ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

85 ಕೋ.ರೂ. ವೆಚ್ಚದಲ್ಲಿ ಬ್ರೇಕ್‌ವಾಟರ್‌ ವಿಸ್ತರ4ಣೆ ಕಾಮಗಾರಿ ;  ತಾಂತ್ರಿಕ ಅನುಮೋದನೆಯೊಂದೇ ಬಾಕಿ

Team Udayavani, Oct 30, 2020, 4:50 AM IST

ಮರವಂತೆ ಹೊರ ಬಂದರು: ಶೀಘ್ರ ಎರಡನೇ ಹಂತದ ಕಾಮಗಾರಿ

ಮರವಂತೆಯ ಹೊರ ಬಂದರಿನ ನೋಟ.

ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಎರಡನೇ ಹಂತದಲ್ಲಿ ಬ್ರೇಕ್‌ವಾಟರ್‌ ವಿಸ್ತರಣೆ ಕಾಮಗಾರಿಗೆ ಈಗಾಗಲೇ ಸರಕಾರದಿಂದ 85 ಕೋ.ರೂ. ಮಂಜೂರಾಗಿ ಆಡಳಿತಾತ್ಮಕ ಅನುಮೋದನೆಯಾಗಿದ್ದು, ತಾಂತ್ರಿಕ ಅನುಮೋದನೆಗೆ ಮಾತ್ರ ಬಾಕಿ ಇದೆ. ಆ ಬಳಿಕ ಟೆಂಡರ್‌ ಕರೆದು, ಶೀಘ್ರದಲ್ಲೇ ಕಾಮಗಾರಿ ಆರಂಭ ಗೊಳ್ಳುವ ಸಾಧ್ಯತೆಗಳಿವೆ.

ಮರವಂತೆಯ ಬ್ರೇಕ್‌ವಾಟರ್‌ ವಿಸ್ತರಣೆಗೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಅವರ ಮುತುವರ್ಜಿ ಯಿಂದಾಗಿ ಕಳೆದ ಆಗಸ್ಟ್‌ನಲ್ಲಿ ರಾಜ್ಯ ಸರಕಾರ ಅನುದಾನ ಬಿಡುಗಡೆ ಮಾಡಿತ್ತು. ಕಾಮಗಾರಿ
ನೀಲ ನಕಾಶೆ ತಯಾರಿಸಲಾಗಿದ್ದು, ಅದಕ್ಕೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದ್ದು, ಇನ್ನು ಅಂದಾಜು ಪಟ್ಟಿ, ಸಲಹಾ ಸಮಿತಿ ಮತ್ತು ತಾಂತ್ರಿಕ ಸಮಿತಿಯ ಅನುಮೋದನೆಯೊಂದೇ ಬಾಕಿ ಇದೆ.

ಮೀನುಗಾರರಿಗೆ ಅನುಕೂಲ
ಮೊದಲ ಹಂತದ ಕಾಮಗಾರಿ ವೇಳೆ ಎರಡು ಭಾಗ ಗಳಲ್ಲಿಯೂ ತಡೆಗೋಡೆ ನಿರ್ಮಾಣ ಅಪೂರ್ಣವಾಗಿದೆ. ಈ ಅರೆಬರೆ ಕಾಮಗಾರಿ ಯಿಂದಾಗಿ ಮೀನುಗಾರಿಕೆಗೆ ಬಹಳಷ್ಟು ಸಮಸ್ಯೆ ಯಾಗುತ್ತಿದೆ. ದೋಣಿಗಳು ಸುಲಭವಾಗಿ ಬಂದರಿನ ಒಳ ಪ್ರವೇಶಿಸಲು ಕಷ್ಟವಾಗುತ್ತಿದೆ. ಇಲ್ಲಿ ಸುಮಾರು 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಬೇರೆ ಕಡೆಗಳ ಮೀನುಗಾರಿಕೆ ದೋಣಿಗಳೂ ಇಲ್ಲಿಗೆ ಬರುತ್ತವೆ. ಎರಡನೇ ಹಂತದ ಕಾಮಗಾರಿಯಿಂದಾಗಿ ಇಲ್ಲಿನ ಮೀನುಗಾರರಿಗೆ ಬಹಳಷ್ಟು ಅನುಕೂಲವಾಗಲಿದೆ.

“ಯು’ ಆಕೃತಿ ಬಂದರು
ಮರವಂತೆಯ ಹೊರ ಬಂದರು ರಾಜ್ಯದ ಮೊದಲ “ಯು’ ಶೇಪ್‌ ಮಾದರಿಯ ಬಂದರಾಗಿದೆ. ಇತರ ಮೀನುಗಾರಿಕೆ ಬಂದರಿಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರಾಗಿದೆ. ಅಂದರೆ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರು ಇದಾಗಿದೆ.

ತಡೆಗೋಡೆ
ಮರವಂತೆಯಲ್ಲಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಕಡಲ್ಕೊರೆತ ತಡೆಗಾಗಿ ಮೊದಲ ಹಂತದ ಕಾಮಗಾರಿಯಲ್ಲಿ ಉತ್ತರ ಭಾಗದಲ್ಲಿ 260 ಮೀ. ಹಾಗೂ ದಕ್ಷಿಣ ಭಾಗದಲ್ಲಿ 525 ಮೀ. ಒಟ್ಟು 785 ಮೀ. ಬ್ರೇಕ್‌ವಾಟರ್‌ (ಟೆಟ್ರಾಫೈಡ್‌) ನಿರ್ಮಾಣಗೊಂಡಿತ್ತು. ಈಗ ಅದರ ಮುಂದುವರಿದ ಭಾಗವಾಗಿ ಎರಡನೇ ಹಂತದ ಕಾಮಗಾರಿಯಲ್ಲಿ ಉತ್ತರ ಭಾಗದಲ್ಲಿ 560 ಮೀ. ಹಾಗೂ ದಕ್ಷಿಣ ಭಾಗದಲ್ಲಿ 65 ಮೀ. ಸೇರಿ ಒಟ್ಟು 625 ಮೀ. ತಡೆಗೋಡೆ ನಿರ್ಮಾಣಗೊಳ್ಳಲಿದೆ.

ಆಡಳಿತಾತ್ಮಕ ಅನುಮೋದನೆ
ಮರವಂತೆಯ ಎರಡನೇ ಹಂತದ ಬ್ರೇಕ್‌ವಾಟರ್‌ ವಿಸ್ತರಣೆ ಕಾಮಗಾರಿಗೆ ರಾಜ್ಯ ಸರಕಾರದಿಂದ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ. ಇನ್ನು ತಾಂತ್ರಿಕ ಒಪ್ಪಿಗೆ ಬಾಕಿಯಿದ್ದು, ಅದಾದ ಬಳಿಕ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ. -ಉದಯ ಕುಮಾರ್‌, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕೆ ಇಲಾಖೆ

ತ್ವರಿತವಾಗಿ ಆಗಲಿ
ಮರವಂತೆಯ ಹೊರ ಬಂದರಿನ ಎರಡನೇ ಹಂತದ ಕಾಮಗಾರಿ ಆದಷ್ಟು ಬೇಗ ಆರಂಭಗೊಂಡರೆ ಮೀನುಗಾರರಿಗೆ ಪ್ರಯೋಜನವಾಗಲಿದೆ. ಬ್ರೇಕ್‌ವಾಟರ್‌ ವಿಸ್ತರಣೆ ಜತೆಗೆ ಬಂದರಿನಲ್ಲಿ ಹೂಳೆತ್ತಬೇಕಿದೆ. ಈಗ ಮೀನುಗಾರರು ತಮ್ಮ ಸ್ವಂತ ಖರ್ಚಿನಿಂದ ಅಲ್ಲಲ್ಲಿ ಸ್ವಲ್ಪ ಹೂಳೆತ್ತಿ ದೋಣಿ ಬರುವಂತೆ ಮಾಡುತ್ತಿದ್ದಾರೆ. ಈಗಾಗಲೇ ಈ ಎಲ್ಲ ವಿಚಾರವನ್ನು ಶಾಸಕರ ಗಮನಕ್ಕೆ ತರಲಾಗಿದೆ.
-ಸಂಜೀವ ಖಾರ್ವಿ, ಮರವಂತೆ, ಮೀನುಗಾರರು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.