‘ಅಪೌಷ್ಟಿಕತೆ ದೇಹಕ್ಕೂ ದೇಶಕ್ಕೂ ಶಾಪ’
ಅಪೌಷ್ಟಿಕ ಮಕ್ಕಳ ಹೆತ್ತವರ ಕಾರ್ಯಾಗಾರ
Team Udayavani, Apr 6, 2022, 1:00 PM IST
ಕುಂದಾಪುರ: ಅಪೌಷ್ಟಿಕತೆ ದೇಹಕ್ಕಷ್ಟೇ ಅಲ್ಲ ದೇಶಕ್ಕೂ ಶಾಪ. ಅದಕ್ಕಾಗಿ ಯಾವುದೇ ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ನೋಡಿಕೊಳ್ಳಬೇಕಾದ್ದು ಹೆತ್ತವರ ಕರ್ತವ್ಯ. ಹಾಗಂತ ಅದೆಷ್ಟೋ ಬಾರಿ ಬಡತನವೇ ಮೊದಲಾದ ಕಾರಣಗಳಿಂದ ಪೌಷ್ಟಿಕ ಆಹಾರ ನೀಡಲು ಸಾಧ್ಯವಾಗದ ಪೋಷಕರಿಗೆ ಸರಕಾರವೇ ಒದಗಿಸುತ್ತದೆ. ಪೋಷಣ್ ಅಭಿಯಾನ್ ಮೂಲಕ ಎಲ್ಲ ಗರ್ಭಿಣಿ, ಬಾಣಂತಿ, ಮಗುವಿಗೆ ಪೌಷ್ಟಿಕ ಆಹಾರ, ಅದರ ಮಾಹಿತಿ ನೀಡಲಾಗುತ್ತದೆ ಎಂದು ಉಪ ವಿಭಾಗ ಸಹಾಯಕ ಕಮಿಷನರ್ ಕೆ. ರಾಜು ಹೇಳಿದರು.
ಮಂಗಳವಾರ ಇಲ್ಲಿನ ತಾ.ಪಂ. ಸಭಾಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಡೆದ ಅಪೌಷ್ಟಿಕ ಮಕ್ಕಳ ಹೆತ್ತವರ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಕರಾವಳಿ ಜಿಲ್ಲೆಗಳಲ್ಲಿ ಹೆತ್ತವರಲ್ಲಿ ಸರಿ ಯಾದ ಮಾಹಿತಿ ಇರುವ ಕಾರಣ ಅಪೌಷ್ಟಿಕತೆ ಅಂಶ ಕಡಿಮೆ ಇದೆ. ಇಲ್ಲಿ ಪಡೆದ ಮಾಹಿತಿ ಇನ್ನಷ್ಟು ಕಡೆ ಹೇಳುವ ಮೂಲಕ ಅಪೌಷ್ಟಿಕ ಮಕ್ಕಳ ಸಂಖ್ಯೆ ಕಡಿಮೆಯಾಗುವಂತೆ ಮಾಡಿ. ಅಪೌಷ್ಟಿಕ ಮಕ್ಕಳು ಮನೆಗೂ ಹೊರೆ, ದೇಶಕ್ಕೂ ಹೊರೆ, ಆರ್ಥಿಕತೆಗೂ ಹೊರೆ ಎಂಬ ಭಾವ ಬರದಂತೆ ಅಪೌಷ್ಟಿಕತೆ ಹೋಗಲಾಡಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಶ್ವೇತಾ, ಕುಂದಾಪುರ, ಬೈಂದೂರು ತಾಲೂಕಿನಲ್ಲಿ ಒಟ್ಟು 18 ಮಕ್ಕಳಷ್ಟೇ ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಇತರೆಡೆಗೆ ಹೋಲಿಸಿದರೆ ತೀರಾ ಕಡಿಮೆ ಸಂಖ್ಯೆಯಲ್ಲಿದೆ. ಅಷ್ಟರ ಮಟ್ಟಿಗೆ ಪೋಷಕರು ಜಾಗೃತರಾಗಿದ್ದಾರೆ. ಒಬ್ಬರೂ ಅಪೌಷ್ಟಿಕತೆಯಿಂದ ಬಳಲುತ್ತಿಲ್ಲ ಎಂದಾಗಲು ಎಲ್ಲರ ಸಹಕಾರ ಅಗತ್ಯ ಎಂದರು.
ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್, ತಹಶೀಲ್ದಾರ್ ಕಿರಣ್ ಗೌರಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣೇಕರ್ ಉಪಸ್ಥಿತರಿದ್ದರು. ಅಂಗನ ವಾಡಿಗಳ ಮೇಲ್ವಿಚಾರಕಿ ಪ್ರಭಾವತಿ ಶೆಟ್ಟಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ