ಯುವತಿಗೆ ಬಾಲಕಿಯಿಂದ ಜೀವದಾನ

ಬಾರಕೂರಿನ ಚೌಳಿಕೆರೆಗೆ ಉರುಳಿದ ಕಾರಿನಲ್ಲಿದ್ದ ಯುವತಿ ಚೇತರಿಕೆ

Team Udayavani, Jun 23, 2020, 9:30 AM IST

ಯುವತಿಗೆ ಬಾಲಕಿಯಿಂದ ಜೀವದಾನ

ಉಡುಪಿ: ಬಾರಕೂರಿನ ಚೌಳಿಕೆರೆಗೆ ಕಾರು ಉರುಳಿ ಉದ್ಯಮಿ ಸಂತೋಷ್‌ ಶೆಟ್ಟಿ ಅವರು ಮೃತಪಟ್ಟ ಘಟನೆ ರವಿವಾರ ನಡೆದಿತ್ತು. ಅವರ ಜತೆಗಿದ್ದ ಸಂಸ್ಥೆಯ ಉದ್ಯೋಗಿ ಶ್ವೇತಾ ತೀವ್ರವಾಗಿ ಅಸ್ವಸ್ಥರಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಲು ಬಾಲಕಿಯೊಬ್ಬಳು ಸಕಾಲಿಕವಾಗಿ ನೀಡಿರುವ ಪ್ರಥಮ ಚಿಕಿತ್ಸೆಯೇ ಕಾರಣ. ಬಾಲಕಿ ಚಿಕಿತ್ಸೆ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಸಾರ್ವತ್ರಿಕ ಪ್ರಶಂಸೆ ವ್ಯಕ್ತವಾಗುತ್ತಿದೆ.
ಬ್ರಹ್ಮಾವರ ಲಿಟ್ಲರಾಕ್‌ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ನಮನಾ ಅವರು ಯುವತಿಯ ಜೀವರಕ್ಷಕಿ.  ಎನ್ನೆಸ್ಸೆಸ್‌ ಅಧಿಕಾರಿಯಾಗಿರುವ ಹಿರಿಯ
ಉಪನ್ಯಾಸಕಿ ಸವಿತಾ ಎರ್ಮಾಳು -ಕುಮಾರ್‌ ದಂಪತಿಯ ಪುತ್ರಿ ಈಕೆ. ಎನ್‌ಸಿಸಿ ಕೆಡೆಟ್‌ ಆಗಿರುವ ಬಾಲಕಿ ಕಲಿತ ಪ್ರಥಮ ಚಿಕಿತ್ಸೆಯ ಪಾಠ ಈಗ ಸದ್ಬಳಕೆಯಾಗಿದೆ.

ಇದನ್ನೂ ಓದಿ: ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು, ಇನ್ನೋರ್ವ ಮಹಿಳೆ ಗಂಭೀರ

ನಮನಾ ಮಾಡಿದ್ದಿಷ್ಟು
ಕಾರು ನೀರಿಗೆ ಬಿದ್ದ ಕೂಡಲೇ ಸ್ಥಳೀಯ ಯುವಕರು ನೀರಿಗೆ ಧುಮುಕಿ ಗಾಜು ಒಡೆಯುವ ಪ್ರಯತ್ನ ಮಾಡಿದ್ದರು. ಸೆಂಟ್ರಲ್‌ ಲಾಕ್‌ ಆಗಿದ್ದ ಕಾರಣ ಬಾಗಿಲು ತೆರೆಯಲಾಗಲಿಲ್ಲ. ಚಾಲಕ ಸಂತೋಷ್‌ ಶೆಟ್ಟಿ ಸೀಟ್‌ ಬೆಲ್ಟ್ ಧರಿಸಿದ್ದ ಕಾರಣ ಮೇಲೆತ್ತುವುದೂ ಸುಲಭಸಾಧ್ಯವಾಗಿರಲಿಲ್ಲ. ಆದ್ದರಿಂದ ಯುವತಿಯನ್ನು ಮೊದಲು ಮೇಲೆತ್ತಿದರು. ತತ್‌ಕ್ಷಣ ನಮನಾ ಅವರ ಮನಸ್ಸು ಜಾಗೃತವಾಗಿದ್ದು, ಎನ್‌ಸಿಸಿಯಲ್ಲಿ ಕಲಿತ ವಿದ್ಯೆಯನ್ನು ಪ್ರಯೋಗಿಸಿ ನೋಡೋಣ ಎಂದು ಕಾರ್ಯಾಚರಣೆಗಿಳಿದರು. ಮೊದಲಿಗೆ ಯುವತಿಯ ದೇಹ ಸೇರಿದ್ದ ನೀರನ್ನು ಹೊರತೆಗೆಯಲಾಯಿತು. ಎದೆ, ಕೈಕಾಲುಗಳನ್ನು ತಿಕ್ಕಿ ದೇಹವನ್ನು ಪುನಶ್ಚೇತನಗೊಳಿಸಲಾಯಿತು. ಸ್ಥಳೀಯರೂ ಕೈಗೂಡಿಸಿದರು. ಬಳಿಕ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಪ್ರಸ್ತುತ
ಯುವತಿ ಚೇತರಿಸಿಕೊಂಡಿದ್ದಾರೆ. ಸಂತೋಷ್‌ ಅವರನ್ನು ಕಾರಿನಿಂದ ಹೊರತಂದ ಬಳಿಕ ಅವರಿಗೂ ಇದೇ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತಾದರೂ ಉಳಿಸಿ ಕೊಳ್ಳಲಾಗಲಿಲ್ಲ ಎನ್ನುತ್ತಾರೆ ಸ್ಥಳೀಯರು.

ವೈದ್ಯರಿಂದ ಶ್ಲಾಘನೆ
ಬಾಲಕಿ ನಮನಾ ಅವರ ಸಕಾಲಿಕ ಕ್ರಮಕ್ಕೆ ಮಣಿಪಾಲ ಆಸ್ಪತ್ರೆಯ ವೈದ್ಯರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವತಿಗೆ ಪ್ರಥಮ ಚಿಕಿತ್ಸೆ ಲಭಿಸದಿದ್ದರೆ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು ಎನ್ನಲಾಗುತ್ತಿದೆ.

ಹಲವರ ಶ್ರಮ
ಅಪಘಾತ ಸಂಭವಿಸಿದ ತತ್‌ಕ್ಷಣ ಸ್ಥಳೀಯರು ಯುವತಿಯನ್ನು ಕೆರೆಯಿಂದ ಮೇಲೆತ್ತಿ ರಕ್ಷಣೆ ಮಾಡಿದರು. ನಾನು ನನ್ನಿಂದಾದ ಪ್ರಥಮ ಚಿಕಿತ್ಸೆ ನೀಡಿದೆ. ಯುವತಿಯ ಪ್ರಾಣ ಉಳಿಸುವಲ್ಲಿ ಎಲ್ಲರ  ಶ್ರಮವೂ ಇದೆ. ಎನ್‌ಸಿಸಿಯಲ್ಲಿ ತೊಡಗಿಸಿಕೊಂಡಿದ್ದ ಕಾರಣ ನಾನು ಯಾವುದೇ ಅಂಜಿಕೆ ಇಲ್ಲದೆ  ಅವರೊಂದಿಗೆ ಕೈಜೋಡಿಸಿದೆ.
– ನಮನಾ, ಪ್ರಥಮ ಚಿಕಿತ್ಸೆ ನೀಡಿದ ಬಾಲಕಿ

ಇದನ್ನೂ ಓದಿ: ಬಾರ್ಕೂರು ಚೌಳಿಕೆರೆ ಕಾರು ಅಪಘಾತ: ಅಪಾಯವನ್ನೂ ಲೆಕ್ಕಿಸದೇ ಕೆರೆಗೆ ಧುಮುಕಿದ ಅವಳಿ ವೀರರು!

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.