ನಾಡ-ಮೊವಾಡಿ ಸೇತುವೆ ಸಂಪರ್ಕ ರಸ್ತೆ ವಿಸ್ತರಣೆಗೆ ಒಪ್ಪಿಗೆ

ವಾರದೊಳಗೆ ಕಾಮಗಾರಿ ಆರಂಭ ನಿರೀಕ್ಷೆ , ಎರಡೂ ಕಡೆಯಿಂದಲೂ ತಲಾ 100 ಮೀ. ರಸ್ತೆ ನಿರ್ಮಾಣ

Team Udayavani, Jan 26, 2021, 2:40 AM IST

ನಾಡ-ಮೊವಾಡಿ ಸೇತುವೆ ಸಂಪರ್ಕ ರಸ್ತೆ ವಿಸ್ತರಣೆಗೆ ಒಪ್ಪಿಗೆ

ಕುಂದಾಪುರ:  ತ್ರಾಸಿ ಹಾಗೂ ನಾಡ ಗ್ರಾಮಗಳನ್ನು ಸಂಪರ್ಕಿಸುವ ಮೊವಾಡಿ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಸಂಪರ್ಕ ರಸ್ತೆಯನ್ನು ಮೊದಲಿದ್ದ ಕರಡು ಯೋಜನೆಗಿಂತ ಹೆಚ್ಚು ದೂರದವರೆಗೆ ವಿಸ್ತರಿಸಲು ಈಗ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಿಂದ ತಾಂತ್ರಿಕ ಒಪ್ಪಿಗೆ ಸಿಕ್ಕಿದೆ. ವಾರದೊಳಗೆ ಸಂಪರ್ಕ ರಸ್ತೆಯ ನಿರ್ಮಾಣ ಕಾಮಗಾರಿ ಆರಂಭವಾಗುವ ಸಾಧ್ಯತೆಗಳಿವೆ.

ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಮೊವಾಡಿ ಬಳಿ ಸೌಪರ್ಣಿಕಾ ನದಿಗೆ ಸೇತುವೆ ನಿರ್ಮಾಣಕ್ಕೆ 9.28 ಕೋ.ರೂ. ಅನುದಾನ ಮಂಜೂರಾಗಿತ್ತು. ಈಗ ಸೇತುವೆಯ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಸಂಪರ್ಕ ರಸ್ತೆ ಕಾಮಗಾರಿ ಆಗದಿರುವುದರಿಂದ ಸೇತುವೆಯು ವಾಹನ ಸಂಚಾರಕ್ಕೆ ಮುಕ್ತವಾಗಲು ವಿಳಂಬವಾಗಿದೆ.

ತಲಾ 100 ಮೀ. ವಿಸ್ತರಣೆ :

ಈ ಸೇತುವೆಯನ್ನು ಮೊವಾಡಿ ಹಾಗೂ ನಾಡ ಕಡೆಯಿಂದ ಸಂಪರ್ಕಿಸುವ ಕಡೆಗಳಲ್ಲಿ ತಲಾ 35 ಮೀ. ರಸ್ತೆ ನಿರ್ಮಾಣಕ್ಕೆ ಈ ಮೊದಲು ತಯಾರಿಸಿದ ಕರಡು ನಕ್ಷೆಯಲ್ಲಿ ಯೋಜನೆ ರೂಪಿಸಲಾಗಿತ್ತು. ಆದರೆ ಇದರಿಂದ ಅಷ್ಟೇನು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಊರವರ ಬೇಡಿಕೆ ಮೇರೆಗೆ ರಸ್ತೆ ವಿಸ್ತರಣೆಗೆ ತಾಂತ್ರಿಕ ಒಪ್ಪಿಗೆ ಸಿಕ್ಕಿದೆ. ಈಗ ಮೊವಾಡಿ ಕಡೆಯಿಂದ 103 ಮೀ. ಹಾಗೂ ನಾಡ ಕಡೆಯಿಂದ 100 ಮೀ. ರಸ್ತೆ ವಿಸ್ತರಣೆಯಾಗಲಿದೆ.

ಹತ್ತಿರದ ಮಾರ್ಗ :

ಮೊವಾಡಿ ನಿವಾಸಿಗಳಿಗೆ ತ್ರಾಸಿ ಅಥವಾ ಮುಳ್ಳಿಕಟ್ಟೆಗೆ ಬರಲು ಕನಿಷ್ಠ 3 ಕಿ.ಮೀ. ದೂರವಿದೆ. ಆದರೆ ಸೇತುವೆಯಾದರೆ ನಾಡ ಪೇಟೆಗಿರುವ ಅಂತರ ಕೇವಲ 1 ಕಿ.ಮೀ. ಮಾತ್ರ. ಮೊವಾಡಿಯಲ್ಲಿ ಕ್ರಿಶ್ಚಿಯನ್‌ ಸಮುದಾಯದವರು ಹೆಚ್ಚಿರುವುದರಿಂದ ಪಡುಕೋಣೆ ಇಗರ್ಜಿಗೆ ಹೋಗಲು ಕೂಡ ಹತ್ತಿರದ ಮಾರ್ಗವಾಗಿದೆ. ಈ ಭಾಗದಲ್ಲಿ ಸುಮಾರು 300ಕ್ಕೂ ಅಧಿಕ ಮನೆಗಳಿದ್ದು, ಸೇತುವೆಯಿಂದ ಸಾವಿರಾರು ಮಂದಿಗೆ ಪ್ರಯೋಜನವಾಗಲಿದೆ.

ಸುದಿನ ವರದಿ :

ಈ ನಾಡ – ಮೊವಾಡಿ ಸೇತುವೆ ನಿರ್ಮಾಣ, ಕಾಮಗಾರಿ ವಿಳಂಬ, ರಸ್ತೆಗಾಗಿ ಜಾಗ ಭೂಸ್ವಾಧೀನ ಆಗದಿರುವ ಕುರಿತಂತೆ “ಉದಯವಾಣಿ ಸುದಿನ’ವು ಅನೇಕ ಬಾರಿ ವಿಶೇಷ ವರದಿಗಳನ್ನು ಪ್ರಕಟಿಸಿ ಸಂಬಂಧಪಟ್ಟವರ ಗಮನಸೆಳೆದಿತ್ತು.

ಮೊವಾಡಿಯ ಸೇತುವೆಯನ್ನು ಸಂಪರ್ಕಿಸುವ ರಸ್ತೆಯ ವಿಸ್ತರಣೆಗೆ ನಾವು ಪ್ರಸ್ತಾವ ಕಳುಹಿಸಿದ್ದೆವು. ಅದಕ್ಕೀಗ ತಾಂತ್ರಿಕ ಒಪ್ಪಿಗೆ ಸಿಕ್ಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಸಹ ನಡೆಸಿ, ಭೂಸ್ವಾಧೀನ ಪಡಿಸಿಕೊಳ್ಳುವ ಮಾಲಕರಿಗೆ ಕೊಡಬೇಕಾದ ದರ ಪಟ್ಟಿಯನ್ನು ಕೂಡ ನಿಗದಿಪಡಿಸಲಾಗಿದೆ. ವಾರದೊಳಗೆ ರಸ್ತೆ ಕಾಮಗಾರಿ ಆರಂಭಗೊಳ್ಳಲಿದ್ದು, ಮಾರ್ಚ್‌ನೊಳಗೆ ಸೇತುವೆ ಸಂಚಾರಕ್ಕೆ ಮುಕ್ತವಾಗಲಿದೆ.– ಸಂಗಮೇಶ್‌, ಎಕ್ಸಿಕ್ಯೂಟಿವ್‌ ಎಂಜಿನಿಯರ್‌, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.