2ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್‌ ನಿರೀಕ್ಷೆ

ಮರವಂತೆ ಮೀನುಗಾರಿಕಾ ಹೊರಬಂದರು

Team Udayavani, Oct 18, 2021, 5:58 AM IST

2ನೇ ಹಂತದ ಕಾಮಗಾರಿಗೆ ಶೀಘ್ರ ಟೆಂಡರ್‌ ನಿರೀಕ್ಷೆ

ಸಾಂದರ್ಭಿಕ ಚಿತ್ರ.

ಕುಂದಾಪುರ: ಮರವಂತೆಯ ಹೊರ ಬಂದರು ಪ್ರದೇಶದಲ್ಲಿ ಎರಡನೇ ಹಂತದ ಬ್ರೇಕ್‌ವಾಟರ್‌ ವಿಸ್ತರಣೆ ಕಾಮಗಾರಿಗೆ ರಾಜ್ಯ ಮಟ್ಟದ ಅಂದಾಜು ಪಟ್ಟಿ ಮತ್ತು ಸಲಹಾ ಸಮಿತಿಯ ಅನುಮೋದನೆ ಸಿಕ್ಕಿದ್ದು, ಇನ್ನು ತಾಂತ್ರಿಕ ಒಪ್ಪಿಗೆ ಬಳಿಕ ಟೆಂಡರ್‌ ಪ್ರಕ್ರಿಯೆ ಆರಂಭವಾಗಲಿದೆ.

ಮೀನುಗಾರಿಕೆ ವಿಳಂಬ…
ಇದರೊಂದಿಗೆ ಈ ಎರಡನೇ ಹಂತದ ಕಾಮಗಾರಿಗೆ ಬಜೆಟ್‌ನಲ್ಲಿ ಅನುದಾನ ಘೋಷಣೆಯಾಗಿ 2 ವರ್ಷ ಕಳೆದರೂ, ಕಾಮಗಾರಿ ಆರಂಭ ವಿಳಂಬಗೊಂಡಿತ್ತು. ಇದು ಇಲ್ಲಿನ ಮೀನುಗಾರರಿಗೆ ಅಸಮಾಧಾನ ಮೂಡುವಂತೆ ಮಾಡಿತ್ತು. ಮಾತ್ರವಲ್ಲದೆ ಬ್ರೇಕ್‌ ವಾಟರ್‌ ಸಮಸ್ಯೆ ಯಿಂದಾಗಿ ದೋಣಿಗಳು ಬಂದರು ಒಳಗೆ ಪ್ರವೇಶಕ್ಕೆ ತೊಂದರೆಯಾಗಿದ್ದರಿಂದ, ಒಂದು ತಿಂಗಳ ಕಾಲ ವಿಳಂಬವಾಗಿ ಮೀನುಗಾರಿಕೆ ಆರಂಭಗೊಂಡಿತ್ತು. ಈಗಲೂ ಕಡಲಬ್ಬರ ಹೆಚ್ಚಾಗಿರುವ ಸಮಯದಲ್ಲಿ ದೋಣಿಗಳು ಸುಲಭವಾಗಿ ಬಂದರಿನ ಒಳ ಪ್ರವೇಶಿಸಲು ಕಷ್ಟವಾಗುತ್ತಿದೆ.
ಆದರೆ ಬೆಂಗಳೂರಿನಲ್ಲಿ ಕಳೆದ ವಾರ ರಾಜ್ಯ ಮಟ್ಟದ ಅಂದಾಜು ಪಟ್ಟಿ ಮತ್ತು ಸಲಹಾ ಸಮಿತಿಯ ಸಭೆ ನಡೆದಿದ್ದು, ಸಭೆಯಲ್ಲಿ ಈ ಕಾಮಗಾರಿಗೆ ಅನುಮೋದನೆ ಸಿಕ್ಕಿದೆ. 10 ಕೋ.ರೂ.ಗಿಂತ ಹೆಚ್ಚಿನ ಅನುದಾನದ ಕಾಮಗಾರಿಗೆ ಈ ಸಮಿತಿಯ ಅನುಮೋದನೆ ಅಗತ್ಯವಾಗಿದೆ. ಇನ್ನು ತಾಂತ್ರಿಕ ಸಮಿತಿಯ ಅನುಮೋದನೆ ಬಾಕಿ ಇದ್ದು, ಅದು 10-15 ದಿನದೊಳಗೆ ಸಿಗಲಿದ್ದು, ಆ ಬಳಿಕ ಟೆಂಡರ್‌ ಕರೆಯಲಿದ್ದಾರೆ. ಒಟ್ಟಾರೆ ಇನ್ನು 20-25 ದಿನದೊಳಗೆ ಟೆಂಡರ್‌ ಕರೆಯುವ ಸಾಧ್ಯತೆಗಳಿವೆ ಎಂದು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಇದನ್ನೂ ಓದಿ:ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

85 ಕೋ.ರೂ. ವೆಚ್ಚದ ಕಾಮಗಾರಿ
ಈ ಎರಡನೇ ಹಂತದ ಕಾಮಗಾರಿಗೆ ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ, ಆಗಿನ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಈಗಿನ ಸಚಿವ ಎಸ್‌. ಅಂಗಾರ ಮುತುವರ್ಜಿಯಿಂದಾಗಿ ಬಜೆಟ್‌ನಲ್ಲಿ 85 ಕೋ.ರೂ. ಅನುದಾನ ಘೋಷಿಸಲಾಗಿತ್ತು. ಉತ್ತರ ಭಾಗದಲ್ಲಿ 560 ಮೀ. ಹಾಗೂ ದಕ್ಷಿಣ ಭಾಗದಲ್ಲಿ 60 ಮೀ. ಸೇರಿ ಒಟ್ಟು 620 ಮೀ. ತಡೆಗೋಡೆ ನಿರ್ಮಾಣಗೊಳ್ಳಲಿದ್ದು, ದಕ್ಷಿಣ ಭಾಗದಲ್ಲಿ ದೋಣಿಗಳ ಪ್ರವೇಶಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

ಸುದಿನ ವರದಿ
ಎರಡನೇ ಹಂತದ ಬ್ರೇಕ್‌ ವಾಟರ್‌ ಕಾಮಗಾರಿ ಕುರಿತಂತೆ “ಉದಯವಾಣಿ ಸುದಿನ’ವು ಅನೇಕ ಬಾರಿ ವಿಶೇಷ ವರದಿ ಪ್ರಕಟಿಸಿ, ಗಮನಸೆಳೆದಿತ್ತು. ಇದಲ್ಲದೆ ಅ.8 ರಂದು “ಉದಯವಾಣಿ ಸುದಿನ’ವು “ಇನ್ನು ಆರಂಭಗೊಳ್ಳದ ಎರಡನೇ ಹಂತದ ಕಾಮಗಾರಿ’ ಎನ್ನುವುದಾಗಿ ವಿಶೇಷ ವರದಿ ಪ್ರಕಟಿಸಿತ್ತು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.