ಮಾರ್ಗೋಳಿ : ಪಾಳುಬಿದ್ದ ಸಮಾಜ ಮಂದಿರ

ಡಾ| ಬಿ.ಆರ್‌. ಅಂಬೇಡ್ಕರ್‌ ಭವನ ನಿರ್ಮಿಸಲು ಬೇಡಿಕೆ

Team Udayavani, Nov 23, 2020, 2:09 AM IST

Kud

ಬಸ್ರೂರು: ಮಾರ್ಗೋಳಿ ಚರ್ಚ್‌ ಎದುರು ಇರುವ ಸಮಾಜ ಮಂದಿರ ಹಲವು ವರ್ಷಗಳಿಂದ ಮುಚ್ಚಿಯೇ ಇದ್ದು, ಈಗ ಶಿಥಿಲಗೊಂಡು ಪಾಳುಬಿದ್ದಿದೆ.

30 ವರ್ಷಗಳ ಹಿಂದೆ ನಿರ್ಮಾಣ
ಪ.ಜಾತಿ ಮತ್ತು ಹಿಂದುಳಿದ ವರ್ಗದವರ ಅನುಕೂಲಕ್ಕಾಗಿ ಸುಮಾರು ಮೂವತ್ತು ವರ್ಷಗಳ ಹಿಂದೆಯೇ ಇಲ್ಲಿ ಸಮಾಜ ಮಂದಿರ ನಿರ್ಮಾಣವಾಗಿತ್ತು. ಆದರೆ ಅನಂತರದಲ್ಲಿ ಇದರ ಬಳಕೆ ಹೆಚ್ಚಾಗಿ ಆಗಿಲ್ಲ. ಸದ್ಯ ಕಟ್ಟಡದ ಕಿಟಿಕಿಗಳು ಬಿದ್ದು ಹೋಗಿವೆ. ಬಾಗಿಲು, ಛಾವಣಿ ದುರ್ಬಲಗೊಂಡಿವೆ. ಮಂದಿರದ ಎದುರು ಬಾವಿ ಇದ್ದರೂ ನಿರುಪಯುಕ್ತವಾಗಿದೆ. ಮುಂಭಾಗದಲ್ಲಿ ಹುಲ್ಲು-ಗಿಡಗಂಟಿಗಳು ಬೆಳೆದಿವೆ. ಸಮಾಜ ಮಂದಿರ ಒಂದು ಪಾಳು ಬಿದ್ದ ಕಟ್ಟಡದ ರೀತಿ ಭಾಸವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮಾಜಮಂದಿರವನ್ನು ತೆಗೆದು ಅಂಬೇಡ್ಕರ್‌ ಭವನ ನಿರ್ಮಿಸ ಬೇಕೆಂಬ ಒತ್ತಾಸೆ ಇದೆ.

ಅಂಬೇಡ್ಕರ್‌ ಭವನಕ್ಕೆ ಆಗ್ರಹ
ಬಸ್ರೂರು ಸುತ್ತಮುತ್ತಲ ಗ್ರಾಮಗಳಲ್ಲಿ ಅಂಬೇಡ್ಕರ್‌ ಭವನ, ಸಮುದಾಯ ಭವನಗಳಿದ್ದರೂ ಬಸ್ರೂರಿನಲ್ಲಿ ಯಾವ ಭವನವೂ ನಿರ್ಮಾಣವಾಗಿಲ್ಲ. ಇಲ್ಲಿ 36 ಸೆಂಟ್ಸ್‌ ಸರಕಾರಿ ಜಾಗವಿದ್ದು, ಈ ಸಮಾಜ ಮಂದಿರದ ದುಃಸ್ಥಿತಿಯನ್ನು ಕಂಡು ತಾಲೂಕು ದಲಿತ ಸಂಘರ್ಷ ಸಮಿತಿಯ ಸಂಚಾಲಕ ಗೋವಿಂದ ಮಾರ್ಗೋಳಿ ಅವರು ಈ ಸಮಾಜ ಮಂದಿರವನ್ನು “ಅಂಬೇಡ್ಕರ್‌ ಭವನ’ವನ್ನಾಗಿ ಮಾಡಬೇಕೆಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುಂದಾಪುರ ಶಾಸಕರಿಗೂ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ.

ಶೀಘ್ರ ಭವನ ನಿರ್ಮಿಸಿ
ತಾಲೂಕು ದಲಿತ ಸಂಘರ್ಷ ಸಮಿತಿ ವತಿಯಿಂದ ಇಲ್ಲಿ “ಅಂಬೇಡ್ಕರ್‌ ಭವನ’ ನಿರ್ಮಾಣಕ್ಕಾಗಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಕುಂದಾಪುರ ವಿಧಾನಸಭಾ ಸದಸ್ಯರ ಶಿಫಾರಸು ಪತ್ರವೂ ಬಂದಿರುತ್ತದೆ. ಶೀಘ್ರ ಅಂಬೇಡ್ಕರ್‌ ಭವನ ನಿರ್ಮಾಣವಾದರೆ ನಮಗೆ ಅನುಕೂಲ.
-ಗೋವಿಂದ ಮಾರ್ಗೋಳಿ, ಸಂಚಾಲಕ, ದ.ಸಂ.ಸ. ಕುಂದಾಪುರ

ಪ್ರಸ್ತಾವನೆ ಸಲ್ಲಿಕೆ
ಬಸ್ರೂರಿನ ಮಾರ್ಗೋಳಿಯಲ್ಲಿರುವ ಸಮಾಜ ಮಂದಿರವನ್ನು ಡಾ| ಬಿ.ಆರ್‌. ಅಂಬೇಡ್ಕರ್‌ ಭವನವನ್ನಾಗಿ ನಿರ್ಮಿಸುವ ಬಗ್ಗೆ ಪ್ರಸ್ತಾವವನ್ನು ಈಗಾಗಲೇ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
-ನಾಗೇಂದ್ರ ಜೆ., ಅಭಿವೃದ್ಧಿ ಅಧಿಕಾರಿ, ಗ್ರಾ.ಪಂ. ಬಸ್ರೂರು

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.