ತಾಯಿ ಮಕ್ಕಳ ಆಸ್ಪತ್ರೆಗೆ ವೈದ್ಯರ ಮಂಜೂರು ಕ್ಷಿಪ್ರವಾಗಲಿ 


Team Udayavani, Aug 23, 2021, 3:00 AM IST

ತಾಯಿ ಮಕ್ಕಳ ಆಸ್ಪತ್ರೆಗೆ ವೈದ್ಯರ ಮಂಜೂರು ಕ್ಷಿಪ್ರವಾಗಲಿ 

ಕುಂದಾಪುರದ ಬಹುವರ್ಷಗಳ ಬೇಡಿಕೆಯಾದ ತಾಯಿ ಮಕ್ಕಳ ಆಸ್ಪತ್ರೆ ಕೊನೆಗೂ ಮಂಜೂರಾಗಿದೆ. ಈ ಮೂಲಕ ಹೆರಿಗೆ ಆಸ್ಪತ್ರೆ ಇದ್ದ ಕಟ್ಟಡ ಇನ್ನು ಮುಂದೆ ಪೂರ್ಣ ಪ್ರಮಾಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆಯಾಗಿ ರೂಪುಗೊಳ್ಳಲಿದೆ. ಆದೇಶ ದಾಖಲೆಗಷ್ಟೇ ಸೀಮಿತವಾಗುವ ಬದಲು ವೈದ್ಯರ ನೇಮಕ ಕ್ಷಿಪ್ರವಾಗಿ ಆಗಬೇಕಿದೆ.

ಕುಂದಾಪುರದಲ್ಲಿ ಲಕ್ಷ್ಮೀ ಸೋಮ ಬಂಗೇರ ನೆನಪಿನಲ್ಲಿ ಜಿ. ಶಂಕರ್‌ ಅವರು 3 ಕೋ.ರೂ. ವೆಚ್ಚದಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆ ಕಟ್ಟಡ ನಿರ್ಮಿಸಿಕೊಟ್ಟಿದ್ದಾರೆ. ತಾಯಿ ಮಕ್ಕಳ ಆಸ್ಪತ್ರೆ ಇದರಲ್ಲೇ ನಡೆಸಬಹುದಾಗಿದ್ದು ಮಾನವ ಸಂಪನ್ಮೂಲ ಒದಗಿಸಿಕೊಡಬೇಕೆಂದು 2019ರಲ್ಲಿ ಮನವಿ ಸಲ್ಲಿಸಲಾಗಿತ್ತು. ಅದರಂತೆ ಸರಕಾರ ತಾಯಿ ಮರಣ, ಶಿಶು ಮರಣ ಕಡಿಮೆಗೊಳಿಸುವ ಸಲುವಾಗಿ ಕುಂದಾಪುರಕ್ಕೆ ತಾಯಿ ಮಕ್ಕಳ ಆಸ್ಪತ್ರೆ ಮಂಜೂರು ಮಾಡಿದೆ.

ರಾಜ್ಯದ 15 ಆಸ್ಪತ್ರೆಗಳಿಗೆ 339 ಹುದ್ದೆಗಳನ್ನು ಮಂಜೂರು ಮಾಡಲಾಗಿದೆ. ಈ ಪೈಕಿ ಶುಶ್ರೂಷಕಿಯರ ಹುದ್ದೆಗೆ 82 ಹುದ್ದೆಗಳು ಗುತ್ತಿಗೆ ಆಧಾರದಲ್ಲಿ, ಉಳಿದ 81 ಹುದ್ದೆಗಳು ನೇರ ನೇಮಕಾತಿಯಲ್ಲಿ, ಕಿರಿಯ ಶುಶ್ರೂಷಕರು, ಫಾರ್ಮಾಸಿಸ್ಟ್‌, ಪ್ರಯೋಗಶಾಲಾ ತಂತ್ರಜ್ಞ , ಡಾಟಾ ಎಂಟ್ರಿ ಆಪರೇಟರ್‌, ಡಿ ಗ್ರೂಪ್‌ನ 118 ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ, ಸ್ವೀಪರ್‌, ಗಾರ್ಡ್‌ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಿಸಬೇಕಾಗುತ್ತದೆ. ಕುಂದಾಪುರಕ್ಕೆ  ಒಟ್ಟು 16  ಸಿಬಂದಿ ನೇಮಕವಾಗಬೇಕಿದೆ. ಅರಿವಳಿಕೆ ತಜ್ಞ  1, ರೇಡಿಯಾಲಜಿಸ್ಟ್‌ 1, ಶುಶ್ರೂಷಕರು 6, ಶುಶ್ರೂಶಕಿ ಕಿರಿಯ  1, ಕಿರಿಯ ಪ್ರಯೋಗಶಾಲಾ ತಂತ್ರಜ್ಞ 1, ದ್ವಿತೀಯ ದರ್ಜೆ ಸಹಾಯಕ 2, ಡಾಟಾ ಎಂಟ್ರಿ ಆಪರೇಟರ್‌ 1, ಗ್ರೂಪ್‌ ಡಿ 3 ಹುದ್ದೆ ಮಂಜೂರಾಗಿದೆ.

ಕುಂದಾಪುರದ ಆಸ್ಪತ್ರೆಗೆ ಅವಶ್ಯವಿರುವ ವ್ಯವಸ್ಥೆಗಳೆಲ್ಲ ಪೂರ್ಣ ಪ್ರಮಾಣದಲ್ಲಿ ಆದಲ್ಲಿ ಜಿಲ್ಲಾ ಕೇಂದ್ರದ ಆಸ್ಪತ್ರೆಯ ಒತ್ತಡವೂ ಕಡಿಮೆಯಾಗಲಿದೆ. ಗ್ರಾಮಾಂತರ ಪ್ರದೇಶಕ್ಕೆ ಇದು ಕೇಂದ್ರ ಸ್ಥಾನದಲ್ಲಿಯೂ ಇರುವುದರಿಂದ ತುರ್ತು ಸಂದರ್ಭಗಳಲ್ಲಿ ದೂರದ ಪ್ರದೇಶಗಳಿಗೆ ಪ್ರಯಾಣಿಸುವಾಗ ಆಗುವ ವಿಳಂಬವೂ ತಪ್ಪಲಿದೆ. ಸಕಾಲದಲ್ಲಿ ಉತ್ತಮ ಚಿಕಿತ್ಸೆ ದೊರೆಯಲು ಸಾಧ್ಯವಾಗಲಿದೆ.

ಕುಂದಾಪುರ ಸರಕಾರಿ ಆಸ್ಪತ್ರೆ ಕೊರೊನಾ ಚಿಕಿತ್ಸೆಯಲ್ಲಿ ರಾಜ್ಯದಲ್ಲೇ ಅತ್ಯುತ್ತಮ ಚಿಕಿತ್ಸೆಗಾಗಿ ಹೆಸರು ಪಡೆದಿತ್ತು. ಜಿಲ್ಲಾಸ್ಪತ್ರೆ ಹೊರತಾಗಿ ಉಪವಿಭಾಗ ಆಸ್ಪತ್ರೆಯೊಂದು ಪ್ರತ್ಯೇಕವಾಗಿ ಕೊರೊನಾ ಚಿಕಿತ್ಸೆಗೆ ತೆರೆದುಕೊಂಡಿದ್ದು ಇಲ್ಲಿಯೇ. ದಾಖಲೆ  ಸಂಖ್ಯೆಯಲ್ಲಿ ಹೆರಿಗೆ ಆಗಿದ್ದು ಭಟ್ಕಳ, ಬೈಂದೂರು, ಕುಂದಾಪುರ ತಾಲೂಕಿನ ಮಂದಿ ಇಲ್ಲಿಗೆ ಆಗಮಿಸಿದ್ದರು. ಸೌಕರ್ಯ ಇನ್ನಷ್ಟು ಹೆಚ್ಚಿದಲ್ಲಿ ದೂರದ ಪ್ರದೇಶದ ಜನರೂ ಇಲ್ಲಿಗೆ ಆಗಮಿಸಿ ಚಿಕಿತ್ಸೆ ಪಡೆಯುವ ಸಾಧ್ಯತೆಗಲು ಹೆಚ್ಚು.

ಕುಂದಾಪುರದ ಆಸ್ಪತ್ರೆಯಲ್ಲಿ ಈಗಾಗಲೇ ಆಕ್ಸಿಜನ್‌ ಪ್ಲಾಂಟ್‌ ಕೂಡ ಸಿದ್ಧವಾಗಿದ್ದು ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗಿದೆ. ಪೂರ್ಣ ಪ್ರಮಾಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಪ್ರಾರಂಭವಾದರೆ ಬಡವರಿಗೆ ಚಿಕಿತ್ಸೆಯ ಬಾಗಿಲು ತೆರೆದಂತೆ. ಆದ್ದರಿಂದ ನೇಮಕಾತಿ ಪ್ರಕ್ರಿಯೆ ಕ್ಷಿಪ್ರವಾಗಿ ನಡೆದರೆ ಕೊರೊನಾದಂತಹ ಸಂಕಷ್ಟದ ಸಮಯ ಎದುರಾದರೂ ಅದನ್ನು ಎದುರಿಸಲು ಸಾಕಷ್ಟು ಸಹಕಾರಿಯಾಗಲಿದೆ. ಆದುದರಿಂದ ಈ ಬಗ್ಗೆ ಸಂಬಂಧಿಸಿದವರು ತತ್‌ಕ್ಷಣ ಗಮನ ಹರಿಸುವುದು ಉತ್ತಮ.

-ಸಂ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.