ರೋಪ್‌ವೇ ನಿರ್ಮಾಣದಿಂದ ಪರಿಸರಕ್ಕೆ ಹಾನಿಯಿಲ್ಲ

ಕೊಡಚಾದ್ರಿ "ರೋಪ್‌ ವೇ' ಡಿಪಿಆರ್‌ಗೆ ಚಾಲನೆ ನೀಡಿ ಶಾಸಕ ಸುಕುಮಾರ ಶೆಟ್ಟಿ

Team Udayavani, Sep 16, 2020, 6:33 AM IST

Kudರೋಪ್‌ವೇ ನಿರ್ಮಾಣದಿಂದ ಪರಿಸರಕ್ಕೆ ಹಾನಿಯಿಲ್ಲ

ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ಡಿಪಿಆರ್‌ ತಯಾರಿಗೆ ಚಾಲನೆ ನೀಡಿದರು.

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಿಂದ ಕೊಡಚಾದ್ರಿ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ರೋಪ್‌ ವೇ ಯೋಜನೆಯ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಗೆ ಚಾಲನೆ ಕಾರ್ಯಕ್ರಮ ಮಂಗಳವಾರ ಕೊಲ್ಲೂರು ದೇವಸ್ಥಾನದಲ್ಲಿ ನಡೆಯಿತು.

ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಅವರು ದೀಪ ಬೆಳಗಿಸಿ ಡಿಪಿಆರ್‌ ತಯಾರಿಗೆ ಚಾಲನೆ ನೀಡಿ ಮಾತನಾಡಿ, ಈ ಮಹತ್ವಾಕಾಂಕ್ಷಿ ಯೋಜನೆಯ ಬಗ್ಗೆ ನಾನು ಈ ಹಿಂದೆಯೇ ಕನಸು ಕಂಡಿದ್ದೆ. ಅದಕ್ಕೀಗ ಸಂಸದ ಬಿ.ವೈ. ರಾಘವೇಂದ್ರ ಅವರು ಜೀವ ನೀಡುತ್ತಿದ್ದಾರೆ. 6ರಿಂದ 8 ಕಿ.ಮೀ. ಉದ್ದದ ಈ ರೋಪ್‌ ವೇ ಭಾರತದಲ್ಲಿಯೇ ಅತೀ ಉದ್ದವಾದ ರೋಪ್‌ವೇ ಎನಿಸಿಕೊಳ್ಳಲಿದೆ. ಯುರೋಪಿಯನ್‌ ಮಾದರಿಯಲ್ಲಿ ಯೋಜನೆ ರೂಪುಗೊಳ್ಳಲಿದೆ. ಇದರಿಂದ ಕೊಲ್ಲೂರಿಗೆ ಬರುವ ಯಾತ್ರಾರ್ಥಿಗಳು, ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಲಿದೆ. ಈ ಭಾಗದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.

ಶೀಘ್ರ ಪೂರ್ಣ
ರೋಪ್‌ವೇ ನಿರ್ಮಾಣದಿಂದ ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗುವುದಿಲ್ಲ. ಅರಣ್ಯಕ್ಕೂ ಸಮಸ್ಯೆಯಾಗುವುದಿಲ್ಲ. ಕೊಡಚಾದ್ರಿಯ ಅದ್ಭುತ ದೃಶ್ಯಗಳನ್ನು ಕಣ್ತುಂಬಿ ಕೊಳ್ಳಲು ಸಾಧ್ಯವಾಗುತ್ತದೆ. ಕೊಡಚಾದ್ರಿ, ಸರ್ವಜ್ಞ ಪೀಠವನ್ನು ಎಲ್ಲರೂ ನೋಡಲು ಅನುಕೂಲವಾಗುತ್ತದೆ ಎಂದು ಹೇಳಿದ ಅವರು, ರೋಪ್‌ವೇ ಆಗುವುದರಿಂದ ಜೀಪ್‌ ಚಾಲಕರು/ ಮಾಲಕರು ಆತಂಕ ಪಡಬೇಕಾಗಿಲ್ಲ. ರೋಪ್‌ವೇ ಸ್ಥಳದ ತನಕ ಹೋಗಲು ಜೀಪ್‌ಗ್ಳ ಆವಶ್ಯಕತೆ ಇರುತ್ತದೆ. ಪ್ರವಾಸೋದ್ಯಮ ಅಭಿವೃದ್ಧಿಯಾದಂತೆ ಅವಕಾಶಗಳು ಸೃಷ್ಟಿಯಾಗುತ್ತವೆ. ಸರಕಾರ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಯುಪಿಐಎಲ್‌ ಸಂಸ್ಥೆ ಮೂಲಕ ಅನುಷ್ಠಾನವಾಗಲಿರುವ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಜಿ.ಪಂ. ಸದಸ್ಯರಾದ ಶಂಕರ ಪೂಜಾರಿ, ಎಂಜಿನಿಯರ್‌ ರಾಜೇಶ ಪ್ರಸಾದ್‌, ಎಸ್‌.ಬಿ.ಆರ್‌. ಪಾಟೀಲ್‌, ಉದ್ಯಮಿ ವೆಂಕಟೇಶ್‌ ಕಿಣಿ, ಸ್ಥಳೀಯ ಪ್ರಮುಖರಾದ ಡಾ| ಅತುಲ್‌ ಕುಮಾರ್‌ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಪೂಜಾರಿ ಜೆಡ್ಡು, ಕಳಿ ಚಂದ್ರಯ್ಯ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು. ಬೈಂದೂರು ಮಂಡಲ ಬಿಜೆಪಿ ಅಧ್ಯಕ್ಷ ದೀಪಕ್‌ ಕುಮಾರ ಶೆಟ್ಟಿ ಸ್ವಾಗತಿಸಿ, ಕಾರ್ಯ ಕ್ರಮ ನಿರ್ವಹಿಸಿದರು.

ಉದಯವಾಣಿ ವರದಿ
ಕೊಡಚಾದ್ರಿ ಏರಲು ಕೊಲ್ಲೂರಿನಿಂದ ರೋಪ್‌ವೇ ನಿರ್ಮಾಣವಾಗಲಿದೆ ಎಂಬ ಬಗ್ಗೆ ಜೂ. 24ರಂದು ಉದಯವಾಣಿಯು ವಿಸ್ತೃತ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Pernankila Temple:  ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Pernankila Temple: ಪೆರ್ಣಂಕಿಲ ದೇಗುಲ: ಧಾರ್ಮಿಕ ಪ್ರಕ್ರಿಯೆ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Kaup ಸುಗ್ಗಿ ಮಾರಿಪೂಜೆ ಸಂಪನ್ನ: 2 ಲಕ್ಷಕ್ಕೂ ಅಧಿಕ ಭಕ್ತರಿಂದ ಕ್ಷೇತ್ರ ದರ್ಶನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

Vadabandeshwara Temple: ವಡಭಾಂಡೇಶ್ವರ ಬಲರಾಮ ದೇವಸ್ಥಾನ: ವೈಭವದ ಮಹಾ ರಥೋತ್ಸವ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.