ಮಾಲಾಡಿ: ಮೇಯಲು ಬಿಟ್ಟ ದನದ ಮೇಲೆ ಚಿರತೆ ದಾಳಿ
Team Udayavani, Nov 24, 2019, 2:37 PM IST
ತೆಕ್ಕಟ್ಟೆ: ಇಲ್ಲಿನ ತೆಕ್ಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮೇಯಲು ಬಿಟ್ಟ ದನದ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಸಂಭವಿಸಿದೆ.
ಇಲ್ಲಿನ ಪ್ರೇಮಾ ಶೆಡ್ತಿ ಅವರಿಗೆ ಸೇರಿದ ದನದ ಮೇಲೆ ಚಿರತೆ ದಾಳಿ ಮಾಡಿದೆ.
ಕಳೆದ ಹಲವು ದಿನಗಳಿಂದಲೂ ಮಾಲಾಡಿ ಸುತ್ತಮುತ್ತಲ ಪರಿಸರದಲ್ಲಿ ಚಿರತೆ ಸಂಚಾರವಿರುವ ಬಗ್ಗೆ ಸ್ಥಳೀಯ ರು ಆತಂಕ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಅರಣ್ಯ ಇಲಾಖೆ ನಿರ್ಲಕ್ಷ್ಯ ಧೋರಣೆ ತಳೆದಿರುವ ಬಗ್ಗೆ ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.