ಕೋಟೇಶ್ವರದಲ್ಲಿ ಪ್ರಯಾಣಿಕರ ತಂಗುದಾಣದ ಕೊರತೆ
ಬಸ್ಗಾಗಿ ಮರಗಳಡಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ
Team Udayavani, Sep 16, 2020, 10:32 PM IST
ಸರಿಯಾದ ಬಸ್ ನಿಲ್ದಾಣ ಇಲ್ಲದಿರುವ ಕೋಟೇಶ್ವರ ಪೇಟೆ .
ಕೋಟೇಶ್ವರ: ಧಾರ್ಮಿಕ, ಶೈಕ್ಷಣಿಕ ಹಾಗೂ ವ್ಯಾಪಾರಿ ಕೇಂದ್ರವಾಗಿ ಬೆಳೆಯುತ್ತಿರುವ ಕೋಟೇಶ್ವರದಲ್ಲೊಂದು ಸಕಲ ಸೌಕರ್ಯಗಳನ್ನು ಒಳಗೊಂಡ ಪೂರ್ಣ ಪ್ರಮಾಣದ ಬಸ್ ನಿಲ್ದಾಣದ ಕೊರತೆ ಇದೆ. ಇದರಿಂದ ಪ್ರಯಾಣಿಕರು ಆಶ್ರಯಕ್ಕಾಗಿ ಮರಗಳಡಿ ನಿಲ್ಲಬೇಕಾದ ಪರಿಸ್ಥಿತಿ ಇದೆ.
ಬೀಜಾಡಿ, ಗೋಪಾಡಿ, ಕಟ್ಕೇರೆ, ಕಾಳಾವರ, ಕುಂಭಾಶಿ, ಪರಿಸರದ ಗ್ರಾಮಸ್ಥರಿಗೆ ಕೋಟೇಶ್ವರ ಎಲ್ಲ ವ್ಯವಹಾರಗಳಿಗೆ ಕೇಂದ್ರ ಸ್ಥಾನವಾಗಿದೆ. ವಿವಿಧ ಕಾರಣಗಳಿಗೆ ಇಲ್ಲಿಗೆ ಆಗಮಿಸುವ ಇತರ ಜಿಲ್ಲೆಗಳ ಮಂದಿ ಇಲ್ಲಿ ಪರಿಪೂರ್ಣ ಬಸ್ ನಿಲ್ದಾಣದ ಕೊರತೆಯಿಂದ ಇತರೆಡೆ ಬಸ್ಗಾಗಿ ಆಶ್ರಯಿಸಬೇಕಾದ ಪರಿಸ್ಥಿತಿ ಇದೆ.
ಸಾರ್ವಜನಿಕ ಶೌಚಾಲಯದ ಕೊರತೆ
ಇಲ್ಲಿ ಸಾರ್ವಜನಿಕ ಶೌಚಾಲಯವೂ ಇಲ್ಲ. ಕುಡಿಯುವ ನೀರಿನ ವ್ಯವಸ್ಥೆಯ ಕೊರತೆ ಈಗ ಇರುವ ಬಸ್ ತಂಗುದಾಣದಲ್ಲಿ ಕಂಡು ಬಂದಿದ್ದು ನಿಲ್ದಾಣದ ಒಂದು ಪಾರ್ಶ್ವದಲ್ಲಿ ಬೇಸಗೆ ಹಾಗೂ ಮಳೆಗಾಲದಲ್ಲಿ ಬಸ್ ಕಾಯಲು ಸೂಕ್ತ ವ್ಯವಸ್ಥೆಯಿಲ್ಲದೇ ಬ್ಯಾಂಕ್ ಬಳಿ ಕಾದು ನಿಲ್ಲಬೇಕಾದ ಅನಿವಾರ್ಯತೆ ಇದೆ.
ಸೂಕ್ತ ನಿಲ್ದಾಣ ಅಗತ್ಯ
ಸುಮಾರು ಇಪ್ಪತ್ತು ಸಾವಿರ ಜನಸಂಖ್ಯೆ ಹೊಂದಿರುವ ಕೋಟೇಶ್ವರದಲ್ಲಿ ಸಮರ್ಪಕ ಬಸ್ ನಿಲ್ದಾಣ ಇಲ್ಲದಿರುವುದು ಪ್ರಯಾಣಿಕರ ಪಾಲಿಗೆ ಕಿರಿಕಿರಿ ಉಂಟುಮಾಡಿದೆ. ಬಹೋಪಯೋಗಿ ಬಸ್ ನಿಲ್ದಾಣ ನಿರ್ಮಾಣದ ಬಗ್ಗೆ ಗ್ರಾಮಸ್ಥರು ಸಂಬಂಧಪಟ್ಟವರನ್ನು ಆಗ್ರಹಿಸಿದ್ದಾರೆ.
ಪ್ರತ್ಯೇಕ ಸ್ಥಳವಿಲ್ಲ
ಕೋಟೇಶ್ವರದಲ್ಲಿ ಪ್ರತ್ಯೇಕ ಬಸ್ ತಂಗುದಾಣ ನಿರ್ಮಿಸಲು ಸ್ಥಳಾವಕಾಶವಿಲ್ಲ . ಇರುವ ವ್ಯವಸ್ಥೆ ಬಳಸಿ ವಿಸ್ತರಿಸಿ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ಇದಕ್ಕೆ ಪೂರಕವಾಗಿ ಗ್ರಾ. ಪಂ. ಬಳಿ ಬಸ್ ತಂಗುದಾಣ ನಿರ್ಮಿಸುವ ಬಗ್ಗೆ ತೀರ್ಮಾನವಾಗಿದ್ದರೂ ಕಾನೂನಿನ ಚೌಕಟ್ಟಿನಲ್ಲಿ ಅದು ಕಷ್ಟಸಾಧ್ಯವಾಗಿದ್ದು ಇರುವ ವ್ಯವಸ್ಥೆಯಲ್ಲೇ ಅಚ್ಚುಕಟ್ಟಾಗಿ ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಸೌಕರ್ಯ ಒದಗಿಸುವ ಪ್ರಯತ್ನ ಮಾಡಲಾಗುವುದು.
-ತೇಜಪ್ಪ ಕುಲಾಲ್, ಪಿಡಿಒ, ಕೋಟೇಶ್ವರ ಗ್ರಾ.ಪಂ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ