Kundapura: 43 ಕೆರೆಗಳ ಬಳಿ ವೀರ ಯೋಧರ ಶಿಲಾಫಲಕ ಅನಾವರಣ

ಅಮೃತ ಸರೋವರಗಳ ಬಳಿ ಶಿಲಾಫಲಕ ಅನಾವರಣಗೊಳ್ಳಲಿದೆ.

Team Udayavani, Aug 15, 2023, 12:12 PM IST

Kundapura: 43 ಕೆರೆಗಳ ಬಳಿ ವೀರ ಯೋಧರ ಶಿಲಾಫಲಕ ಅನಾವರಣ

ಕುಂದಾಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಮಾರೋಪದ ಭಾಗವಾಗಿ “ಮೇರಿ ಮಾಟಿ ಮೇರಾ ದೇಶ್‌’ (ನನ್ನ ಮಣ್ಣು ನನ್ನ ದೇಶ) ಅಭಿಯಾನವನ್ನು ಹಮ್ಮಿಕೊಂಡಿದ್ದು, ಅದರಂತೆ ಗ್ರಾಮಗಳಲ್ಲಿ ಅಭಿವೃದ್ಧಿಪಡಿಸಿದ ಅಮೃತ ಸರೋವರಗಳ ಬಳಿ ವೀರ ಯೋಧರ ಸ್ಮರಣಾರ್ಥ ಶಿಲಾಫಲಕ ಸ್ಥಾಪನೆ ನಡೆಯುತ್ತಿದೆ. ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಒಟ್ಟು 43 ಅಮೃತ ಸರೋವರಗಳ ಬಳಿ ಶಿಲಾಫಲಕ ಅನಾವರಣಗೊಳ್ಳಲಿದೆ.

ಕುಂದಾಪುರ ತಾಲೂಕಿನ 45 ಗ್ರಾ.ಪಂ. ಪೈಕಿ 20 ಗ್ರಾ.ಪಂ.ಗಳ 30 ಹಾಗೂ ಬೈಂದೂರು ತಾಲೂಕಿನ 15 ಗ್ರಾ.ಪಂ. ಪೈಕಿ 9 ಗ್ರಾ.ಪಂ.ಗಳ 13 ಅಮೃತ ಸರೋವರಗಳ ಬಳಿ ಈ ವೀರ ಯೋಧರ ಶಿಲಾಫಲಕ ಅನಾವರಣಗೊಳ್ಳಲಿದೆ. ಈ ಶಿಲಾಫಲಕದಲ್ಲಿ “ಮಾತೃಭೂಮಿಯ ಘನತೆ ಹಾಗೂ ಸ್ವಾತಂತ್ರ್ಯ ಕಾಪಾಡಲು ತಮ್ಮ ಪ್ರಾಣತ್ಯಾಗ ಮಾಡಿದ ವೀರರಿಗೆ ಪ್ರಣಾಮಗಳು’ ಎನ್ನುವುದಾಗಿ ವೀರ ಯೋಧರಿಗೆ ಗೌರವ ಸೂಚಿಸುವ ಬರವಣಿಗೆಯಿದ್ದು, ಇದರೊಂದಿಗೆ ಬಸವಣ್ಣನವರ ವಚನ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂದೇಶವಿದೆ.

ಅಮೃತ ಸರೋವರ ಇಲ್ಲದಿರುವ ಎಲ್ಲ ಗ್ರಾ.ಪಂ. ಗಳಲ್ಲಿಯೂ ಆಯಾಯ ಪಂಚಾಯತ್‌ ಕಟ್ಟಡ, ಶಾಲಾ ಕಟ್ಟಡಗಳ ಬಳಿ ಶಿಲಾಫಲಕ ರಚನೆಯಾಗಲಿದೆ. ಕೆಲವೆಡೆಗಳಲ್ಲಿ ಆ. 14ರಿಂದ ಆರಂಭಗೊಂಡಿದ್ದು, ಇನ್ನು ಕೆಲವು ಪಂಚಾಯತ್‌ಗಳಲ್ಲಿ ಸ್ವಾತಂತ್ರ್ಯ ದಿನವಾದ ಆ. 15ರಂದು ನಡೆಯಲಿದ್ದು, ಆ.30ರ ವೇಳೆಗೆ ಪೂರ್ಣಗೊಳ್ಳಲಿದೆ.

ಕುಂದಾಪುರ: 30 ಕೆರೆ
ಆಲೂರಿನ ತಾರಿಕೊಡ್ಲು ಕೆರೆ, ಕೊಪ್ಪಾಟೆ ಕೆರೆ, ಹೊರ್ನಿ ಕೆರೆ, ಕಾಳಾವರದ ಕಾಮಕೊಡ್ಲು ಮದಗ, ಬಸ್ರೂರಿನ ಹಲವರ ಕೆರೆ, ಬೀಜಾಡಿಯ ಬೆಳ್ಳಂಕಿಕೆರೆ, ನೀರಸ್ವಾಲೆ ಕೆರೆ, ಬೇಳೂರಿನ ಗುಮ್ಮಿಕೆರೆ, ಚಿತ್ತೂರಿನ ಜೆಡ್ಡುಕೆರೆ, ಹಕ್ಲಾಡಿಯ ಅಂಬಲಾಡಿ ಕೆರೆ, ಕರಣಿಕರ ಮನೆ ಕೆರೆ, ನೂಜಾಡಿ ಹೋರಿ ಹೊಂಡದ ಕೆರೆ, ಕುಂದಬಾರಂದಾಡಿಯ ಕುಂದದಗುಡ್ಡೆ ಕೆರೆ, ಯಡಾಡಿ- ಮತ್ಯಾಡಿ ಮದಗ, ಹೊಸಾಡಿನ ಅರಾಟೆ ತೋಪಿನಕೆರೆ, ಇಡೂರು ಕುಂಜ್ಞಾಡಿಯ ಕಮ್ಮಾರಕಲ್ಲು ಕೆರೆ, ಕಟ್‌ಬೆಲ್ತೂ ರಿನ ಹೊಯಿಗೆ ಕೆರೆ, ಮಸಿಕೊಡ್ಲು ಕೆರೆ, ಕಾವ್ರಾಡಿಯ ಕಾಶಿ ಕೆರೆ, ಬಸ್ರೂರಿನ ಕೊಳ್ಕಿ ಕೆರೆ, ಮೊಳಹಳ್ಳಿಯ ಕೋಡೆಕೆರೆ, ಸಿದ್ದಾಪುರದ ಬ್ರಹ್ಮನ ಕೆರೆ, ತಲ್ಲೂರಿನ ಹೊಸ್ಕೆರೆ, ತೆಕ್ಕಟ್ಟೆಯ ಕನ್ನುಕೆರೆ, ವಂಡ್ಸೆಯ ಕುಪ್ಪ ಗಾಣಿಗ ಕೆರೆ, ಆಜ್ರಿಯ ಹೊಳಂದೂರು ಕೆರೆ, ಕಂದಾವರ 2 ಕೆರೆ, ಗುಜ್ಜಾಡಿಯ ಕೆಸಿಡಿಸಿ ಬಳಿ ಹೊಸಕೆರೆ.

ಬೈಂದೂರು : 13 ಕೆರೆ
ಗೋಳಿಹೊಳೆಯ ಕಾಂಬ್ಳಿಕೆರೆ, ನಡುಮನೆ ಕೆರೆ, ಹೇರೂರಿನ ತುಂಬಿಕೆರೆ, ಅಣ್ಣೋಳೆಕೆರೆ, ಕಾಲ್ತೋ ಡಿನ ನೀರ್‌ಕೊಡ್ಲು ಮದಗ, ಮೆಟ್ಟಿನಹೊಳೆ ಕೆರೆ, ಕಿರಿಮಂಜೇಶ್ವರದ ಹಕ್ರೆಮಠ ಕೆರೆ, ನಾಡದ ಬೆಳ್ಳಾಡಿ ಮೇಲ್ಕೆರೆ ಕೆರೆ, ಬಡಾಕೆರೆಯ ಅಂಗನವಾಡಿ ಬಳಿಯ ಕೆರೆ, ಶಿರೂರಿನ ಕುಂಬ್ರಿಕೊಡ್ಲು ಕೆರೆ, ಮರವಂತೆಯ ಗೋರಿಕೆರೆ, ಜಡ್ಕಲ್‌- ಮುದೂರಿನ ಹಳಕಟ್ಟೆ ಕೆರೆ, ಉಪ್ಪುಂದದ ತೆಂಕ ಕೆರೆಗಳ ಬಳಿ ಈ ಶಿಲಾಫಲಕ ಅನಾವರಣಗೊಳ್ಳಲಿದೆ.

ವಿವಿಧ ಕಾರ್ಯಕ್ರಮ ಇದರೊಂದಿಗೆ ದಿಲ್ಲಿಯ ರಾಷ್ಟ್ರೀಯ ಯುದ್ಧ ಸ್ಮಾರಕದ ಬಳಿ ನಿರ್ಮಾಣವಾಗಲಿರುವ “ಅಮೃತ್‌ ವಾಟಿಕಾ’ (ಅಮೃತ ಉದ್ಯಾನ) ಕ್ಕೆ ಪ್ರತೀ ಪಂಚಾಯತ್‌ನಿಂದ ಮಣ್ಣನ್ನು ಸಂಗ್ರಹಿಸಿ ದಿಲ್ಲಿಗೆ ಕಳುಹಿಸುವ ಕಾರ್ಯ, ಪ್ರತೀ ಪಂಚಾಯತ್‌ ಸೂಕ್ತವೆನಿಸಿದ 75 ಗಿಡ ನೆಟ್ಟು ಅಮೃತ ಉದ್ಯಾನವನ ನಿರ್ಮಿಸಬೇಕು. “ಪಂಚ ಪ್ರಾಣ ಪ್ರತಿಜ್ಞಾ’, “ವಸುಧಾ ವಂದನ್‌’ (ಭೂಮಿಗೆ ನಮಸ್ಕಾರ), “ವೀರೋಂಕಾ ವಂದನ್‌’ (ವೀರರಿಗೆ ವಂದನೆ) ಕಾರ್ಯವೂ ಪಂಚಾಯತ್‌ಗಳಲ್ಲಿ ನಡೆಯಲಿದೆ.

ಎಲ್ಲ ಗ್ರಾ.ಪಂ.ಗಳಲ್ಲಿ ಶಿಲಾಫಲಕ
ಒಟ್ಟು 43 ಕೆರೆಗಳ ಬಳಿ ಶಿಲಾಫಲಕ ಅನಾವರಣಗೊಳ್ಳಲಿದೆ. ಅಮೃತ ಸರೋವರ ಇಲ್ಲದ ಗ್ರಾಮಗಳಲ್ಲಿ ಸಾರ್ವಜನಿಕರಿಗೆ ಕಾಣುವಂತೆ ಎಲ್ಲಿಯಾದರೂ ಒಂದು ಕಡೆ ಹಾಕುವಂತೆ ತಿಳಿಸಲಾಗಿದೆ. ಬಹುತೇಕ ಎಲ್ಲ ಕಡೆಗಳಲ್ಲಿ ಆ. 15 ರಂದು ಈ ಕಾರ್ಯ ಆಗಲಿದೆ. ಇದರೊಂದಿಗೆ ಎಲ್ಲ ಗ್ರಾ.ಪಂ.ಗಳಲ್ಲಿ ಮೂಲಭೂತ ಹಕ್ಕುಗಳು, ಕರ್ತವ್ಯಗಳ ಬಗ್ಗೆ ಗ್ರಾಮಸ್ಥರಿಗೆ ಕಾನೂನು ಅರಿವು ಸಹಿತ ವಿವಿಧ ಕಾರ್ಯಕ್ರಮ ನಡೆಯಲಿದೆ.
ಭಾರತಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ,
ಕುಂದಾಪುರ ಹಾಗೂ ಬೈಂದೂರು

ಟಾಪ್ ನ್ಯೂಸ್

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.