![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Gangolli: ಸಾಣೆಕಲ್ಲು ತುಂಡಾಗಿ ವ್ಯಕ್ತಿ ಸಾವು
Team Udayavani, Mar 30, 2024, 7:33 PM IST
![Gangolli: ಸಾಣೆಕಲ್ಲು ತುಂಡಾಗಿ ವ್ಯಕ್ತಿ ಸಾವು](https://www.udayavani.com/wp-content/uploads/2024/03/10-23-620x372.jpg)
ಗಂಗೊಳ್ಳಿ: ವಿದ್ಯುತ್ ಚಾಲಿತ ಬ್ಲೇಡ್ ಹರಿತಗೊಳಿಸುವ ಸಾಣೆಕಲ್ಲು ತುಂಡಾಗಿ ವ್ಯಕ್ತಿ ಸಾವು ತುಂಡಾಗಿ ಗಂಭೀರ ಗಾಯಗೊಂಡ ಗುಜ್ಜಾಡಿ ಗ್ರಾಮದ ಸಂಜೀವ (67) ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ ಘಟನೆ ಗಂಗೊಳ್ಳಿಯಲ್ಲಿ ಸಂಭವಿಸಿದೆ.
ಸಂಜೀವ ಅವರು ಮರಗೆಲಸ ಮಾಡಿಕೊಂಡಿದ್ದು, ಮಾ. 29ರಂದು ಅಪರಾಹ್ನ 2.15ರ ಸುಮಾರಿಗೆ ಗಂಗೊಳ್ಳಿಯ ಮ್ಯಾಂಗನೀಸ್ ವಾರ್ಫ್ ಬಳಿ ಸೋಮನಾಥ ಮೇಸ್ತ ಅವರ ಬೋಟ್ ಬಿಲ್ಡರ್ನಲ್ಲಿ ಬೋಟ್ ಬಿಲ್ಡಿಂಗ್ ಕೆಲಸ ಮಾಡುತ್ತಿದ್ದರು. ಸಾಣೆಕಲ್ಲಿಗೆ ಮರ ಕತ್ತರಿಸುವ ಬ್ಲೇಡನ್ನು ಕೊಡುತ್ತಿರುವಾಗ ಸಾಣೆಕಲ್ಲು ತುಂಡಾಗಿ ಎದೆಗೆ ಬಡಿಯಿತು. ತೀವ್ರ ಸ್ವರೂಪದ ಗಾಯಗಳಾಗಿದ್ದು ಕೂಡಲೇ ಅವರನ್ನು ಆ್ಯಂಬುಲೆನ್ಸ್ನಲ್ಲಿ ಕುಂದಾಪುರದ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದರು.
ಮಹಾಗಣಪತಿ ಬೋಟ್ ಬಿಲ್ಡಿಂಗ್ನ ಮಾಲಕ ಸೋಮನಾಥ ಅವರ ನಿರ್ಲಕ್ಷ್ಯದಿಂದಾಗಿ ಅವಘಡ ಸಂಭವಿಸಿದೆ ಎಂದು ಸಂಜೀವ ಅವರ ಪುತ್ರ ಗುರುರಾಜ ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.