ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ; ಜೀವನ ಪ್ರೀತಿ ಬೆಳೆಸಿ

ಆತ್ಮಹತ್ಯೆ ಪ್ರಕರಣ ಗಣನೀಯ ಹೆಚ್ಚಳ, ಕುಂದಾಪುರ: 3 ವರ್ಷದಲ್ಲಿಯೇ 2021ರಲ್ಲಿ ಗರಿಷ್ಠ ಆತ್ಮಹತ್ಯೆ

Team Udayavani, Jan 11, 2022, 7:38 PM IST

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ ; ಜೀವನ ಪ್ರೀತಿ ಬೆಳೆಸಿ

ಕುಂದಾಪುರ: ಸಾಲಬಾಧೆ, ಖಿನ್ನತೆ ,ಅನಾರೋಗ್ಯ, ಆರ್ಥಿಕ, ಕೌಟುಂಬಿಕ, ಔದ್ಯೋಗಿಕ, ಕೋವಿಡ್‌ನ‌ಂತಹ ಸಾಂಕ್ರಾಮಿಕ ಪರಿಸ್ಥಿತಿಗಳ ಪರಿಣಾಮ ಜೀವ ಕಳೆದುಕೊಳ್ಳುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಆದರೆ ಸೋಲನ್ನು ಸವಾಲಾಗಿ ಸ್ವೀಕರಿಸಿ, ಒಂದು ಗುರಿ ವಿಫಲವಾದರೆ, ಮತ್ತೂಂದು ಗುರಿ ಆಯ್ಕೆ ಮಾಡಿ. ಎಲ್ಲ ಸಮಸ್ಯೆಗೂ ಆತ್ಮಹತ್ಯೆಯೊಂದೇ ಪರಿಹಾರವಲ್ಲ. ಜೀವನ ಪ್ರೀತಿಯನ್ನು ಬೆಳೆಸಿಕೊಳ್ಳಿ ಎನ್ನುವ ಮಾತನ್ನು ಮನಶಾಸ್ತ್ರಜ್ಞರು, ಆಪ್ತಸಮಾಲೋಚಕರು ಹೇಳುತ್ತಿದ್ದಾರೆ.

ಕುಂದಾಪುರ, ಬೈಂದೂರು ತಾಲೂಕು ವ್ಯಾಪ್ತಿ ಯಲ್ಲಿಯೇ ಕಳೆದ 3 ವರ್ಷದಲ್ಲಿ ಬರೋಬ್ಬರಿ 335 ಮಂದಿ ಸಾವನ್ನಪ್ಪಿದ್ದು, ಅದರಲ್ಲೂ 2021ರಲ್ಲಿಯೇ ಗರಿಷ್ಠ 120 ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕಕಾರಿ ಬೆಳವಣಿಗೆ.

120 ಮಂದಿ ಆತ್ಮಹತ್ಯೆ
2021 ರ ಜ.1 ರಿಂದ ಡಿ.31 ವರೆಗೆ ಕುಂದಾಪುರ, ಬೈಂದೂರು ತಾಲೂಕಿನ 7 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 120 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019 ರಲ್ಲಿ 110 ಮಂದಿ ಸಾವನ್ನಪ್ಪಿದ್ದರೆ, 2020 ರಲ್ಲಿ 105 ಮಂದಿ ಜೀವ ಕಳೆದುಕೊಂಡಿದ್ದರು.

40 ವರ್ಷ ಮೇಲ್ಪಟ್ಟವರೇ ಅಧಿಕ
ಆತ್ಮಹತ್ಯೆ ಮಾಡಿಕೊಂಡವರಲ್ಲಿ 40 ವರ್ಷ ಮೇಲ್ಪಟ್ಟವರ ಪ್ರಮಾಣವೇ ಅಧಿಕವಾಗಿದೆ. ಕಳೆದ 3 ವರ್ಷಗಳಲ್ಲಿ 40 ವರ್ಷ ಮೇಲ್ಪಟ್ಟವರು 216 ಮಂದಿ ಹಾಗೂ 40 ವರ್ಷಕ್ಕಿಂತ ಕೆಳಗಿನ 119 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2019 ರಲ್ಲಿ 40 ವರ್ಷ ಮೇಲಿನ 77, 40 ವರ್ಷಕ್ಕಿಂತ ಕೆಳಗಿನ 33 ಮಂದಿ, 2020 ರಲ್ಲಿ 40 ವರ್ಷಕ್ಕಿಂತ ಮೇಲಿನ 76 ಹಾಗೂ ಅದಕ್ಕಿಂತ ಕೆಳಗಿನ 29 ಮಂದಿ, 2021 ರಲ್ಲಿ 40 ವರ್ಷ ಮೇಲ್ಪಟ್ಟ 63 ಮಂದಿ ಹಾಗೂ ಅದಕ್ಕಿಂತ ಕೆಳಗಿನ 57 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಾರಣಗಳೇನು?
ಕುಂದಾಪುರ ಭಾಗದಲ್ಲಿ ಕಳೆದ ವರ್ಷ ಸಾವನ್ನಪ್ಪಿದವರ ಪೈಕಿ ಬಹುತೇಕ ಪ್ರಕರಣಗಳಲ್ಲಿ ಆರ್ಥಿಕ, ಸಾಲಬಾಧೆಯೇ ಹೆಚ್ಚು. ಇನ್ನು ಕೆಲವರು ಅನಾರೊಗ್ಯದಿಂದ, ಮತ್ತೆ ಕೆಲವರು ಕೋವಿಡ್‌, ಲಾಕ್‌ಡೌನ್‌ನಿಂದಾಗಿ ಕೆಲಸವಿಲ್ಲದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅದರಲ್ಲೂ ಕಳೆದ ವರ್ಷ 40 ವರ್ಷ ಮೇಲ್ಪಟ್ಟ ಹಾಗೂ ಅದಕ್ಕಿಂತ ಕಡಿಮೆ ವಯಸ್ಸಿನವರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಕಡಿಮೆ ಒಂದೇ ಆಗಿದ್ದು, ಇದಕ್ಕೆ ಹಣಕಾಸು, ಸಾಲ, ಔದ್ಯೋಗಿಕ ವಿಷಯಗಳೇ ಬಹುಮುಖ್ಯ ಕಾರಣವಾಗಿದೆ.

ಮನಶಾಸ್ತ್ರಜ್ಞರ ಸಲಹೆಗಳು
1 ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡರೆ ಸಮಸ್ಯೆ ಬಗೆಹರಿಯವುದಿಲ್ಲ. ಜೀವ, ಜೀವನ ಎರಡೂ ಅಮೂಲ್ಯ.
2 ಸಂಕಷ್ಟದ ಸಮಯದಲ್ಲಿ ತಾಳ್ಮೆ, ಸಂಯಮವೇ ಮುಖ್ಯ.
3 ಎಲ್ಲರೂ ಅನೇಕ ಸಮಸ್ಯೆ, ಸಂಕಷ್ಟವನ್ನು ಎದುರಿಸಿ, ಗೆದ್ದು ಬಂದಿರುವುದು. ಜಗತ್ತು, ದೇಶ ಸಹ ಕೊರೊನಾದಂತಹ ಸಾಕಷ್ಟು ಮಹಾಮಾರಿಗಳನ್ನು ಕಂಡಿದೆ. ಅದರಿಂದ ಗೆದ್ದು ಬಂದಿದೆ ಸಹ.
4 ವಿವೇಚನೆಯಿಂದ ಅವಲೋಕಿಸಿ, ದುಡುಕಿನ ನಿರ್ಧಾರ ಬೇಡ.
5ಯುವಕರಿಗೂ ಜೀವನದಲ್ಲಿ ಸಾಕಷ್ಟು ಅವಕಾಶಗಳಿವೆ. ಒಂದು ಅವಕಾಶದಲ್ಲಿ ವಿಫಲವಾದರೆ ಬದುಕೇ ಮುಗಿದಿಲ್ಲ.
6 ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ, ಆಶಾವಾದ ಬೆಳೆಸಿಕೊಳ್ಳಿ.

ಅನಗತ್ಯ ಭಯ ಬೇಡ
ಆತ್ಮಹತ್ಯೆಗೆ ಈಗಿನ ಪ್ರಕಾರ ಕೋವಿಡ್‌ನ‌ಂತಹ ಪರಿಸ್ಥಿತಿ ಬಹುಮುಖ್ಯ ಕಾರಣ. ಇನ್ನು ಬಡತನ, ಹೆದರಿಕೆ, ಆತ್ಮಗೌರವಕ್ಕೆ ಧಕ್ಕೆ, ಇನ್ನಿತರ ಕಾರಣವೂ ಇರಬಹುದು. ಆದರೆ ಜೀವನ ಎಲ್ಲಕ್ಕಿಂತ ಮುಖ್ಯ. ನಕರಾತ್ಮಕ ಯೋಚನೆಗಳಿದ್ದವರು ಮನಶಾಸ್ತ್ರಜ್ಞರ, ಆಪ್ತ ಸಮಾಲೋಚಕರ ಸಲಹೆಗಳನ್ನು ಪಡೆಯಿರಿ. ಸಮಸ್ಯೆಗಳಿದ್ದರೆ ವೈದ್ಯಕೀಯ ಚಿಕಿತ್ಸೆ, ಕೌನ್ಸಿಲಿಂಗ್‌ ಪಡೆಯಿರಿ. ಅನಗತ್ಯ ಭಯ ಹುಟ್ಟಿಸುವಂತಹ ವೆಬ್‌ಸೈಟ್‌, ಸಾಮಾಜಿಕ ಜಾಲತಾಣ, ಮಾಧ್ಯಮ ಎಲ್ಲದರಿಂದಲೂ ದೂರ ಇರಿ.
– ಡಾ| ಪಿ.ವಿ. ಭಂಡಾರಿ, ಮನಶಾಸ್ತ್ರಜ್ಞರು ಉಡುಪಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.