ಪಂಚಾಯತ್‌ ಮಟ್ಟದಲ್ಲಿ ನಿರ್ವಹಣೆ ಕೊರತೆ; ಸೊರಗುತ್ತಿವೆ ನೂರಾರು ಅಣೆಕಟ್ಟುಗಳು

ಉಭಯ ಜಿಲ್ಲಾಧಿಕಾರಿಗಳಿಂದ ಕ್ರಮ ಕೈಗೊಳ್ಳುವ ಭರವಸೆ

Team Udayavani, Nov 29, 2020, 5:20 AM IST

ಪಂಚಾಯತ್‌ ಮಟ್ಟದಲ್ಲಿ ನಿರ್ವಹಣೆ ಕೊರತೆ; ಸೊರಗುತ್ತಿವೆ ನೂರಾರು ಅಣೆಕಟ್ಟುಗಳು

ಕೋಟ: ರಾಜ್ಯದಲ್ಲಿ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡದ ನೂರಾರು ಕಿಂಡಿ ಅಣೆಕಟ್ಟುಗಳು ಗ್ರಾಮ ಪಂಚಾಯತ್‌ ಮಟ್ಟದಲ್ಲಿದ್ದು, ನಿರ್ವಹಣೆ ಕೊರತೆಯಿಂದ ಬಳಲುತ್ತಿವೆ. ಇದರಿಂದಾಗಿ ರೈತರು ತಮ್ಮ ಬೆಳೆಗೆ ನೀರುಣಿಸಲು ಪರದಾಡುವಂತಾಗಿದೆ.

ಸಣ್ಣ ನೀರಾವರಿ ಇಲಾಖೆಯ ತನ್ನ ವ್ಯಾಪ್ತಿಯಲ್ಲಿರುವ ಕಿಂಡಿ ಅಣೆಕಟ್ಟುಗಳನ್ನು ಪ್ರತೀ ವರ್ಷವೂ ನಿರ್ವಹಣೆ ಮಾಡುತ್ತದೆ. ಅದಕ್ಕಾಗಿ ಅನುದಾನ ಕಾದಿರಿಸಿಕೊಂಡಿದೆ. ಆದರೆ ಇಲಾಖೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾ.ಪಂ. ಮಟ್ಟದಲ್ಲಿ ಕಿಂಡಿ ಅಣೆಕಟ್ಟುಗಳಿವೆ. ಅವುಗಳನ್ನು ಸ್ಥಳೀಯಾಡಳಿತ (ಪಂಚಾಯತ್‌)ಗಳು ಹಲಗೆ ಅಳವಡಿಕೆ ಸೇರಿದಂತೆ ಸೂಕ್ತವಾಗಿ ನಿರ್ವಹಿಸಿದರೆ ರೈತರ ಬೆಳೆಗಳಿಗೆ ಅನುಕೂಲವಾಗಲಿದೆ. ಆದರೆ ಆ ಕೆಲಸವಾಗುತ್ತಿಲ್ಲ ಎಂಬುದು ರೈತರ ದೂರು.

ಉದ್ಯೋಗ ಖಾತ್ರಿ ಯೋಜನೆ
ಪ್ರಸ್ತುತ ಕಾರ್ಮಿಕರನ್ನು ನಿಯೋಜಿಸಿ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಲು ಕನಿಷ್ಠ 5ರಿಂದ 8 ಸಾವಿರ ರೂ. ವೆಚ್ಚವಾಗುತ್ತದೆ. ಆದರೆ ಇದಕ್ಕಾಗಿ ಪಂಚಾಯತ್‌ಗಳು ಅನುದಾನವನ್ನು ಮೀಸಲು ಇಡುವುದಿಲ್ಲ. ಕಟ್ಟು ಅಳವಡಿಸಲು ಹಲಗೆ ಇತ್ಯಾದಿ ಪೂರಕ ಸಾಮಗ್ರಿಗಳ ಖರೀದಿಗೂ ಅನುದಾನವಿರುವುದಿಲ್ಲ. ಆದ ಕಾರಣ ನಿರ್ವಹಣೆ ಹೊಣೆ ವಹಿಸಿಕೊಳ್ಳುವುದಿಲ್ಲ ಎಂಬುದು ಹೆಚ್ಚಿನ ಬೆಳೆಗಾರರ ಅಭಿಪ್ರಾಯ.

ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣವಾದ ಕಿಂಡಿ ಅಣೆಕಟ್ಟುಗಳಿಗೆ ಮಾತ್ರ ಅದೇ ಯೋಜನೆಯಡಿ ನಿರ್ವಹಣೆಗೆ ಅವಕಾಶವಿದೆ. ಆದರೆ ಬೇರೆ ಯೋಜನೆಯಡಿ ನಿರ್ಮಾಣವಾದವುಗಳನ್ನು ಯಾರೂ ಕೇಳದಂತಾಗಿದೆ. ಕೆಲವು ಕಡೆಗಳಲ್ಲಿ ನೀರಿಗಾಗಿ ಕೃಷಿಕರು ತಾವೇ ವಂತಿಗೆ ಹಾಕಿ ಅಥವಾ ಸಂಘ-ಸಂಸ್ಥೆಗಳ ಸಹಾಯದಿಂದ ನಿರ್ವಹಣೆ ಮಾಡುತ್ತಾರೆ. ಕೆಲವೆಡೆ ಪಂಚಾಯತ್‌ಗಳು ಅಲ್ಪ ಸಹಕಾರ ನೀಡುತ್ತವೆ. ಅದನ್ನು ಹೊರತು ಪಡಿಸಿದಂತೆ ಯಾವ ಸಹಕಾರವೂ ಲಭ್ಯವಾ ಗುತ್ತಿಲ್ಲ ಎಂಬುದು ರೈತರ ಬೇಸರದ ನುಡಿ.

ಅಂತರ್ಜಲ ವೃದ್ಧಿ, ಕೃಷಿಗೆ ಪೂರಕ
ಚಿಕ್ಕ ತೋಡು, ಕಿರು ಹೊಳೆಗಳಿಗೆ ಕಟ್ಟ ಹಾಕಿ ನೀರು ಸಂಗ್ರಹಿಸಿದರೆ ಅಂತರ್ಜಲ ವೃದ್ಧಿಗೆ ಅನುಕೂಲವಾಗುತ್ತದೆ. ಹಿಂಗಾರಿನ ಕೃಷಿ, ತೋಟಗಾರಿಕೆಗೆ ಸಹಾಯವಾಗುತ್ತದೆ. ಬಾವಿ, ಕೆರೆಗಳಲ್ಲಿ ನೀರಿನ ಮಟ್ಟ ಏರಿಕೆ ಯಾಗಿ ಭೂಮಿಯ ತೇವಾಂಶ ಹೆಚ್ಚುತ್ತದೆ. ಹಾಗಾಗಿ ಎಲ್ಲ ಅಣೆಕಟ್ಟುಗಳ ನಿರ್ವಹಣೆಗೆ ಪಂಚಾಯತ್‌ಗಳು ಆಸಕ್ತಿಯನ್ನು ತೋರಬೇಕು. ಈ ಸಂಬಂಧ ಪಂಚಾಯತ್‌ಗಳಿಗೆ ಜಿಲ್ಲಾಡಳಿತ ಆದೇಶ ನೀಡಬೇಕು ಎನ್ನುವ ಅಭಿಪ್ರಾಯ ರೈತರದು.

ಇದು ಅತ್ಯಂತ ಸೂಕ್ತ ವಾದ ಸಲಹೆಯಾಗಿದ್ದು, ಎಲ್ಲ ಗ್ರಾ.ಪಂ.ಗಳು ತಮ್ಮ ವ್ಯಾಪ್ತಿಯ ಸಣ್ಣ ನೀರಾವರಿ ಇಲಾಖೇತರ ಕಿಂಡಿ ಅಣೆಕಟ್ಟುಗಳನ್ನು ನಿರ್ವಹಣೆ ಮಾಡುವಂತೆ ಜಿ.ಪಂ. ಸಿಇಒ ಮೂಲಕ ನಿರ್ದೇಶನ ನೀಡಲಾಗುವುದು.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಕಿಂಡಿ ಅಣೆಕಟ್ಟುಗಳ ನಿರ್ವಹಣೆ ಅತ್ಯಂತ ಅಗತ್ಯ. ದ.ಕ. ಜಿಲ್ಲೆಯ ಪ್ರತೀ ಗ್ರಾ.ಪಂ. ತನ್ನ ವ್ಯಾಪ್ತಿಯ ಕಿಂಡಿ ಅಣೆಕಟ್ಟುಗಳ ನಿರ್ವಹಣೆ ನಡೆಸಬೇಕು ಎನ್ನುವುದಾಗಿ ಜಿ.ಪಂ. ಸಿಇಒ ಮೂಲಕ ಪ್ರತೀ ಗ್ರಾಮ ಪಂಚಾಯತ್‌ಗೂ ನಿರ್ದೇಶನ ನೀಡುತ್ತೇನೆ.
– ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.