ನಿರ್ಮಾಣಗೊಂಡು 10 ವರ್ಷವಾದರೂ ಭವನಕ್ಕಿಲ್ಲ ವಿದ್ಯುತ್‌ ಸಂಪರ್ಕ


Team Udayavani, Aug 10, 2021, 3:45 AM IST

ನಿರ್ಮಾಣಗೊಂಡು 10 ವರ್ಷವಾದರೂ ಭವನಕ್ಕಿಲ್ಲ ವಿದ್ಯುತ್‌ ಸಂಪರ್ಕ

ಅಮಾಸೆಬೈಲು ಪಂ. ವ್ಯಾಪ್ತಿಯ ಕುಮ್ರಿಜೆಡ್ಡುವಿನಲ್ಲಿ  ಸಮುದಾಯ ಭವನವಿದ್ದರೂ ಬಳಸದಂತಹ ಸ್ಥಿತಿ ನಿರ್ಮಾಣವಾಗಿದೆ.  ಸಂಬಂಧಪಟ್ಟ ಇಲಾಖಾಧಿಕಾರಿಗಳು, ಸ್ಥಳೀಯ ಪಂಚಾಯತ್‌ ಗಮನ ಹರಿಸಿ, ಈ ಬಗ್ಗೆ ಕಾರ್ಯೋನ್ಮುಖವಾದರೆ ಇಲ್ಲಿನವರಿಗೆ ಅನುಕೂಲವಾದೀತು.

ಅಮಾಸೆಬೈಲು: ಸರಕಾರದ ಲಕ್ಷಾಂತರ ರೂ. ಅನುದಾನವನ್ನು ವ್ಯಯಿಸಿ ಜನರ ಅನುಕೂಲಕ್ಕಾಗಿ ಸಮುದಾಯ ಭವನಗಳನ್ನು ನಿರ್ಮಿಸುತ್ತಿದ್ದರೂ, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಪಂಚಾಯತ್‌ನ ಬೇಜವ್ದಾರಿತನದಿಂದಾಗಿ ಇದ್ದು ಇಲ್ಲದಂತಾಗುವುದು ಮಾತ್ರ ದುರಂತ. ಇದಕ್ಕೊಂದು ತಾಜಾ ನಿದರ್ಶನ ಅಮಾಸೆಬೈಲು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಮ್ರಿಜೆಡ್ಡುವಿನಲ್ಲಿ 10 ವರ್ಷಗಳ ಹಿಂದೆ ನಿರ್ಮಾಣಗೊಂಡ ಸಮುದಾಯ ಭವನ.

ಅಮಾಸೆಬೈಲು ಪಂಚಾಯತ್‌ ವ್ಯಾಪ್ತಿಯ ಕುಮ್ರಿಜಡ್ಡುವಿನಲ್ಲಿ 10 ವರ್ಷಗಳ ಹಿಂದೆ ನಿರ್ಮಾಣಗೊಂಡ ಸಮುದಾಯ ಭವನಕ್ಕೆ ಇನ್ನೂ ವಿದ್ಯುತ್‌ ಸಂಪರ್ಕವನ್ನೇ ಕಲ್ಪಿಸಿಲ್ಲ. ಇನ್ನು ಈ ಸಮುದಾಯ ಭವನದ ಕಿಟಕಿಯ ಗಾಜು ಒಡೆದು ಹೋಗಿದ್ದು, ಆರಂಭದಲ್ಲೊಮ್ಮೆ ಸುಣ್ಣ – ಬಣ್ಣ ಬಳಿದದ್ದು ಬಿಟ್ಟರೆ ಅಲ್ಲಿಂದೀಚೆಗೆ ಈವರೆಗೆ ಬಣ್ಣ ಬಳಿದಿಲ್ಲ. ಸದ್ಯಕ್ಕಂತೂ ಇಲ್ಲಿ ಯಾವುದೇ ಸಭೆ, ಸಮಾರಂಭಗಳು ನಡೆಸದ ಸ್ಥಿತಿ ಈ ಸಭಾಭವನದ್ದಾಗಿದೆ.

ಬೀದಿ ದೀಪ ಉರಿಯುವುದೇ ಇಲ್ಲ :

ಹೇಳಿ ಕೇಳಿ ಇದು ತೀರಾ ಗ್ರಾಮೀಣ ಪ್ರದೇಶವಾಗಿದ್ದು, ಕಾಡುಪ್ರಾಣಿಗಳು, ಹಾವು ಇನ್ನಿತರ ಜೀವರಾಶಿಗಳ ಅಪಾಯ ಇದ್ದೇ ಇರುತ್ತದೆ. ಆದರೆ ಇಲ್ಲಿಗೆ ಎಷ್ಟೋ ವರ್ಷಗಳ ಹಿಂದೆ ಬೀದಿ ದೀಪ ಅಳವಡಿಸಿದ್ದಾರೆ. ಆದರೆ ಅದೀಗ ಉರಿಯುತ್ತಿಲ್ಲ. ಮಾತ್ರವಲ್ಲದೆ ತುಕ್ಕು ಹಿಡಿದ ಸ್ಥಿತಿಯಲ್ಲಿದೆ.

14 ಕೊರಗ ಕುಟುಂಬ :

ಕುಮ್ರಿಜೆಡ್ಡುವಿನ ಕಾಲನಿಯಲ್ಲಿ ಪರಿಶಿಷ್ಟ ಪಂಗಡದ ಕೊರಗ ಸಮುದಾಯದ 14 ಕುಟುಂಬಗಳು ನೆಲೆಸಿದ್ದು, ಇವರ ಅನುಕೂಲಕ್ಕಾಗಿ ಈ ಸಮುದಾಯ ಭವನವನ್ನು ನಿರ್ಮಿಸಿ ಕೊಡಲಾಗಿತ್ತು. ಆದರೆ ಇದಕ್ಕೆ ಇನ್ನೂ ಕೂಡ ಸರಿಯಾದ ಸವಲತ್ತುಗಳನ್ನು ಕಲ್ಪಿಸದ ಕಾರಣ, ಈ ಸಭಾಭವನವೇ ನಿಷ್ಪ್ರಯೋಜಕವಾಗಿದೆ. ಸುತ್ತಮತ್ತ ಗಿಡಗಂಟಿಗಳೆಲ್ಲ ಬೆಳೆದಿವೆ.

ಬೋರಿದೆ.. ಮೋಟಾರಿಲ್ಲ.. :

ಈ ಕುಮ್ರಿಜೆಡ್ಡು ಕೊರಗ ಕಾಲನಿಯಲ್ಲಿ ಸಮುದಾಯ ಭವನದ ನಿರ್ವಹಣೆ ಮಾತ್ರವಲ್ಲದೆ, ಇನ್ನೂ ಹಲವಾರು ಸಮಸ್ಯೆಗಳು ಪರಿಹಾರಕ್ಕಾಗಿ ಕಾಯುತ್ತಿವೆ. ಅದರಲ್ಲೂ ಪ್ರಮುಖವಾಗಿ ಸುಮಾರು 6 ತಿಂಗಳ ಹಿಂದೆ ಗಿರಿಜನ ಶ್ರೇಯೋಭಿವೃದ್ಧಿ ಇಲಾಖೆಯಿಂದ ಕುಡಿಯುವ ನೀರಿಗಾಗಿ ಕೊಳವೆ ಬಾವಿ ತೋಡಲಾಗಿದೆ. ಆದರೆ ಅದಕ್ಕೆ ಈವರೆಗೆ ಮೋಟಾರು ಪಂಪ್‌ ಅನ್ನೇ ಅಳವಡಿಸಿಲ್ಲ. ಮಾತ್ರವಲ್ಲ ಅದಕ್ಕೂ ವಿದ್ಯುತ್‌ ಸಂಪರ್ಕ ಒದಗಿಸಿಲ್ಲ. ಈಗ ಮಳೆಗಾಲವಾದ್ದರಿಂದ ಅಷ್ಟೊಂದು ಅಗತ್ಯವಿಲ್ಲದಿದ್ದರೂ, ಬೇಸಿಗೆ ಆರಂಭವಾದ ತತ್‌ಕ್ಷಣ ಮೋಟಾರಿನ ಅಗತ್ಯವಿದೆ. ಇನ್ನೂ ಈ ಕಾಲನಿಯವರಿಗಾಗಿ ನಿರ್ಮಿಸಿದ ಕುಡಿಯುವ ನೀರಿನ ಟ್ಯಾಂಕ್‌ಗೆ ನೀರಿನ ಸಂಪನ್ಮೂಲವನ್ನೇ ಒದಗಿಸಿಲ್ಲ.

ಯಾವುದೇ ಕಾಳಜಿಯಿಲ್ಲ  :

ಕುಮ್ರಿಜೆಡ್ಡುವಿನ ಕೊರಗ ಕಾಲನಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಬೀದಿ ದೀಪಗಳನ್ನೇ ನೀಡುತ್ತಿಲ್ಲ. ಇನ್ನೂ ಇಲ್ಲಿನ ಸಮುದಾಯ ಭವನವು ನಿರ್ಮಾಣಗೊಂಡು ದಶಕ ಕಳೆದರೂ ಇನ್ನೂ ವಿದ್ಯುತ್‌ ಸೌಕರ್ಯ ನೀಡಿಲ್ಲ. ಸ್ಥಳೀಯಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಇಲ್ಲಿನ ಜನರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಯಾವುದೇ ಸೌಲಭ್ಯವನ್ನು ಒದಗಿಸುವ ಗೋಜಿಗೆ ಹೋಗಿಲ್ಲ. ಈ ಕುಮ್ರಿಜೆಡ್ಡು ಕಾಲನಿಯ ಬಗೆಗಿನ ನಿರ್ಲಕ್ಷé ಸರಿಯಲ್ಲ. – ಆನಂದ ಕಾರೂರು, ದಲಿತ ಮುಖಂಡರು

ಪರಿಹಾರಕ್ಕೆ ಪ್ರಯತ್ನ:

ಕುಮ್ರಿಜೆಡ್ಡುವಿನ ಕೊರಗ ಕಾಲನಿಯ ಮೂಲ ಸೌಕರ್ಯಗಳ ಕೊರತೆ ಬಗ್ಗೆ ಗಮನದಲ್ಲಿದ್ದು, ಈ ಬಗ್ಗೆ ಪಂಚಾಯತ್‌ನಿಂದ ಸಾಧ್ಯವಾದಷ್ಟರ ಮಟ್ಟಿಗೆ ಪರಿಹರಿಸಲು ಪ್ರಯತ್ನಿಸಲಾಗುವುದು. – ಚಂದ್ರಶೇಖರ್‌ ಶೆಟ್ಟಿ, ಅಧ್ಯಕ್ಷರು, ಅಮಾಸೆಬೈಲು ಗ್ರಾ.ಪಂ.

 

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.