ಪ್ರಗತಿ ಪರಿಶೀಲನ ಸಭೆ: “ಕೊಲ್ಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್’


Team Udayavani, Sep 18, 2020, 8:37 PM IST

ಪ್ರಗತಿ ಪರಿಶೀಲನ ಸಭೆ: “ಕೊಲ್ಲೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ರಾನ್‌’

ಕೊಲ್ಲೂರು: ಕೊಲ್ಲೂರು ದೇವಸ್ಥಾನವೂ ಸೇರಿದಂತೆ ರಾಜ್ಯದ 84 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿ ರಚಿಸಲು ಅನುಮತಿ ನೀಡಲಾಗಿದೆ. ಕೊಲ್ಲೂರು ದೇಗುಲದ ಆಡಳಿತ ಮಂಡಳಿಗೆ ಅರ್ಜಿ ಸಲ್ಲಿಸಿದವರ ವಿವರ ಸಂಗ್ರಹಣೆ ನಡೆಯುತ್ತಿದೆ. ಕೊಲ್ಲೂರು ದೇಗುಲದ ಮೂಲಕ 33 ಕೋ.ರೂ. ವೆಚ್ಚದಲ್ಲಿ ದೇಗುಲ, ಕೊಲ್ಲೂರು ಗ್ರಾಮಕ್ಕೆ ಕುಡಿಯುವ ನೀರು ಒದಗಿಸುವ ಯೋಜನೆಯನ್ನು ಗ್ರಾ.ಪಂ.ಗೆ ಹಸ್ತಾಂತರ ಕಾರ್ಯ ಶೀಘ್ರ ನಡೆಯಲಿದೆ ಎಂದು ಮುಜರಾಯಿ, ಮೀನುಗಾರಿಕೆ, ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಸೆ. 18ರಂದು ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು.
ಕೊಲ್ಲೂರಿನ ಒಳಚರಂಡಿ ಕಾಮ ಗಾರಿಯ ನ್ಯೂನತೆಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಅರೆಶಿರೂರು ಹೆಲಿಪ್ಯಾಡ್‌ನ್ನು ವ್ಯವಸ್ಥಿತಗೊಳಿಸುವ ಕಾಮಗಾರಿಗೆ ಯೋಜನಾ ವರದಿ ಸಿದ್ಧಪಡಿಸಲಾಗಿದೆ. ಕೊಲ್ಲೂರು ದೇವಸ್ಥಾನಕ್ಕೆ ಸೇರಿದ ತೊಪ್ಪಲುಕಟ್ಟೆಯಲ್ಲಿ ಗೋಶಾಲೆ ಇದೆ. 10 ಎಕ್ರೆ ಗೋಮಾಳ ಜಾಗವೂ ಇದ್ದು, ಇಲ್ಲಿ ಗೋವುಗಳಿಗೆ ಮೂಲ ಸೌಕರ್ಯಗಳ ಕಲ್ಪಿಸಲಾಗಿದೆ. ಅಲ್ಲಿ ಈಗಾಗಲೇ 100 ಜಾನುವಾರುಗಳಿವೆ. ಅನಾಥ ಗೋವುಗಳಿಗೆ ರಕ್ಷಣೆ ಕೊಡುವ ಕೆಲಸವೂ ಇಲ್ಲಿ ಆಗುತ್ತಿದೆ ಎಂದರು.

ಕೊಲ್ಲೂರು ರೋಪ್‌ ವೇ ಸಂಸದರ ಮುತುವರ್ಜಿಯ ಯೋಜನೆಯಾಗಿದ್ದು, ಇದಕ್ಕೆ ನಮ್ಮ ಸಹಕಾರ ಇದೆ. ಪರಿಸರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಯೋಜನೆಯನ್ನು ತಯಾರಿಸಲಾಗುತ್ತದೆ ಎಂದು ಹೇಳಿದ ಅವರು, ಕೊಲ್ಲೂರು ದೇಗುಲದಲ್ಲಿ ಮುಂದಿನ 50 ವರ್ಷಗಳ ಭವಿಷ್ಯದ ಯೋಜನೆಯ ಬಗ್ಗೆ ಮಾಸ್ಟರ್‌ ಪ್ಲ್ಯಾನ್‌ ತಯಾರಿಸಿ, ಮುಂದಿನ ಸಭೆ ಯಲ್ಲಿ ಇಡುವಂತೆ ಆಡಳಿತಾಧಿಕಾರಿಗಳಿಗೆ ಸೂಚನೆ ನೀಡಿದರು.

ಒಳ ಚರಂಡಿಯ ಮುಂದಿನ ನಿರ್ವಹಣೆ ಹೇಗೆ ನಿರ್ವಹಿಸುವುದು ಎನ್ನುವ ಕುರಿತು ಚರ್ಚೆ ನಡೆಯಿತು. ಶುಲ್ಕ ವಿಧಿಸುವ ಬಗ್ಗೆ ಅಭಿಪ್ರಾಯ ವ್ಯಕ್ತವಾಯಿತು. ದೇವಸ್ಥಾನದ ಹಣ ಪೋಲಾಗಬಾರದು. ಕಾಮಗಾರಿಯಲ್ಲಿ ಲೋಪವಾಗಬಾರದು. ಗುಣಮಟ್ಟ ಖಚಿತಪಡಿಸಿಕೊಂಡ ಬಳಿಕವೇ ಹಣ ಮಂಜೂರು ಮಾಡಿ, ದೇವಸ್ಥಾನಕ್ಕೆ ನಷ್ಟವಾಗಬಾರದು. ದೇವಸ್ಥಾನಗಳ ದತ್ತು ಸ್ವೀಕಾರಕ್ಕೆ ಪೂರ್ಣ ಹಣ ನೀಡಿದರೆ ಅದು ಸಾರ್ವಜನಿಕ ದೇವಸ್ಥಾನ ಆಗುವುದಿಲ್ಲ. ಹಾಗಾಗಿ ದತ್ತು ಸ್ವೀಕರಿಸುವ ದೇವಸ್ಥಾನಕ್ಕೆ 50 ಲಕ್ಷ ಮಾತ್ರ ನೀಡಿ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು. ಯಕ್ಷಗಾನ ಕಲಾವಿದರು ಕೋಡಿ ವಿಶ್ವನಾಥ ಗಾಣಿಗರ ನೇತೃತ್ವದಲ್ಲಿ ಕೊಲ್ಲೂರಿನಲ್ಲಿ ಯಕ್ಷಗಾನ ಮೇಳ ಹೊರಡಿಸುವಂತೆ ಮನವಿ ಸಲ್ಲಿಸಿದರು.

ದೇವಸ್ಥಾನದ ಆಡಳಿತಾಧಿಕಾರಿ, ಕುಂದಾಪುರದ ಸಹಾಯಕ ಆಯುಕ್ತರಾದ ಕೆ.ರಾಜು, ಬೈಂದೂರು ತಾ.ಪಂ. ಅಧ್ಯಕ್ಷ ಮಹೇಂದ್ರ ಪೂಜಾರಿ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತ್ತುಗುಂಡಿ, ಅಧಿಕಾರಿಗಳಾದ ಪ್ರದೀಪ್‌, ರಾಮಕೃಷ್ಣ ಅಡಿಗ ಉಪಸ್ಥಿತರಿದ್ದರು.

ಹೊಸ ಆಡಳಿತ ಮಂಡಳಿ ಬರುವುದರೊಳಗೆ ಹಸ್ತಾಂತರಿಸಿ
ಕೊಲ್ಲೂರು ದೇಗುಲ ಹಾಗೂ ಕೊಲ್ಲೂರು ಗ್ರಾಮಕ್ಕೆ ಕುಡಿಯುವ ನೀರು ನೀಡುವ ಯೋಜನೆಯನ್ನು ಹೊಸ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬರುವ ಮುಂಚೆ ಪಂಚಾಯತ್‌ಗೆ ಹಸ್ತಾಂತರಿಸಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಕಾಶಿ ಹೊಳೆಯಿಂದ ಕಿಂಡಿ ಅಣೆಕಟ್ಟು ಮೂಲಕ ಕಲ್ಯಾಣಗುಡ್ಡ ಪ್ರದೇಶಕ್ಕೆ ಪಂಪ್‌ ಮಾಡಿ, ಶುದ್ಧೀಕರಿಸಿ ಇಡೀ ಗ್ರಾಮಕ್ಕೆ ನೀರು ನೀಡಲಾಗುತ್ತದೆ. ಈಗಾಗಲೇ ಕಾಮಗಾರಿ ಮುಗಿದಿದ್ದು ನ್ಯೂನತೆಗಳ ಪರಿಶೀಲನೆ ನಡೆದಿದ್ದು 20 ದಿನಗಳ ಒಳಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಯೋಜನೆಯ ಅನುಷ್ಠಾನದ ಸಂದರ್ಭ ಮೂಲ ಯೋಜನಾ ವರದಿಯ ಆಶಯಕ್ಕೆ ಧಕ್ಕೆಯಾಗಬಾರದು ಎಂದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.