ಬರಲಿದೆ ಬಹೂಪಯೋಗಿ ಒಂದು ದೇಶ ಒಂದು ಕಾರ್ಡ್‌


Team Udayavani, Aug 9, 2021, 7:40 AM IST

ಬರಲಿದೆ ಬಹೂಪಯೋಗಿ ಒಂದು ದೇಶ ಒಂದು ಕಾರ್ಡ್‌

ಕುಂದಾಪುರ: ಒಂದೊಂದು ಇಲಾಖೆಗೆ ಹೋದಾಗ ಒಂದೊಂದು ಕಾರ್ಡ್‌. ಕಿಸೆಯಲ್ಲಿ ಹತ್ತಾರು ಕಾರ್ಡ್‌ಗಳನ್ನು ಇಟ್ಟುಕೊಂಡು ತಿರುಗಾಡುವುದು ಕಷ್ಟ. ಇದರ ಜತೆಗೆ ಎಲ್ಲದಕ್ಕೂ ಆಧಾರ್‌ ಲಿಂಕ್‌ ಮಾಡಬೇಕಾದ ಅನಿವಾರ್ಯತೆ. ಈ ಎಲ್ಲ ಚಿಂತೆಗಳಿಗೆ ಕೇಂದ್ರ ಸರಕಾರ ಪರಿಹಾರ ಕಂಡುಕೊಳ್ಳಲು ಸಿದ್ಧತೆ ನಡೆಸುತ್ತಿದೆ. ಎಟಿಎಂ ಕಾರ್ಡ್‌ ಮಾದರಿಯ ಒಂದು ಬಹೂಪಯೋಗಿ ಕಾರ್ಡ್‌ನಲ್ಲಿ ಎಲ್ಲ ಕಾರ್ಡ್‌ಗಳ ಮಾಹಿತಿಗಳೂ ಅಡಕಗೊಳ್ಳಲಿವೆ.

ಸೆಪ್ಟಂಬರ್‌ ವೇಳೆಗೆ:

2019ರ ಸೆಪ್ಟಂಬರ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬಹೂಪಯೋಗಿ  ಕಾರ್ಡ್‌ ಕುರಿತು ಘೋಷಣೆ ಮಾಡಿದ್ದು 2021ರಿಂದ ಚಾಲನೆ ದೊರೆಯಲಿದೆ ಎಂದಿದ್ದರು. ಸೆಪ್ಟಂಬರ್‌ನಿಂದ ನೋಂದಣಿ ಆರಂಭಗೊಳ್ಳುವ ನಿರೀಕ್ಷೆ ಇದೆ.

ನೇಮಕಾತಿ:

ಲಭ್ಯ ಮಾಹಿತಿ ಪ್ರಕಾರ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಪ್ರಾಯೋಗಿಕವಾಗಿ ಜಾರಿಯಾಗಲಿದೆ. ಹೈದರಾಬಾದ್‌ನ ತೇರಾ ಸಾಫ್ಟ್ವೇರ್‌ ಲಿಮಿಟೆಡ್‌ ಸಂಸ್ಥೆಗೆ ದತ್ತಾಂಶ ಸಂಗ್ರಹಿಸುವ ಜವಾಬ್ದಾರಿ ದೊರೆತಿದೆ. ಕಂಪೆನಿಯು ಈಗಾಗಲೇ ದತ್ತಾಂಶ ಸಂಗ್ರಾಹಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ಸ್ವಯಂಸೇವಾ ಸಂಸ್ಥೆಗಳ ಮೂಲಕ ನೇಮಕಾತಿ ಮಾಡಲಾಗುತ್ತಿದ್ದು ಆ. 11ರಂದು ಕುಂದಾಪುರದಲ್ಲಿ ಈ ತಾಲೂಕಿನವರ ಸಂದರ್ಶನ ಪರೀಕ್ಷೆ ನಡೆಯಲಿದೆ. 3 ಪಂಚಾಯತ್‌ಗೊಬ್ಬ ಸಿಬಂದಿ, ನಗರದಲ್ಲಿ ಐವರ ನೇಮಕಾತಿ ಆಗಲಿದೆ. ಒಂದು ಪಂಚಾಯತ್‌ನಲ್ಲಿ ನೋಂದಣಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಇನ್ನೊಂದು ಪಂಚಾಯತ್‌ನಲ್ಲಿ ನಡೆಯಲಿದೆ. ಮಾಹಿತಿಯನ್ನು ಕಂಪ್ಯೂಟರ್‌ಗೆ ಅಳವಡಿಸುವವರಿಗೆ ಒಂದು ಕಾರ್ಡ್‌ಗೆ 8 ರೂ.ಗಳಂತೆ ನಿಗದಿ ಮಾಡಲಾಗಿದೆ. ಅವರು ಸಾರ್ವಜನಿಕರ ಎಲ್ಲ ಬಗೆಯ ಕಾರ್ಡ್‌ಗಳ ಮಾಹಿತಿ ಸಂಗ್ರಹಿಸಲಿದ್ದಾರೆ. ಬಳಿಕ ಹೊಸ ಕಾರ್ಡ್‌ಗೆ ಹೊಸ ಸಂಖ್ಯೆ ದೊರೆಯಲಿದೆ.

ಸಂದೇಹ:

ಇಂತಹ ಕಾರ್ಡ್‌ನಿಂದಾಗಿ ಅಮೂಲ್ಯ ದಾಖಲೆಗಳ ಮಾಹಿತಿ ಸೋರಿಕೆಯಾದೀತೇ ಎಂಬ ಸಂಶಯವೂ ಜನರನ್ನು ಕಾಡತೊಡಗಿದೆ. ಈಗಾಗಲೇ ಆಧಾರ್‌ ಕುರಿತು ಅನೇಕ ಗೊಂದಲಗಳು ಉಂಟಾಗಿ ಹಂತ ಹಂತವಾಗಿ ಅದನ್ನು ಸರಿಪಡಿಸಿಕೊಳ್ಳಲಾಗುತ್ತಿದೆ. ಬಹೂಪ ಯೋಗಿ ಕಾರ್ಡ್‌ನ ರೀತಿಯಲ್ಲೇ ಒಂದು ದೇಶ ಒಂದು ಪಡಿತರ ಚೀಟಿ ಹೊರತರಲು ಕೇಂದ್ರ ಸರಕಾರ ಸಿದ್ಧತೆ ನಡೆಸುತ್ತಿದ್ದು ಈಗಾಗಲೇ 17 ರಾಜ್ಯಗಳು ಒಪ್ಪಿಗೆ ನೀಡಿವೆ.

ಏನಿದು ಬಹೂಪಯೋಗಿ ಕಾರ್ಡ್‌ :

ಚಿಪ್‌ ಹೊಂದಿರುವ ಈ ಕಾರ್ಡ್‌ನಲ್ಲಿ ಆಧಾರ್‌, ಚಾಲನ ಪರವಾನಿಗೆ, ಬ್ಯಾಂಕ್‌ ಖಾತೆಗಳ ಮಾಹಿತಿ, ಕಿಸಾನ್‌ ಕಾರ್ಡ್‌, ಪಾನ್‌ ಕಾರ್ಡ್‌, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್‌, ಕಾರ್ಮಿಕ ಗುರುತಿನ ಚೀಟಿ, ಆಯುಷ್ಮಾನ್‌ ಕಾರ್ಡ್‌, ಜೀವವಿಮಾ ಮಾಹಿತಿ ಸಹಿತ 21 ಬಗೆಯ ಕಾರ್ಡ್‌ಗಳ ಮಾಹಿತಿ ಲಭ್ಯ.

ಚಿಪ್‌ ಹೊಂದಿರುವ ಕಾರಣ ದೇಶದ ಯಾವುದೇ ಸ್ಥಳದಲ್ಲಿ ಕಾರ್ಡನ್ನು ಸ್ವೆ„ಪ್‌ ಮಾಡಿ ನಿರ್ದಿಷ್ಟ ವಿವರಗಳನ್ನು ಸುಲಭವಾಗಿ ಪಡೆಯಬಹುದು. ವಿದೇಶದಲ್ಲಿ ಈ ಮಾದರಿಯ ಕಾರ್ಡ್‌ ಈಗಾಗಲೇ ಅಸ್ತಿತ್ವದಲ್ಲಿದೆ.

ಮಾಹಿತಿ ಬಂದಿಲ್ಲ :

ಈತನಕ ಬಹೂಪಯೋಗಿ ಕಾರ್ಡ್‌ಗೆ ಮಾಹಿತಿ ಸಂಗ್ರಹಿಸುವ ಕುರಿತು ಸರಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ಬಂದ ಬಳಿಕ ಅಗತ್ಯ ನೆರವು ನೀಡಲಾಗುವುದು.ಡಾ| ನವೀನ್‌ ಭಟ್‌, ಉಡುಪಿ ಜಿ.ಪಂ. ಸಿಇಒ  

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Lok Sabha poll 2024:ಕ್ಷೇತ್ರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ:  ಜಯಪ್ರಕಾಶ್‌ ಹೆಗ್ಡೆ

Lok Sabha poll 2024:ಕ್ಷೇತ್ರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.