ಮೊಳಕೆಯೊಡೆಯದ ನೆಲಗಡಲೆ ಬೀಜ; ಆತಂಕದಲ್ಲಿ ಕರಾವಳಿ ಕೃಷಿಕರು


Team Udayavani, Jan 15, 2022, 5:17 PM IST

ಮೊಳಕೆಯೊಡೆಯದ ನೆಲಗಡಲೆ ಬೀಜ; ಆತಂಕದಲ್ಲಿ ಕರಾವಳಿ ಕೃಷಿಕರು

ತೆಕ್ಕಟ್ಟೆ: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಬಾರಿ ಕರಾವಳಿ ರೈತರಿಗೆ ಕುಂದಾಪುರ ಕೃಷಿ ಇಲಾಖೆಯಿಂದ ಪೂರೈಕೆಯಾದ ನೆಲಗಡಲೆ ಬೀಜವನ್ನು ಈಗಾಗಲೇ ನೂರಾರು ಎಕರೆ ಭೂಮಿಯಲ್ಲಿ ಬಿತ್ತನೆ ಮಾಡಲಾಗಿದ್ದು, ಕೆಲವು ಪರಿಸರದಲ್ಲಿ ಬೀಜ ಬಿತ್ತನೆ ಮಾಡಿ ದಿನಗಳೇ ಕಳೆದರೂ ಮೊಳಕೆಯೊಡೆಯದಿರುವ ಬಗ್ಗೆ ಕರಾವಳಿಯ ನೆಲಗಡಲೆ ಕೃಷಿಕರಲ್ಲಿ ಆತಂಕ ಸೃಷ್ಟಿಯಾಗಿದೆ.

ಕುಂದಾಪುರ ಕೃಷಿ ಇಲಾಖೆಯ ವತಿಯಿಂದ ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ರೈತರಿಗೆ ವಿತರಣೆಯಾದ ನೆಲಗಡಲೆ ಬೀಜವು ಇಲ್ಲಿನ ಕೊರವಡಿ, ಕೊಮೆ, ತೆಕ್ಕಟ್ಟೆ, ಗೋಪಾಡಿ, ಮಣೂರು ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ತಮ್ಮ ತಮ್ಮ ಕೃಷಿಭೂಮಿಯಲ್ಲಿ ಬಿತ್ತನೆ ಮಾಡಿದ್ದಾರೆ. ಬೀಜ ಬಿತ್ತನೆ ಮಾಡಿ ಹಲವು ದಿನಗಳಾದರೂ ಕೂಡ ಕೆಲವು ಬೀಜಗಳು ಮಾತ್ರ ಮೊಳಕೆ ಬಂದಿದೆ. ಕಳಪೆ ಗುಣಮಟ್ಟದ ಬೀಜದಿಂದಾಗಿ ಈ ಬಾರಿ ಸಮಸ್ಯೆಯಾಗಿರುವ ಬಗ್ಗೆ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಕೊಮೆ ಕೊರವಡಿ ವಿವಿಧೋದ್ದೇಶ ಸಹಕಾರ ಸಂಘ ನಿ. ಇದರ ಅಧ್ಯಕ್ಷ ಶೇಖರ್‌ ಕಾಂಚನ್‌ ಕೊಮೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಣ್ಣಿನಲ್ಲಿ ಹೆಚ್ಚಿದ ತೇವಾಂಶ
ಈ ಬಾರಿ ಹಿಂಗಾರಿನಲ್ಲಿ ಹವಾಮಾನ ವೈಪರಿತ್ಯದಿಂದಾಗಿ ನವೆಂಬರ್‌ ತಿಂಗಳ ಕೊನೆಯವರೆಗೂ ಮಳೆಯ ತೀವ್ರತೆ ಹೆಚ್ಚಾಗಿತ್ತು. ಈ ಸಂದರ್ಭದಲ್ಲಿ ಕೃಷಿ ಭೂಮಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಭೌಗೋಳಿಕವಾಗಿ ಭೂಮಿಯಲ್ಲಿನ ತೇವಾಂಶ ಕಡಿಮೆಯಾಗದ ಪರಿಣಾಮ ಬಿತ್ತನೆ ಬೀಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ.

ಸೂಕ್ತ ಪರಿಹಾರ ಕಲ್ಪಿಸಿ
ಈ ಬಾರಿ ಕುಂದಾಪುರ ಕೃಷಿ ಇಲಾಖೆಯ ವತಿಯಿಂದ ವಿತರಿಸಲಾದ ನೆಲಗಡಲೆ ಬೀಜವನ್ನು ಸುಮಾರು 5 ಎಕರೆ ವಿಸ್ತೀರ್ಣದ ಕೃಷಿಭೂಮಿಯಲ್ಲಿ ಜನವರಿ 1 ರಂದು ಬಿತ್ತನೆ ಮಾಡಲಾಗಿದೆ. ಆದರೆ ಬೀಜ ಬಿತ್ತನೆ ಮಾಡಿ ದಿನಗಳೇ ಕಳೆದರೂ ಕೂಡ ಮೊಳಕೆ ಬಾರದೇ ಶೇ.20 ರಷ್ಟು ಗಿಡಗಳು ಮಾತ್ರ ಹುಟ್ಟಿದೆ. ಕಳೆದ ಬಾರಿ ಖಾಸಗಿಯವರಿಂದ ಬೀಜ ಖರೀದಿ ಮಾಡಲಾಗಿದ್ದು ಉತ್ತಮ ಇಳುವರಿ ಬಂದಿದೆ. ಈ ಬಾರಿ ಬೀಜದಲ್ಲಿ ಗುಣಮಟ್ಟದ ಕೊರತೆ ಎದ್ದು ಕಾಣುತ್ತಿದ್ದು ಈ ಬಗ್ಗೆ ಇಲಾಖೆ ಸೂಕ್ತ ಪರಿಹಾರ ನೀಡಬೇಕು.
– ವಾದಿರಾಜ ಹತ್ವಾರ್‌ ಬೆಟ್ಟಿನಮನೆ,
ಹಿರಿಯ ಪ್ರಗತಿಪರ ಕೃಷಿಕರು

ವೈಜ್ಞಾನಿಕವಾಗಿ ಅಧ್ಯಯನ
ಇಲಾಖೆಯಿಂದ ರೈತರಿಗೆ ಪೂರೈಕೆಯಾದ ಬೀಜವನ್ನು ಮೊದಲು ಪ್ರಾಯೋಗಿಕವಾಗಿ ರೈತ ಕೇಂದ್ರದಲ್ಲಿ ಬಿತ್ತನೆ ಮಾಡಿದಾಗ ಶೇ.81ರಷ್ಟು ಮೊಳಕೆ ಬಂದಿದೆ. ಅಲ್ಲದೇ ಈಗಾಗಲೇ ಪೂರೈಕೆಯಾಗಿರುವ ಬೀಜವನ್ನು ಕೋಟ, ಮಣೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಬಿತ್ತನೆ ಮಾಡಲಾಗಿದ್ದು, ಗಿಡಗಳು ಹುಟ್ಟಿದೆ. ಈ ಬಾರಿ ಹವಾಮಾನ ವೈಪರಿತ್ಯದಿಂದಾಗಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮಣ್ಣಿನಲ್ಲಿ ತೇವಾಂಶದ ಕೊರತೆಯೇ ಹೆಚ್ಚಾಗಿದೆಯೇ ಎನ್ನುವ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ನಡೆಸಲಾಗುವುದು. ರೈತರು ನೆಲಗಡಲೆ ಬೀಜ ಖರೀದಿಸಿದ ಚೀಲದ ಲೆಬಲ್‌ ಹಾಗೂ ಬಿಲ್‌ಗ‌ಳನ್ನು ಇಲಾಖೆಗೆ ನೀಡಿ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.
– ರೂಪಾ ಜೆ. ಮಾಡ, ಸಹಾಯಕ ನಿರ್ದೇಶಕಿ, ಕೃಷಿ ಇಲಾಖೆ ಕುಂದಾಪುರ

– ಟಿ. ಲೋಕೇಶ್‌ ಆಚಾರ್ಯ, ತೆಕ್ಕಟ್ಟೆ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.