ಮೊವಾಡಿ: ಯಾಂತ್ರೀಕೃತ ಮರಳುಗಾರಿಕೆ ವಿರೋಧಿಸಿ ಪ್ರತಿಭಟನೆ

ಯಾಂತ್ರಿಕ ಮರಳುಗಾರಿಕೆಯಿಂದ ನದಿ ತೀರಕ್ಕೆ ಆಪತ್ತು

Team Udayavani, Mar 22, 2022, 5:21 PM IST

sand

ತ್ರಾಸಿ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಮೊವಾಡಿಯಲ್ಲಿ ಕಳೆದ ಕೆಲ ದಿನಗಳಿಂದ ಯಾಂತ್ರೀಕೃತ ಮರಳುಗಾರಿಕೆ ನಡೆಯುತ್ತಿದ್ದು, ಇದನ್ನು ತತ್‌ಕ್ಷಣವೇ ನಿಲ್ಲಿಸಬೇಕು ಹಾಗೂ ಹೀಗೆ ಮುಂದುವರಿದರೆ ಪರವಾನಿಗೆ ರದ್ದುಪಡಿಸಬೇಕು ಎಂದು ಆಗ್ರಹಿಸಿ, ಮೊವಾಡಿಯ ಸ್ಥಳೀಯ ನಿವಾಸಿಗರು ಸೋಮವಾರ ಪ್ರತಿಭಟನೆ ನಡೆಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಯಾಂತ್ರೀಕೃತ ಮರಳುಗಾರಿಕೆ ನಡೆಯುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಮರಳು ಸಂಗ್ರಹ ಕಾರ್ಯಭರದಿಂದ ಸಾಗುತ್ತಿದೆ. ಈ ಬಗ್ಗೆ ಸ್ಥಳೀಯಾಡಳಿತಕ್ಕೂ ತಿಳಿಸದೇ ಏಕಾಏಕಿಯಾಗಿ ಮರಳು ತೆಗೆಯುತ್ತಿರುವುದು ಸರಿಯಾದ ಕ್ರಮವಲ್ಲ. ಯಾಂತ್ರೀಕೃತ ಮರಳುಗಾರಿಕೆ ನಡೆಸಲು ನಿಯಮಗಳನ್ನು ಗಾಳಿಗೆ ತೂರಿ ಇಲಾಖೆಯೇ ಪರವಾನಿಗೆ ನೀಡಿರುವುದನ್ನು ಪ್ರತಿಭಟನಕಾರರು ಖಂಡಿಸಿದ್ದಾರೆ.

ನದಿ ತೀರಕ್ಕೆ ಅಪಾಯ

ಅವ್ಯಾಹತವಾಗಿ ಯಾಂತ್ರೀಕೃತ ಮರಳುಗಾರಿಕೆ ನಡೆಸುವುದರಿಂದ ನದಿ ತೀರದ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ದೊಡ್ಡ ಪ್ರಮಾಣದಲ್ಲಿ ಮರಳು ತೆಗೆಯುವುದರಿಂದ ನದಿ ತೀರ ಕುಸಿಯುತ್ತಿದ್ದು ಸಮೀಪದ ಮನೆಗಳು ನೀರುಪಾಲಾಗುವ ಭೀತಿಯುಂಟಾಗಿದೆ. ಅದಲ್ಲದೇ ಬಾವಿಗಳ ಶುದ್ಧ ನೀರು ಉಪ್ಪುನೀರಾಗಿ ಪರಿವರ್ತನೆಯಾಗುತ್ತಿದೆ. ಇರುವ ಕಿರಿದಾದ ರಸ್ತೆಗಳಲ್ಲಿ ಮರಳು ಲಾರಿಗಳ ಸಂಚಾರದಿಂದ ವಾಹನ ಸವಾರರು, ಸಾರ್ವಜನಿಕರು ಶಾಲಾ ಮಕ್ಕಳಿಗೆ ನಿತ್ಯವೂ ಸಮಸ್ಯೆಗಳಾಗುತ್ತಿವೆ. ಹೀಗಾಗಿ ಯಾಂತ್ರೀಕೃತ ಮರಳುಗಾರಿಕೆಯನ್ನು ತತ್‌ಕ್ಷಣವೇ ನಿಲ್ಲಿಸಬೇಕು ಇಲ್ಲವಾದಲ್ಲಿ ಎಲ್ಲರೂ ರಸ್ತೆಯ ಮೇಲೆ ಕುಳಿತು ಧರಣಿ ನಡೆಸುತ್ತೇವೆ ಎಂದು ಸ್ಥಳೀಯರು ಎಚ್ಚರಿಸಿದರು.

ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್‌ ಕುಮಾರ್‌ ಶೆಟ್ಟಿ, ಸ್ಥಳೀಯ ಮುಖಂಡರಾದ ಕಡಿಕೆ ಪ್ರವೀಣ್‌ ಕುಮಾರ್‌ ಶೆಟ್ಟಿ, ಅಶೋಕ್‌ ಶೆಟ್ಟಿ, ಪ್ರಣಯ್‌ ಕುಮಾರ್‌ ಶೆಟ್ಟಿ ಯಳೂರು, ಹಕ್ಲಾಡಿ ಗ್ರಾ.ಪಂ. ಅಧ್ಯಕ್ಷ ಚೇತನ್‌ ಮೊಗವೀರ, ತ್ರಾಸಿ ಪಂಚಾಯತ್‌ ಸದಸ್ಯರಾದ ಮಿಥುನ್‌ ದೇವಾಡಿಗ, ರೆಮ್ಸಮ್‌ ಪಿರೇರಾ, ಗ್ರಾಮ ಕರಣಿಕ ಶಿವರಾಯ್‌, ಸಿಪಿಐ ಸಂತೋಷ್‌ ಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ, ಸಿಬ್ಬಂದಿ ಉಪಸ್ಥಿತರಿದ್ದರು.

ವರದಿ ಪಡೆದು ತೀರ್ಮಾನ ಎಸಿ

ಸ್ಥಳಕ್ಕಾಗಮಿಸಿದ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತ ಕೆ. ರಾಜು ಅವರಿಗೆ ಪ್ರತಿಭಟನ ನಿರತರು ಮನವಿ ಸಲ್ಲಿಸಿದರು. ಸ್ಥಳೀಯ ನಿವಾಸಿಗಳ ಮನವಿಗೆ ಸ್ಪಂದಿಸಿದ ಎಸಿ ರಾಜು ಕೆ. ಅವರು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳಿಗೆ ಮರಳುಗಾರಿಕೆಯಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ ತಾಂತ್ರಿಕ ವರದಿ ತರಿಸಿಕೊಳ್ಳುವಂತೆ ಸೂಚನೆ ನೀಡಿದರು. ಇಲ್ಲಿನ ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆಯ ಗಮನಕ್ಕೆ ತರಲಾಗಿದ್ದು, ಅಲ್ಲಿಂದ ವರದಿ ಬಂದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದ ಅವರು, ಅಲ್ಲಿಯವರೆಗೆ ತಾತ್ಕಾಲಿಕವಾಗಿ ಯಾಂತ್ರೀಕೃತ ಮರಳುಗಾರಿಕೆಯನ್ನು ನಿಲ್ಲಿಸಲು ಸೂಚನೆ ನೀಡಿದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.