ್ಕೆ ಮೈಲಾರ ಸುತ್ತಿ ಕೊಂಕಣಕ್ಕೆ ಬಂದಂತೆ ಆಗುತ್ತದೆ.

ಮಂಗಳೂರು, ಉಡುಪಿ ಕಡೆಯಿಂದ ಬರುವ ಬಸ್‌ಗಳು ಎಪಿಎಂಸಿವರೆಗೆ ಹೋಗಿ ಅಲ್ಲಿ ಸುತ್ತು ಹಾಕಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣವನ್ನು ಪ್ರವೇಶಿಸಬೇಕು. ಕೆಎಸ್‌ಆರ್‌ಟಿಸಿ ನಿಲ್ದಾಣದಿಂದ ಬೈಂದೂರು, ಕಾರವಾರ, ಹುಬ್ಬಳ್ಳಿ ಕಡೆಗೆ ಹೋಗುವ ಬಸ್‌ಗಳು ಮತ್ತೆ ಕುಂದಾಪುರ ನಗರದ ಕಡೆಗೆ ಬಂದು ಶಾಸ್ತ್ರಿ ಸರ್ಕಲ್‌ ವರೆಗೆ ಬಂದು ಅಲ್ಲಿ ಫ್ಲೈ ಓವರ್‌ ಅಡಿಯಿಂದ ಸರ್ವಿಸ್‌ ರಸ್ತೆಯಲ್ಲಿ ಸಾಗಿ ಬೈಂದೂರು ಮಾರ್ಗವನ್ನು ಸೇರಿಕೊಳ್ಳಬೇಕು. ಇದರಿಂದಾಗಿ ಅನವಶ್ಯ ಸುತ್ತಾಟ ನಡೆಯುತ್ತಿದೆ. ಇದು ಸಮಯ, ಡೀಸೆಲ್‌ ಎಲ್ಲದರ ಮೇಲೂ ಪರಿಣಾಮ ಬೀರುತ್ತದೆ.

ಎಪಿಎಂಸಿ ಬಳಿ ಈಗ ರಸ್ತೆ ಮುಕ್ತವಾಗಿದ್ದು ಮುಂದಿನ ದಿನಗಳಲ್ಲಿ ರಸ್ತೆ ಕಾಮಗಾರಿ ಪೂರ್ಣವಾದಾಗ ಅಲ್ಲೂ ಬೇಲಿ ಹಾಕಿದರೆ ಸಂಗಂವರೆಗೆ ಹೋಗಿ ಬರಬೇಕಾಗುತ್ತದೆ. ಆಗ ಸಂಗಂನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಲಿದೆ. ಸುತ್ತಾಟ ಅನಿವಾರ್ಯ ಈ ಸಮಸ್ಯೆ ಕುರಿತು “ಉದಯವಾಣಿ’ ಈ ಹಿಂದೆಯೇ ಬೆಳಕು ಚೆಲ್ಲಿತ್ತು. ಪ್ರಸ್ತುತ ಸರ್ವಿಸ್‌ ರಸ್ತೆಯೇ ಮುಖ್ಯ ಹೆದ್ದಾರಿ ಆದ ಕಾರಣ ಏಕಮುಖ ಸಂಚಾರವಿದೆ. ಈ ಕಾರಣದಿಂದ ಸುತ್ತಾಟ ಅನಿವಾರ್ಯ. ಫ್ಲೈಓವರ್‌ ಕೆಲಸ ಆದ ಬಳಿಕ ಸರ್ವಿಸ್‌ ರಸ್ತೆಯಲ್ಲಿ ಏಕಮುಖ ಸಂಚಾರ ಕಾನೂನು ಇರುವುದಿಲ್ಲ. ಹಾಗಾಗಿ ಸಮಸ್ಯೆಯಾಗದು ಎನ್ನುವ ನಿರೀಕ್ಷೆ ಇಡಲಾಗಿದೆ.

ಬಸ್‌ ನಿಲ್ದಾಣದಿಂದ ಹೈವೇಗೆ ನೇರ ಸಂಪರ್ಕ ನೀಡಿದರೆ ಅಪಘಾತ ಆಗುವ ಸಂಭವ ಕೂಡ ಇದೆ. ಆದ್ದರಿಂದ ಈ ಕುರಿತಾಗಿ ಪರಿಣತರಿಂದ ವರದಿ ಸಿದ್ಧಪಡಿಸಿಯೇ ವ್ಯವಸ್ಥೆ ಸುಗಮ ಮಾಡಬೇಕಿದೆ. ಹೆದ್ದಾರಿ ಕಾಮಗಾರಿಯ ವೇಗ ಚುರುಕುಗೊಳಿಸಬೇಕಿದೆ. ಬಸ್ರೂರು ಮೂರುಕೈ, ವಿನಾಯಕ ಬಳಿ, ಗಾಂಧಿ ಮೈದಾನ ಬಳಿ, ಕೆಎಸ್‌ಆರ್‌ಟಿಸಿ ಬಳಿ ಕಾಮಗಾರಿ ಬಾಕಿಯಿದ್ದು ಇವಿಷ್ಟೂ ಕಡೆ ಏಕಕಾಲದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳದೇ ಇದ್ದರೆ ಗುತ್ತಿಗೆದಾರ ಕಂಪನಿ ಮಾರ್ಚ್‌ನಲ್ಲಿ ಮುಗಿಸುತ್ತೇವೆ ಎಂದು ನೀಡಿದ ಭರವಸೆ ಸುಳ್ಳಾಗಲಿದೆ. ಮತ್ತೂಮ್ಮೆ ಟ್ರೋಲ್‌ ಆಗುವ ಸಂಭವ ಇದೆ. ಯಾವ ಮಾರ್ಚ್‌ ಎಂದೇ ಹೇಳದ ಕಾರಣ ಭರವಸೆ ನೀಡಿದ ಸಂಸದರಂತೂ ಪಾರಾಗಬಹುದು.

ಸರಿಪಡಿಸಲಿ
ಬಸ್‌ ನಿಲ್ದಾಣದಿಂದ ಸರ್ವಿಸ್‌ ರಸ್ತೆ ಮೂಲಕ ಹೆದ್ದಾರಿಗೆ ಸಂಪರ್ಕ ಕೊಡಲಿ. ಸುತ್ತು ಬಳಸು ರಸ್ತೆ ಅನವಶ್ಯವಾಗಿದೆ. 
– ಬಸಪ್ಪ ಲಮಾಣಿ, ಕೆಎಸ್‌ಆರ್‌ಟಿಸಿ ಚಾಲಕ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.