ಕೋಟೇಶ್ವರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗಕ್ಕೆ ಕೊಠಡಿಗಳದ್ದೇ ಕೊರತೆ
Team Udayavani, Sep 19, 2021, 3:30 AM IST
ಕೋಟೇಶ್ವರ: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಒಂದೇ ಸೂರಿನಡಿ ಹಿ.ಪ್ರಾ. ಶಾಲೆ, ಪ್ರೌಢಶಾಲೆ ಹಾಗೂ ಪ.ಪೂ. ಕಾಲೇಜು ಇದ್ದು, ಹಿ.ಪ್ರಾ. ಶಾಲೆಯಲ್ಲಿ 476 ವಿದ್ಯಾರ್ಥಿಗಳಿದ್ದಾರೆ. ಇಷ್ಟೊಂದು ವಿದ್ಯಾರ್ಥಿಗಳಿದ್ದರೂ ಸೌಲಭ್ಯಗಳ ಕೊರತೆ ಶಾಲೆಯನ್ನು ಇನ್ನೂ ಕಾಡುತ್ತಿದೆ.
ಕರ್ನಾಟಕ ಪಬ್ಲಿಕ್ ಸ್ಕೂಲ್ 1906ರಲ್ಲಿ ಆರಂಭಗೊಂಡಿದ್ದು, ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. 1ನೆ ತರಗತಿಯಲ್ಲಿ 2020-21ನೇ ಸಾಲಿನಲ್ಲಿ 56, 2021-22ನೇ ಸಾಲಿನಲ್ಲಿ 84 ವಿದ್ಯಾರ್ಥಿಗಳಿದ್ದಾರೆ. 2ನೇ ತರಗತಿಯಲ್ಲಿ ಕಳೆದ ವರ್ಷ 40, ಈ ಬಾರಿ 57 ವಿದ್ಯಾರ್ಥಿಗಳಿದ್ದಾರೆ. 3ನೇ ತರಗತಿಯಲ್ಲಿ ಹಿಂದಿನ ವರ್ಷ 38, ಈ ಬಾರಿ 52 ವಿದ್ಯಾರ್ಥಿಗಳಿದ್ದಾರೆ. 4ನೇ ತರಗತಿಯಲ್ಲಿ ಈ ಬಾರಿ 39, 5ನೇ ತರಗತಿಯಲ್ಲಿ ಈ ಬಾರಿ 40, 6ನೇ ತರಗತಿಯಲ್ಲಿ ಈ ಬಾರಿ 58, ಹಾಗೂ 7ನೇ ತರಗತಿಯಲ್ಲಿ ಈ ಬಾರಿ 76 ವಿದ್ಯಾರ್ಥಿಗಳಿದ್ದಾರೆ.
2020-21ನೇ ಸಾಲಿನಲ್ಲಿ ಒಟ್ಟು 325 ವಿದ್ಯಾರ್ಥಿಗಳಿದ್ದು, 2021-22ರಲ್ಲಿ 406 ವಿದ್ಯಾರ್ಥಿಗಳಿದ್ದಾರೆ. ಎಲ್.ಕೆ.ಜಿ. ಯಲ್ಲಿ 37 ವಿದ್ಯಾರ್ಥಿಗಳಿದ್ದು, ಯು.ಕೆ.ಜಿ.ಯಲ್ಲಿ 33 ವಿದ್ಯಾರ್ಥಿಗಳಿದ್ದಾರೆ.
ಶಿಥಿಲಗೊಂಡ ಕೊಠಡಿ, ಹೊಸ ಕಟ್ಟಡ ಅಗತ್ಯ:
ಕಟ್ಟಡದ ಒಂದು ಪಾರ್ಶ್ವದ ಗೋಡೆ ಸಂಪೂರ್ಣ ಕುಸಿದು ಬಿದ್ದಿದ್ದು, ಇನ್ನಿತರ ಕೊಠಡಿಗಳು ಬಿರುಕು ಬಿಟ್ಟಿವೆ. ಹಳೆಯ ಕಟ್ಟಡದ ತೆರವಿಗೆ ತಾಂತ್ರಿಕ ಕಾರಣ ಎದುರಾಗಿದ್ದು, ಹೊಸ ಕಟ್ಟಡದ ನಿರ್ಮಾಣಕ್ಕೆ ಅನುದಾನ ಸಾಲದು. 6 ತರಗತಿಗಳ ಕೊಠಡಿಗಳು ದುರ ವಸ್ಥೆಯಲ್ಲಿದ್ದು 4 ಕೊಠಡಿಗಳಲ್ಲಿ ಪಾಠ ನಡೆಸಬೇಕಾಗಿದೆ. ಬಳಕೆಯಲ್ಲಿ ಇರುವ 4 ಕೊಠಡಿಗಳಲ್ಲಿ ಕಚೇರಿ ಕೋಣೆ, ಕಂಪ್ಯೂಟರ್ ರೂಂ, ನಲಿ-ಕಲಿ ತರಗತಿ ಅಲ್ಲದೆ 1ನೇ, 2ನೇ, 3ನೇ ತರಗತಿಯ ಮಕ್ಕಳಿಗೆ ಪಾಠ ಕಲಿಸಬೇಕಾಗಿದೆ.
ಪ್ರೌಢಶಾಲಾ ಜಾಗದಲ್ಲಿ 3 ಕೊಠಡಿ:
ಕೊಠಡಿಗಳ ಕೊರತೆಯಿಂದಾಗಿ ಈಗ ಪ್ರೌಢಶಾಲಾ ಜಾಗದಲ್ಲಿನ ಮೂರು ಕೋಣೆಗಳಲ್ಲಿ ತರಗತಿ ನಡೆಸಲಾಗುತ್ತಿದೆ. ಶಿಥಿಲಗೊಂಡ ಕಟ್ಟಡದ ಹೆಂಚುಗಳು ಹಾರಿಹೋಗಿವೆ. ಪೊದೆಗಳು ಬೆಳೆದು ಶೌಚಾಲಯಕ್ಕೆ ಸಾಗಲು ಪುಟ್ಟಮಕ್ಕಳು ಹರಸಾಹಸಪಡಬೇಕಾಗಿದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕೊಠಡಿ ಗಳ ಕೊರತೆ ನಿಭಾಯಿಸುವಲ್ಲಿ ಇಲಾಖೆ ತುರ್ತು ಕ್ರಮ ಕೈಗೊಳ್ಳಬೇಕಿದೆ.
ಶಿಕ್ಷಕರ ಕೊರತೆ:
1ನೇ ತರಗತಿಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಎ ಮತ್ತು¤ ಬಿ ವಿಭಾಗ ಆರಂಭಿಸಲಾಗಿದೆ. ಪ್ರತೀ ವಿಭಾಗದಲ್ಲೂ ಶಿಕ್ಷಕರ ಕೊರತೆ ಇದ್ದು ಹೆಚ್ಚುವರಿ 5 ಶಿಕ್ಷಕರ ಕೊರತೆ ಕಂಡುಬಂದಿದ್ದು, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಶಿಕ್ಷಕರ ಸಂಖ್ಯೆಯನ್ನು ಹೆಚ್ಚಿಸಬೇಕಾದ ಆದ್ಯತೆ ಇಲಾಖೆ ನೀಡಬೇಕಿದೆ.
ಇಲಾಖೆ ಸೂಕ್ತ ಕ್ರಮ ವಹಿಸಲಿ:
ಶಾಲೆಯ ಪ್ರಾಥಮಿಕ ವಿಭಾಗಕ್ಕೆ ಕೊಠಡಿಗಳ ಕೊರತೆ ಇದೆ. ಹಳೆ ಕಟ್ಟಡದ ಏಲಂ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಕಟ್ಟಡ ಅಪಾಯಕಾರಿ ಸ್ಥಿತಿಯಲ್ಲಿ ಇರುವುದರಿಂದ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಬೇಕು.– ಆನಂದ ಪೂಜಾರಿ, ಎಸ್ಡಿಎಂಸಿ ಅಧ್ಯಕ್ಷ
ಜ ಡಾ| ಸುಧಾಕರ ನಂಬಿಯಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Kundapur: ಬೈಕ್ ಢಿಕ್ಕಿ; ಸ್ಕೂಟರ್ ಸವಾರೆಗೆ ಗಾಯ
Congress;ಪ್ರತಾಪ್ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ
ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ
ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್