ಕ್ವಾರಂಟೈನ್ ಕೇಂದ್ರಗಳಿಗೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ
Team Udayavani, May 17, 2020, 5:54 AM IST
ಕುಂದಾಪುರ: ಸರಕಾರಿ ಕ್ವಾರಂಟೈನ್ ಕೇಂದ್ರಗಳಲ್ಲಿ ಕೆಲ ಮೂಲಸೌಕರ್ಯಗಳಿಲ್ಲ ಎನ್ನುವ ದೂರುಗಳು ಬಂದ ಹಿನ್ನೆಲೆಯಲ್ಲಿ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿಯವರು ಕೆಲ ಕ್ವಾರಂಟೈನ್ ಕೇಂದ್ರಗಳಿಗೆ ಸ್ವತಃ ಭೇಟಿ ನೀಡಿ, ಅಲ್ಲಿ ಮಾಡಲಾದ ವ್ಯವಸ್ಥೆಗಳನ್ನು ಪರಿಶೀಲಿಸಿದರು.
ವಿದೇಶ, ಹೊರ ರಾಜ್ಯದಿಂದ ಬಂದಂತಹ ಬೈಂದೂರು ತಾಲೂಕು ವ್ಯಾಪ್ತಿಯ ಜನರನ್ನು ಬೇರೆ ಬೇರೆ ಕಡೆಗಳಲ್ಲಿ ಸರಕಾರಿ ಕ್ವಾರಂಟೈನ್ ಮಾಡಲಾಗಿದೆ. ಶುಕ್ರವಾರ ಸಂಜೆ ಭೇಟಿ ನೀಡಿದ ಶಾಸಕರು ಕ್ವಾರಂಟೈನ್ನಲ್ಲಿರುವ ಕೆಲ ಜನರೊಂದಿಗೆ ಮಾತನಾಡಿ, ಊಟ, ನೀರು ಇತ್ಯಾದಿ ವ್ಯವಸ್ಥೆಗಳ ಕುರಿತಂತೆ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.
ಅಧಿಕಾರಿಗಳಿಗೆ ಸೂಚನೆ
ಹೊರಗಿನಿಂದ ಬರುವವರಿಗೆ ಉತ್ತಮ ವಸತಿ, ಆಹಾರದ ವ್ಯವಸ್ಥೆ ಮಾಡಬೇಕು. ಯಾವುದೇ ಕೊರತೆಯಾಗದಂತೆ ಆಯಾಯ ಪಂಚಾಯತ್ ಮಟ್ಟದಲ್ಲಿ ಕ್ರಮಕೈಗೊಳ್ಳಬೇಕು ಎಂದು ಇದೇ ವೇಳೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…