ಗಂಗೊಳ್ಳಿ ಬಂದರಿಗೆ ಶಾಸಕ ಸುಕುಮಾರ್ ಶೆಟ್ಟಿ ಭೇಟಿ
Team Udayavani, May 16, 2020, 5:39 AM IST
ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿಗೆ ಶುಕ್ರವಾರ ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಅವರು ಭೇಟಿ ನೀಡಿ, ಚಿಲ್ಲರೆ ಮೀನು ವ್ಯಾಪಾರಸ್ಥರ ಪಾಸ್ ಗೊಂದಲದ ಕುರಿತಂತೆ ಮಾಹಿತಿ ಪಡೆದುಕೊಂಡರು.
ಜಿಲ್ಲಾಡಳಿತದ ನಿರ್ದೇಶನದಂತೆ ಗಂಗೊಳ್ಳಿಯ ಮೀನುಗಾರಿಕಾ ಬಂದರಿನಲ್ಲಿ ಜನದಟ್ಟಣೆ ತಪ್ಪಿಸುವ ಸಲುವಾಗಿ ಅಗತ್ಯವಿರುವ ಮೀನುಗಾರರು, ಕಾರ್ಮಿಕರಿಗೆ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಆದರೆ ಇದರಿಂದ ಬೇಸತ್ತ ಚಿಲ್ಲರೆ ಮೀನು ವ್ಯಾಪಾರಸ್ಥ ಮಹಿಳೆಯರು ಶಾಸಕರಿಗೆ ದೂರು ನೀಡಿದ್ದು, ಅದರಂತೆ ಶಾಸಕರು ಭೇಟಿ ನೀಡಿ ಅಹವಾಲು ಆಲಿಸಿದರು.
ಈ ವೇಳೆ ಮಾತನಾಡಿದ ಶಾಸಕರು ಇನ್ನು ಕೆಲ ದಿನ ಅಷ್ಟೇ ಯಾಂತ್ರೀಕೃತ ಮೀನುಗಾರಿಕೆಗೆ ಅವಕಾಶವಿದ್ದು, ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕೂಡ ಅವಶ್ಯಕವಾಗಿದೆ. ಹಾಗಾಗಿ ಬೋಟಿಗೆ ಒಬ್ಬರು ಮಹಿಳಾ ಮೀನು ಮಾರಾಟಗಾರರಿಗೆ ಅವಕಾಶ ಕಲ್ಪಿಸಿ ಎಂದು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಗಂಗೊಳ್ಳಿ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಅಂಜನಾದೇವಿ, ಗಂಗೊಳ್ಳಿ ಪೊಲೀಸ್ ಠಾಣಾ ಎಸ್ಐ ಭೀಮಾಶಂಕರ್, ತಾ.ಪಂ. ಸದಸ್ಯ ಸುರೇಂದ್ರ ಖಾರ್ವಿ, ಹಸಿ ಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಖಾರ್ವಿ, ಮೀನುಗಾರ ಮುಖಂಡರಾದ ರಾಮಪ್ಪ ಖಾರ್ವಿ, ಬಸವ ಖಾರ್ವಿ, ಗಂಗೊಳ್ಳಿ ಮೀನುಗಾರರ ಪ್ರಾಥಮಿಕ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ,ನಿರ್ದೇಶಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ