ಹಲವು ವೈಶಿಷ್ಟ್ಯದ ಕೆಳಾಕಳಿ ಮಾರಿಕಾಂಬಾ ಜಾತ್ರೆ


Team Udayavani, May 8, 2022, 1:25 PM IST

marikamba

ಕುಂದಾಪುರ: ಹಕ್ಲಾಡಿ ಗ್ರಾಮದ ಗ್ರಾಮದೇವತೆ ಕೆಳಾಕಳಿ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ 2 ವರ್ಷಗಳಿಗೊಮ್ಮೆ ನಡೆಯುವ ವಾರ್ಷಿಕ ಜಾತ್ರ ಮಹೋತ್ಸವಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಮೇ 10ರಿಂದ ಆರಂಭವಾಗಲಿದ್ದು, 12ರ ವರೆಗೆ ನಡೆಯಲಿದೆ. ಶಿರಸಿಯ ಮಾರಿಕಾಂಬೆಯ ತಂಗಿಯೆಂದೇ ಜನಜನಿತವಾಗಿರುವ ಕೆಳಾಕಳಿ ದೇವಿಯ ಜಾತ್ರಾ ಮಹೋತ್ಸವವು ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ದೇವಸ್ಥಾನದ ವಠಾರದಲ್ಲಿ ಮೇ 9 ರಂದು ಸಂಜೆ ಧಾರ್ಮಿಕ ಸಭೆ ನಡೆಯಲಿದ್ದು, ರಾತ್ರಿ 12ಕ್ಕೆ ದೇವಿಯ ವೈಭವದ ಬೀಡಿಕೆ ಮೆರವಣಿಗೆ, ಮೇ 10ರಂದು ಹರಕೆಯ ಸೇವೆಗಳು, ಕೋಣನ ಪುರ ಪ್ರವೇಶ, ಮಂಗಳಾರತಿ, ಮಧ್ಯಾಹ್ನ ಅನ್ನಸಂತರ್ಪಣೆ, ಭಜನ ಮಂಡಳಿಯಿಂದ ಭಕ್ತಿ ಲಹರಿ, ನಾಟಕ, ಯಕ್ಷಗಾನ, ಮೇ 11ರಂದು ಬೇವು ಉಡಿಸುವುದು, ಸುತ್ತಕ್ಕಿ ಸೇವೆ, ಕಸಗುಡಿಸುವ ಸೇವೆ, ಅನ್ನಸಂತರ್ಪಣೆ, ಮೇ 12 ರಂದು ತುಲಾಭಾರ, ದೇವಿಯ ಪುರಪ್ರವೇಶ, ಹರಕೆ ಸೇವೆ, ಅನ್ನಸಂತರ್ಪಣೆ ನಡೆಯಲಿದೆ.

21 ದಿನ ಮೊದಲೇ ನಿಗದಿ

ಜಾತ್ರೆಗೆ 21 ದಿನ ಮೊದಲೇ ಮಂಗಳವಾರ ದಿನ ನಿಗದಿಪಡಿಸಲಾಗುತ್ತದೆ. ಈ ವೇಳೆ ಹಕ್ಲಾಡಿ, ಹಕೂìರು, ಸೇನಾಪುರ ಗ್ರಾಮದಲ್ಲಿ ಜಾತ್ರೆ ಮುಗಿಯುವವರೆಗೆ ಯಾವುದೇ ಮದುವೆ ಸಹಿತ ಯಾವುದೇ ಶುಭಕಾರ್ಯಗಳು ನಡೆಯುವುದಿಲ್ಲ. ಅದಾದ ಎರಡನೇ ಮಂಗಳವಾರ ದೇಗುಲದ ಕಟ್ಟು-ಕಟ್ಟಲೆಗೆ ಸಂಬಂಧಿಸಿದಂತೆ ಅನೇಕ ವರ್ಷಗಳಿಂದ ಪೂಜಿಸಿಕೊಂಡು ಬಂದಿರುವ ದೇಗುಲದ ಎದುರಿನ ಮಾವಿನ ಮರಕ್ಕೆ ಪೂಜೆ ಸಲ್ಲಿಸಿ, ಮಚ್ಚು ಹಾಕಲಾಗುತ್ತದೆ. ಅದಾದ ಮರು ದಿನ ಕೋಣನ ಮೆರವಣಿಗೆ ಆರಂಭವಾಗುತ್ತದೆ.

ಕೋಣನ ಪುರ ಮೆರವಣಿಗೆ

ದೇಗುಲದಲ್ಲಿ ಪೂಜೆ ಮಾಡಿ, ಜನರ ಸಂಕಷ್ಟ ನಿವಾರಣೆಗೆಂದು ಪುರ ಮೆರವಣಿಗೆ ಹೊರಡುವ ದೈವ ಸ್ವರೂಪಿಯಾದ ಕೋಣನಿಗೆ ಗ್ರಾಮದ ಮುತ್ತೈದೆಯರು ಕಾಲು ತೊಳೆದು, ಹಣೆಗೆ ಅರಿಶಿನ ಕುಂಕುಮವಿಟ್ಟು, ನೆತ್ತಿಗೆ ಎಣ್ಣೆ ಹಾಕಿ ಭಕ್ತಿಯಿಂದ ಕಾಲಿಗೆರಗಿ ಮಾರಿಕಾಂಬಾ ಕಾಪಾಡಮ್ಮಾ ಎಂದು ಭಯಭಕ್ತಿಯಿಂದ ಬೇಡಿಕೊಳ್ಳುತ್ತಾರೆ. ಕೋಣ ಮನೆ ಬಾಗಿಲಿಗೆ ಬಂದರೆ ಶುಭ ಎನ್ನುವ ನಂಬಿಕೆಯಿಂದ ಕೋಣನ ಮನೆ -ಮನೆ ಮೆರವಣಿಗೆ ನಡೆಯುತ್ತದೆ.

ಶಿರಸಿಯಂತೆ ಮನೆ-ಮನೆ ಮೆರವಣಿಗೆ

ರಾಜ್ಯದ ಅತಿ ದೊಡ್ಡ ಜಾತ್ರೆಗಳಲ್ಲಿ ಒಂದಾದ ಶಿರಸಿಯ ಮಾರಿಕಾಂಬಾ ದೇವಿಯ ಜಾತ್ರೆಯ ಸಂದರ್ಭ ಕೋಣನ ಮೆರವಣಿಗೆ ನಡೆಯುವುದು ವಾಡಿಕೆ. ರಾಜ್ಯದ ಅದೆಷ್ಟೋ ಮಾರಿಕಾಂಬಾ ದೇವಿಯ ದೇವಸ್ಥಾನಗಳಲ್ಲಿ ಶಿರಸಿ ಬಿಟ್ಟರೆ ಕೋಣನ ಮೆರವಣಿಗೆ ನಡೆಯುವುದು ಕೆಳಾಕಳಿಯಲ್ಲಿ ಮಾತ್ರ ಅನ್ನುವುದು ವಿಶೇಷ. ಅಂದರೆ ಅವಿಭಜಿತ ದ.ಕ. ಜಿಲ್ಲೆಗಳಲ್ಲಿ ಕೆಳಾಕಳಿಯಲ್ಲಿ ಮಾತ್ರ ಈ ಪದ್ಧತಿಯಿದೆ. ಜಾತ್ರೆಯ ಒಂದು ವಾರ ಮೊದಲಿನ ಮಂಗಳವಾರ (ಈ ಬಾರಿ ಮೇ 4) ಕೋಣನ ಮೆರವಣಿಗೆ ಹೊರಟಿದ್ದು, ಹಕ್ಲಾಡಿ, ಹಕೂìರು ಹಾಗೂ ಸೇನಾಪುರ ಈ 3 ಗ್ರಾಮಗಳ ಎಲ್ಲ ಮನೆಗಳಿಗೆ ಭೇಟಿ ನೀಡುತ್ತದೆ. ಈಗ ಮನೆ ಹೆಚ್ಚಾಗಿದ್ದರಿಂದ ಅಲ್ಲಲ್ಲಿ ಒಂದು ಕಡೆ ಕಟ್ಟೆ ಮಾಡಿ, ಅಲ್ಲಿಯೇ ಕೋಣನಿಗೆ ಪೂಜೆ ನೆರವೇರಿಸಲಾಗುತ್ತಿದೆ.

ದೇವಿಯೇ ಮನೆ-ಮನೆಗೆ ಬರುವುದು

ಕಳೆದ ವರ್ಷ ಕೊರೊನಾದಿಂದ ಜಾತ್ರೆ ನಡೆದಿರಲಿಲ್ಲ. ಅದರ ಪ್ರಾಯಶ್ಚಿತವಾಗಿ ಈ ವರ್ಷ ಆಚರಿಸಲಾಗುತ್ತಿದೆ. ಸಿರಸಿಯಂತೆಯೇ ಎಲ್ಲ ಆಚರಣೆಗಳನ್ನು ನಡೆಸಲಾಗುತ್ತಿದೆ. ಕೋಣನ ಪುರ ಮೆರವಣಿಗೆಯೆಂದರೆ ದೇವಿಯೇ ಮನೆ- ಮನೆಗೆ ಬಂದು, ಆಶೀರ್ವಚಿಸುತ್ತಾಳೆ ಅನ್ನುವ ನಂಬಿಕೆ ನಮ್ಮೆಲ್ಲರದು. ಉಡುಪಿ, ಕುಂದಾಪುರ ಮಾತ್ರವಲ್ಲದೆ ಶಿರಸಿ, ಸಾಗರ, ನಗರ, ಹೊಸನಗರ ಕಡೆಯಿಂದೆಲ್ಲ ಭಕ್ತರು ಬರುತ್ತಾರೆ. – ಜಯರಾಜ್‌ ಎಸ್‌. ಹೆಗ್ಡೆ, ಆನುವಂಶಿಕ ಮೊಕ್ತೇಸರ, ಶ್ರೀ ಮಾರಿಕಾಂಬಾ ದೇವಸ್ಥಾನ ಕೆಳಾಕಳಿ

ಟಾಪ್ ನ್ಯೂಸ್

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.