ಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

ಪ್ರತ್ಯೇಕ ಇಡುವುದೇ ಪರಿಹಾರ; ಔಷಧ ಇಲ್ಲದ, ಹರಡುವ ರೋಗ; ಕುಂದಾಪುರ, ಬ್ರಹ್ಮಾವರದಲ್ಲಿ ಅಧಿಕ

Team Udayavani, Sep 30, 2020, 5:39 AM IST

KUDಜಾನುವಾರುಗಳಿಗೆ ಬಂತು ಲುಂಪಿ ಚರ್ಮರೋಗ

ರೋಗಗ್ರಸ್ತ ಜಾನುವಾರುಗಳು

ಕುಂದಾಪುರ: ತಾಲೂಕಿನ ವಿವಿಧೆಡೆ ಜಾನುವಾರುಗಳು ಲುಂಪಿಸ್ಕಿನ್‌ ಎನ್ನುವ ರೋಗದಿಂದ ಬಳಲುತ್ತಿವೆ. ಒಂದೆಡೆ ಚೀನಾದ ಕೊರೊನಾ ಜನರನ್ನು ಕಾಡುತ್ತಿದ್ದರೆ ಇನ್ನೊಂದೆಡೆ ಆಫ್ರಿಕಾದ ಲುಂಪಿ ಸ್ಕಿನ್‌ ಜಾನುವಾರುಗಳನ್ನು ಕಾಡುತ್ತಿದೆ.

ಹರಡುವ ರೋಗ
ಆದಾಯವಿಲ್ಲದೆ ರೈತರು ಸಂಕಷ್ಟ ಪಡುತ್ತಿರು ವಾಗಲೇ ಜಾನುವಾರು ಗಳಿಗೆ ಕಾಯಿಲೆ ಶರವೇಗದಲ್ಲಿ ಹಬ್ಬುತ್ತಿರುವುದು ಚಿಂತೆಗೀಡು ಮಾಡಿದೆ. ಈ ಸಾಂಕ್ರಾಮಿಕ ರೋಗ ತಾಲೂಕಿನಾದ್ಯಂತ ದನಕರುಗಳಿಗೆ ಬಾಧಿಸುತ್ತಿದೆ. ಇದಕ್ಕೆ ನಿರ್ದಿಷ್ಟ ಔಷಧ ಇಲ್ಲದ ಕಾರಣ ಕಾಯಿಲೆಗೆ ತುತ್ತಾಗುವ ದನ ಕರುಗಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧ ನೀಡಲಾಗುತ್ತಿದೆ. ರೋಗಗ್ರಸ್ತ ಜಾನುವಾರನ್ನು ಇತರ ಜಾನುವಾರುಗಳಿಂದ ಪ್ರತ್ಯೇಕಿಸಿ ಇಡಬೇಕಾಗುತ್ತದೆ. ದುರ್ಬಲ ಜಾನುವಾರುಗಳಿಗೆ 3-4 ದಿನದಲ್ಲಿ ಜ್ವರ ಬರುವ ಸಾಧ್ಯತೆಯಿದ್ದು ಆಗ ಪಶುವೈದ್ಯರ ಮೂಲಕ ಚಿಕಿತ್ಸೆ ಅನಿವಾರ್ಯ. ಮೈಮೇಲೆ ಕಜ್ಜಿಗಳು ಬೀಳುವ ಕಾರಣ ಅದರ ಶಮನಕ್ಕೆ ಔಷಧ ಹಚ್ಚಬೇಕಾಗುತ್ತದೆ.

ಹೀಗಿದೆ ಲಕ್ಷಣ
ಕಾಯಿಲೆಗೊಳಗಾದ ಜಾನುವಾರುಗಳು ಮೇವು ತಿನ್ನುವುದಿಲ್ಲ, ಚರ್ಮದ ಒಳಭಾಗದಲ್ಲಿ ವರ್ತುಲಾಕಾರದ ಗುಳ್ಳೆ, ಹಾಲಿನ ಇಳುವರಿ ಕಡಿಮೆ, 3-4 ದಿನದಲ್ಲಿ ತೀವ್ರ ಜ್ವರದಿಂದ ಬಳಲುತ್ತವೆ. ಕೆಲವು ಜಾನುವಾರುಗಳಿಗೆ ಕಾಲು ಬಾವು ಬರುತ್ತದೆ. ಮೇಲೆ ಎದ್ದೇಳಲೂ ಆಗುವುದಿಲ್ಲ.

ಶುಚಿಯಾಗಿಡಬೇಕು
ಉಣ್ಣಿ, ಸೊಳ್ಳೆ, ನೊಣಗಳಿಂದಾಗಿ ಈ ಕಾಯಿಲೆ ಹರಡುತ್ತದೆ. ದನದ ಕೊಟ್ಟಿಗೆಯಲ್ಲಿ ಹೊಗೆ ಹಾಕಿ ನೊಣಗಳು ಬಾರದಂತೆ ನೋಡಿಕೊಳ್ಳಬೇಕು. ಹಟ್ಟಿಯನ್ನು ಫಿನಾಯಿಲ್‌ ಹಾಕಿ ಶುಚಿಯಾಗಿಡಬೇಕು. ರೋಗಪೀಡಿತ ಪ್ರಾಣಿಗಳ ಸಾಗಾಟ ನಿರ್ಬಂಧಿಸಬೇಕು. ಕೃತಕ ಗರ್ಭಧಾರಣೆಗೆ ರೋಗಪೀಡಿತ ಹೋರಿಗಳ ವೀರ್ಯ ಉಪಯೋಗಿಸಬಾರದು. ಅಕಸ್ಮಾತ್‌ ಮರಣ ಹೊಂದಿದಲ್ಲಿ ಕ್ರಿಮಿನಾಶಕ ಸಿಂಪಡಿಸಿ ಹೊಂಡದಲ್ಲಿ ವೈಜ್ಞಾನಿಕವಾಗಿ ಹೂಳಬೇಕು.

15 ದಿನ ಅವಶ್ಯ
ಸದ್ಯಕ್ಕೆ ಇದಕ್ಕೆ ಲಸಿಕೆ ಇಲ್ಲ, ನಿರ್ದಿಷ್ಟ ಲಸಿಕೆ ಲಭ್ಯವಾದರೂ ಕಾಯಿಲೆ ಹತೋಟಿಗೆ ಬರಲು 40 ದಿನ ಬೇಕು. ಗುಳ್ಳೆಗಳಾಗಿ ಒಡೆದರೆ ಅದಕ್ಕೆ ಅರಶಿನ, ಬೇವಿನ ಸೊಪ್ಪನ್ನು ಮೊಸರಿನಲ್ಲಿ ಮಿಶ್ರಣ ಮಾಡಿ ಹಚ್ಚಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಕ್ರಮ ಕೆಲವೆಡೆ ಮಾಡಲಾಗುತ್ತಿದೆ. ಜಾನುವಾರುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗುತ್ತದೆ. ಗುಳ್ಳೆ ವಾಸಿಯಾಗಲು 15 ದಿನಗಳ ಅವಧಿ ಬೇಕಾಗುತ್ತದೆ.

126 ಪ್ರಕರಣ
ಕೇವಲ 25 ದಿನಗಳಲ್ಲಿ ಕುಂದಾಪುರ ತಾಲೂಕಿನಲ್ಲಿ 126 ಪ್ರಕರಣಗಳು ಪತ್ತೆಯಾಗಿವೆ. ಕೆದೂರು, ಹುಣಸೆಮಕ್ಕಿ, ಹಳ್ಳಾಡಿ, ಕಂಡೂÉರು ಭಾಗದಲ್ಲಿ ಅಧಿಕವಿದ್ದು ವಂಡ್ಸೆ ಸೇರಿದಂತೆ ಇತರೆಡೆಯೂ ಸಣ್ಣ ಪ್ರಮಾಣದಲ್ಲಿ ಇದೆ. ಬಹುತೇಕ ಪ್ರಕರಣಗಳಲ್ಲಿ ಜಾನುವಾರುಗಳು ಗುಣಮುಖವಾಗಿವೆ.

ಸಿಬಂದಿ ಕೊರತೆ
ತಾಲೂಕಿನ ಪಶು ಸಂಗೋಪನಾ ಇಲಾಖೆಯಲ್ಲಿ ಸಿಬಂದಿ ಕೊರತೆ ಇದೆ. ಕುಂದಾಪುರ ತಾಲೂಕಿನಲ್ಲಿ ಒಟ್ಟು 27 ಪಶುಪಾಲನಾ ಸಂಸ್ಥೆಗಳಿದ್ದು, ನಿಯೋಜಿಸಲಾದ 106 ಹುದ್ದೆಗಳಲ್ಲಿ ಕೇವಲ 29 ಹುದ್ದೆಯಷ್ಟೇ ಭರ್ತಿಯಾಗಿದೆ. ಈ ಪೈಕಿ 4 ಪಶು ವೈದ್ಯಾಧಿಕಾರಿ, 7 ಹಿರಿಯ ಪಶು ಪಾಲನಾ ಪರಿವೀಕ್ಷಕರ ಹುದ್ದೆಗಳು ಸೇರಿ 77 ಹುದ್ದೆಗಳು ಖಾಲಿಯಿವೆ. ಬಿ ದರ್ಜೆಯ ಹುದ್ದೆಯಲ್ಲಿ 11 ಮಂದಿಯನ್ನು ಹೊರಗುತ್ತಿಗೆ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ. ಕುಂದಾಪುರ ತಾಲೂಕು ಪಶು ಆಸ್ಪತ್ರೆಯಲ್ಲಿ 14 ಹುದ್ದೆಗಳಿದ್ದು, ಇದರಲ್ಲಿ 6 ಮಾತ್ರ ಭರ್ತಿಯಾಗಿದೆ. 8 ಹುದ್ದೆ ಖಾಲಿಯಿದೆ. ಬೈಂದೂರು ಹಾಗು ವಂಡ್ಸೆ ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಹುದ್ದೆ ಮಾತ್ರ ಭರ್ತಿಯಾಗಿದ್ದು, 3 ಹುದ್ದೆಗಳು ಖಾಲಿಯಿವೆ. ಶಂಕರನಾರಾಯಣದಲ್ಲಿ ವೈದ್ಯಾಧಿಕಾರಿ, ಸಹಾಯಕ ಹುದ್ದೆ ಭರ್ತಿಯಾಗಿದ್ದು, 2 ಹುದ್ದೆ ಖಾಲಿಯಿವೆ.

ಸೂಚನೆ
ಇಲಾಖಾ ಪಶು ವೈದ್ಯಾಧಿಕಾರಿಗಳು ಅಗತ್ಯವಿದ್ದಲ್ಲಿ ರೋಗ ಲಕ್ಷಣವಿರುವ ಜಾನುವಾರು ಮಾಲಕರ ಮನೆಗೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ನೀಡಲು ಸೂಚಿಸ ಲಾಗಿದೆ. ಅವಶ್ಯಕತೆ ಇದ್ದಲ್ಲಿ ರೋಗ ಪತ್ತೆಗಾಗಿ ಮಾದರಿಗಳನ್ನು ಇಲಾಖಾ ಪಶು ವೈದ್ಯಾಧಿ ಕಾರಿಗಳ ಮೂಲಕ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳುಹಿಸಬೇಕು. ರೈತರಿಗೆ ಈ ಕಾಯಿಲೆ ಬಗ್ಗೆ ಅರಿವು ಮೂಡಿಸುವ ಬಗ್ಗೆ ಎಲ್ಲ ಗ್ರಾ ಪಂ.ವ್ಯಾಪ್ತಿಗಳಲ್ಲಿ, ಗ್ರಾಮ ಸಭೆಗಳಲ್ಲಿ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ವ್ಯಾಪ್ತಿಗಳಲ್ಲಿ ಮಾಹಿತಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪಶುಪಾಲನಾ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

25 ದಿನದಲ್ಲಿ 126 ಪ್ರಕರಣ
45 ಕಾಯಿಲೆ ಹತೋಟಿಗೆ ಬರಲು ಬೇಕಾದ ದಿನಗಳು
126 ಕುಂದಾಪುರ ತಾ|ನಲ್ಲಿ ಪತ್ತೆ ಆದ ಪ್ರಕರಣಗಳು
27 ಕುಂದಾಪುರ ತಾ|ನಲ್ಲಿ ಇರುವ ಪಶುಪಾಲನ ಸಂಸ್ಥೆಗಳು

ಗುಣಮುಖವಾಗುತ್ತಿವೆ
ಕುಂದಾಪುರ ತಾಲೂಕಿನಲ್ಲಿ ಕಂಡು ಬಂದ ಪ್ರಕರಣಗಳಿಗೆ ಇಲಾಖಾಧಿಕಾರಿಗಳ ಸೂಚನೆಯಂತೆ ಸೂಕ್ತ ಚಿಕಿತ್ಸೆ, ಸಲಹೆ ನೀಡಲಾಗುತ್ತಿದ್ದು ಬಹುತೇಕ ಪ್ರಕರಣಗಳು ಗುಣಮುಖವಾಗಿವೆ.
– ಡಾ| ಸೂರ್ಯನಾರಾಯಣ ಉಪಾಧ್ಯ, ಸಹಾಯಕ ನಿರ್ದೇಶಕರು, ಪಶುಸಂಗೋಪನ ಇಲಾಖೆ

ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.