ಮೊವಾಡಿ-ನಾಡ ಸೇತುವೆ: ಇನ್ನೂ ಆರಂಭಗೊಳ್ಳದ ಸಂಚಾರ
ರಸ್ತೆ ನಿರ್ಮಾಣಕ್ಕೆ ಇನ್ನಷ್ಟೇ ಆಗಬೇಕಿದೆ ಭೂಸ್ವಾಧೀನ ಪ್ರಕ್ರಿಯೆ
Team Udayavani, Nov 26, 2020, 5:32 AM IST
ಬಹುತೇಕ ಪೂರ್ಣಗೊಂಡಿರುವ ನಾಡ - ಮೊವಾಡಿ ಸಂಪರ್ಕ ಸೇತುವೆ.
ಕುಂದಾಪುರ: ತ್ರಾಸಿಯಿಂದ ನಾಡ, ಹಡವು ಗ್ರಾಮಗಳನ್ನು ಬೆಸೆಯುವ ಮೊವಾಡಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಆದರೆ ಸಂಪರ್ಕಿಸುವ ರಸ್ತೆ ನಿರ್ಮಾಣಕ್ಕೆ ಬೇಕಾದ ಜಾಗದ ಸ್ವಾಧೀನ ಪ್ರಕ್ರಿಯೆ ಇನ್ನೂ ಶುರುವಾಗದ ಕಾರಣ ಸೇತುವೆಯಲ್ಲಿ ವಾಹನ ಸಂಚಾರ ಆರಂಭ ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ.
ನಾಡದಿಂದ ತ್ರಾಸಿಗೆ ಸಂಪರ್ಕಿಸುವ ಮೊವಾಡಿ ಬಳಿ ಸೌಪರ್ಣಿಕಾ ನದಿಗೆ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ದಿಂದ ಮಂಜೂರಾದ 9.28 ಕೋ.ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಸೇತುವೆ ಇದಾಗಿದೆ. ಕಾಮಗಾರಿಗೆ 2018ರಲ್ಲಿ ಶಿಲಾನ್ಯಾಸ ನೆರವೇರಿಸಲಾಗಿದ್ದರೂ ಕಾಮಗಾರಿ ಆರಂಭವಾಗಿದ್ದು 2019ರ ಮಾರ್ಚ್ನಲ್ಲಿ. 2020ರ ಮೇಯೊಳಗೆ ಕಾಮಗಾರಿ ಪೂರ್ಣಕ್ಕೆ ಗಡುವು ನೀಡಲಾಗಿತ್ತು. ಈಗ ಸೇತುವೆಯ ಕಾಮಗಾರಿ ಬಹುತೇಕ ಮುಗಿದಿದೆ. ಆದರೆ ರಸ್ತೆಗೆ ಬೇಕಾದ ಭೂಸ್ವಾಧೀನ ಪ್ರಕ್ರಿಯೆ ಇನ್ನು ಆಗಬೇಕಾಗಿದೆ.
150 ಮೀ. ಉದ್ದ
ಸೌಪರ್ಣಿಕಾ ನದಿಗೆ ಅಡ್ಡಲಾಗಿ ನಿರ್ಮಾಣ ಗೊಂಡಿರುವ ಈ ಸೇತುವೆಯು 150 ಮೀಟರ್ ಉದ್ದವಿದ್ದು, 8.5 ಮೀ. ಅಗಲವಿದೆ. ಫುಟ್ಪಾತ್ ಸೇರಿಸಿದರೆ ಒಟ್ಟು 10.5 ಮೀ. ಅಗಲವಿದೆ. ಉಡುಪಿ, ಕಾರ್ಕಳ, ಮೊವಾಡಿ – ನಾಡ ಸೇತುವೆ, ಭಟ್ಕಳದಲ್ಲಿ ಒಟ್ಟು 9 ಸೇತುವೆಗಳಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ 42.57 ಕೋ. ರೂ. ಮಂಜೂರಾಗಿತ್ತು. ಇದರಲ್ಲಿ ಈ ಸೇತುವೆಯು 9.28 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದೆ.
ಈ ಸೇತುವೆ ಕಾಮಗಾರಿಯು ಈಗಾಗಲೇ ಮುಗಿದಿದ್ದು, ಆದರೆ ಸೇತುವೆಯನ್ನು ಸಂಪರ್ಕಿ ಸುವ ರಸ್ತೆಗಳು ಹದಗೆಟ್ಟು ಹೋಗಿದೆ. ಅದನ್ನು ಕೂಡ ದುರಸ್ತಿ ಮಾಡಿದರೆ ಅನುಕೂಲವಾಗಲಿದೆ. ಇದಲ್ಲದೆ ಕೆಲವೆಡೆ ಜಾಗದ ಸಮಸ್ಯೆ ಇರುವುದರಿಂದ ಡಾಮರು ಕಾಮಗಾರಿಯಾಗದೆ ತೊಂದರೆ ಯಾಗಿದೆ. ಸಂಪರ್ಕ ರಸ್ತೆಗೆ ಕೂಡ ಆದಷ್ಟು ಬೇಗ ಡಾಮರು ಕಾಮಗಾರಿ ನಡೆಸಲಿ ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
ಜಂಟಿ ಸರ್ವೇಗೆ ಸೂಚನೆ
ರಸ್ತೆಗೆ ಅಗತ್ಯವಿರುವ ಭೂಸ್ವಾಧೀನ ಕುರಿತಂತೆ ಉಪ ನೋಂದಣಾಧಿಕಾರಿಗಳು ಅಂಕಿ- ಅಂಶ ಹಾಗೂ ಮಾರ್ಗಸೂಚಿ ದರಪಟ್ಟಿಯನ್ನು ಕುಂದಾ ಪುರದ ಸಹಾಯಕ ಆಯುಕ್ತರಿಗೆ ಸಲ್ಲಿಸಿದ್ದು, ಅದನ್ನು ಅವರು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಅ. 10ರಂದು ಡಿಸಿ ನೇತೃತ್ವದಲ್ಲಿ ದರ ನಿರ್ಧರಣ ಸಲಹಾ ಸಮಿತಿ ಸಭೆ ನಡೆಸಿ, ಜಾಗಕ್ಕೆ ದರ ನಿಗದಿಪಡಿಸಲಾಗಿದೆ. ಅದಕ್ಕೂ ಮುನ್ನ ತಹಶೀಲ್ದಾರ್ ಅವರಿಂದ ಮತ್ತೂಮ್ಮೆ ಜಂಟಿ ಸರ್ವೇ ನಡೆಯಬೇಕು ಎಂದು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿತ್ತು. ನಾಡ ಗ್ರಾಮ ವ್ಯಾಪ್ತಿಯಲ್ಲಿ 6 ಮಂದಿಯ ಒಟ್ಟು 39 ಸೆಂಟ್ಸ್ ಹಾಗೂ ತ್ರಾಸಿ ಗ್ರಾಮದ 12 ಮಂದಿಯ 59 ಸೆಂಟ್ಸ್ ಜಾಗ ರಸ್ತೆಗಾಗಿ ಒತ್ತುವರಿಯಾಗಲಿದೆ.
ಬಹು ವರ್ಷಗಳ ಬೇಡಿಕೆ
ನಾಡ, ಹಡವು, ಮೊವಾಡಿಯ ಜನರಿಗೆ ತ್ರಾಸಿಗೆ ಬಂದು ಕುಂದಾಪುರಕ್ಕೆ ತೆರಳಲು ಈ ಸೇತುವೆಯಾದರೆ ಬಹಳಷ್ಟು ಅನುಕೂಲವಾಗಲಿದೆ. ಇದಲ್ಲದೆ ಮೊವಾಡಿಯ ನಿವಾಸಿಗಳಿಗೆ ತ್ರಾಸಿ ಅಥವಾ ಮುಳ್ಳಿಕಟ್ಟೆ ಪೇಟೆಗೆ ಬರ ಬೇಕಾದರೆ ಕನಿಷ್ಠ 3 ಕಿ.ಮೀ. ದೂರವಿದೆ. ಆದರೆ ಸೇತುವೆಯಾದರೆ ನಾಡ ಪೇಟೆಗಿರುವ ಅಂತರ ಕೇವಲ 1 ಕಿ.ಮೀ. ಮಾತ್ರ. ಮೊವಾಡಿಯಲ್ಲಿ ಕ್ರಿಶ್ಚಿಯನ್ ಸಮುದಾಯದವರು ಹೆಚ್ಚಿರುವುದರಿಂದ ಪಡುಕೋಣೆ ಇಗರ್ಜಿಗೆ ಹೋಗಲು ಕೂಡ ಇದು ಹತ್ತಿರದ ಮಾರ್ಗವಾಗಿದೆ. ಸೇತುವೆಯ ಆಸುಪಾಸಿನಲ್ಲೇ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, ಈ ಸೇತುವೆ ನಿರ್ಮಾಣದಿಂದ ಸಾವಿರಾರು ಮಂದಿಗೆ ಅನುಕೂಲವಾಗಲಿದೆ.
ಭೂಸ್ವಾಧೀನ ಪ್ರಕ್ರಿಯೆ ಬಾಕಿ
ಸೇತುವೆ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ. ಆದರೆ ಸೇತುವೆಯನ್ನು ಸಂಪರ್ಕಿಸುವ ಜಾಗದ ಭೂಸ್ವಾಧೀನ ಪ್ರಕ್ರಿಯೆ ಬಾಕಿಯಿದೆ. ಈಗಾಗಲೇ ಭೂಸ್ವಾಧೀನ ಮಾಡುವ ರೈತರಿಗೆ ಎಷ್ಟು ಪರಿಹಾರ ಕೊಡಬೇಕು ಎನ್ನುವ ಬಗ್ಗೆ ಅಕ್ಟೋಬರ್ನಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದ್ದು, ಅದರಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜಾಗದ ಸಂತ್ರಸ್ತರಿಗೆ ಪರಿಹಾರ ಹಂಚಿಕೆಯಾದ ಕೂಡಲೇ ರಸ್ತೆ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.
– ಮಂಜೇಶ್, ಎಂಜಿನಿಯರ್, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
9.28 ಕೋ.ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣ
2018 ರಲ್ಲಿ ಸೇತುವೆಗೆ ಶಿಲಾನ್ಯಾಸ
300 ಕ್ಕೂ ಅಧಿಕ ಮನೆಯವರಿಗೆ ಅನುಕೂಲ
ಪ್ರಶಾಂತ್ ಪಾದೆ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ