ಪೇಟೆಗೆ ಬರಲು ಹೊಳೆ ದಾಟುವುದೇ ಕಷ್ಟ !


Team Udayavani, Jul 23, 2021, 6:50 AM IST

ಪೇಟೆಗೆ ಬರಲು ಹೊಳೆ ದಾಟುವುದೇ ಕಷ್ಟ !

ಕುಂದಾಪುರ: ಹಂಗಳೂರಿನ ವಿನಾಯಕ ಥಿಯೇಟರ್‌ ಬಳಿಯಿಂದ ಕೋಡಿ ಪ್ರದೇಶಕ್ಕೆ ಹೋಗುವ ರಸ್ತೆಯಲ್ಲಿ ನಡೆಯಬೇಕಿದ್ದ ಸೇತುವೆ ಕಾಮಗಾರಿ ನಡೆಯದ ಕಾರಣ ಆ ಭಾಗದ ಜನರು ನಿರ್ಬಂಧಿತರಾಗಿದ್ದಾರೆ. ತಾತ್ಕಾಲಿಕವಾಗಿ ಮಾಡಿಕೊಟ್ಟ ರಸ್ತೆಯನ್ನು ಮಳೆಯ ಕಾರಣದಿಂದ ತೆರವು ಮಾಡಲಾಗಿದ್ದು ಜನ ಹೊಳೆ ದಾಟಿಕೊಂಡು ಬರಬೇಕಾದ ಸ್ಥಿತಿ ಇದೆ.

ಕೋಟಿ ರೂ.ಗಳ ಕೋಡಿ ಸೇತುವೆ:

ಕೋಡಿ ಭಾಗಕ್ಕೆ ಎರಡು ಸೇತುವೆಗಳು 2 ಕೋ.ರೂ. ವೆಚ್ಚದಲ್ಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮೂಲಕ ಮಂಜೂರಾಗಿದೆ. ಕಾಮಗಾರಿ ಮಾರ್ಚ್‌ ವೇಳೆಗೆ ಮುಗಿದು ಜನರ, ವಾಹನಗಳ ಓಡಾಟಕ್ಕೆ ದೊರೆಯಬೇಕಿತ್ತು. ಆದರೆ ಕಾಮಗಾರಿ ಸಂದರ್ಭ ಸಮೀಪದ ಮನೆಗಳಿಗೆ ತೊಂದರೆಯಾಗುತ್ತಿದೆ ಎಂದು ಕಾಮಗಾರಿಯ ನೀಲನಕಾಶೆಯಲ್ಲೇ ಬದಲಾವಣೆ ಮಾಡಲಾಯಿತು. ಅದಾದ ಬಳಿಕ ಒಂದು ಬಾರಿ ಮಾಡಿದ ಕಾಮಗಾರಿಯನ್ನು ಇಲಾಖೆ ಇನ್ನಷ್ಟು ಗಟ್ಟಿಯಾಗಿ ನಿರ್ಮಿಸಬೇಕೆಂದು ಅಗೆದು ತೆಗೆಸಿ ಹಾಕಿತು. ಆ ಕಾರಣದಿಂದ ವಿಳಂಬ ಆದರೂ ಕಾಮಗಾರಿಯ ಬಾಳಿಕೆ ಹೆಚ್ಚು ಬರುತ್ತದೆ ಎಂದು ಗುಣಮಟ್ಟದ ಕಾಮಗಾರಿಯ ಕಾಳಜಿಗಾಗಿ ಇಲಾಖೆಯ ಮೇಲೆ ಜನ ಹೆಚ್ಚಿನ ವಿಶ್ವಾಸ ಇಟ್ಟರು. ಆದರೆ ಅನಂತರದ ದಿನಗಳಲ್ಲಿ ಕಾಮಗಾರಿ ವೇಗ ಪಡೆದುಕೊಳ್ಳಲೇ ಇಲ್ಲ

ಅಪೂರ್ಣ:

ಒಂದು ಸೇತುವೆಯ ಸ್ಲಾéಬ್‌ ಕಾಮಗಾರಿ ಪೂರ್ಣವಾಗಿದೆ. ಅದರಿಂದ ರಸ್ತೆಗೆ  ಸಂಪರ್ಕ ಒದಗಿಸಿಲ್ಲ. ಇನ್ನೊಂದು ಸೇತುವೆಯ ಪಿಲ್ಲರ್‌ ಕಾರ್ಯ ಕೂಡ ಆಗಿಲ್ಲ. ಕಲ್ಲು ಒಡೆಯುವ ಕೆಲಸವೇ ಬಾಕಿ ಇದೆ. ಆದರೆ ರಸ್ತೆ ಅಗೆತ ಆಗಿದೆ. ವಾಹನಗಳ ಓಡಾಟಕ್ಕೆಂದು ತಾತ್ಕಾಲಿಕವಾಗಿ ಪೈಪ್‌ ಅಳವಡಿಸಿ ವ್ಯವಸ್ಥೆ ಮಾಡಿಕೊಡಲಾಗಿತ್ತು. ಬಸ್‌ ಸಂಚಾರ ಹಾಗೂ ಘನ ವಾಹನಗಳು ನಿರ್ಬಂಧಿತವಾದ ಕಾರಣ ಇದರ ಮೂಲಕ ರಿಕ್ಷಾಗಳು ಹಾಗೂ ಇತರ ವಾಹನಗಳು ಸಂಚರಿಸುತ್ತಿದ್ದವು. ಕೋಡಿ ಭಾಗಕ್ಕೆ ಸೀವಾಕ್‌, ಸಮುದ್ರ ತೀರ ಸೇರಿದಂತೆ ಪ್ರವಾಸಿಗರನ್ನು ಕರೆದೊಯ್ಯಲು ರಿಕ್ಷಾಗಳಿಗೂ ಇದೇ ಆಧಾರವಾಗಿತ್ತು.

ತೆರವು:

ಇಲ್ಲಿ ತಾತ್ಕಾಲಿಕ ಮೋರಿ ನಿರ್ಮಿಸಿದ ಕಾರಣ ಈ ಭಾಗದ ಜನರಿಗೇನೋ  ಅನುಕೂಲವಾಯಿತು. ಆದರೆ ಹೊಳೆಯಲ್ಲಿ ನೀರಿನ ಹರಿವು ಹೆಚ್ಚಿರುತ್ತದೆ. ತಡೆ ಒಡ್ಡಿದರೆ ಕೋಟೇಶ್ವರ, ಬೀಜಾಡಿ ಭಾಗದ ಗದ್ದೆಗಳು ಮುಳುಗಡೆ ಯಾಗುತ್ತದೆ. ಆಗ ಅನಿವಾರ್ಯವಾಗಿ ತಡೆಯನ್ನು ತೆರವುಗೊಳಿಸಿ ನೀರಿನ ಹರಿವನ್ನು ಸುಗಮಗೊಳಿಸಬೇಕಾ ಗುತ್ತದೆ. ತಡೆ ತೆರವಾದಾಗ ಯಾವುದೇ ವಾಹನಗಳು/ಜನ ಹೊಳೆ ದಾಟಲು ಇಲ್ಲಿ ಪರ್ಯಾಯವೇ ಇಲ್ಲ.

ರೈತರ ಆಗ್ರಹ:

ಕೋಡಿ, ಹಂಗಳೂರು ಭಾಗದ ಜನರು ತಾತ್ಕಾಲಿಕ ಮೋರಿ ನಿರ್ಮಿಸಿ ಹೊಳೆ ದಾಟಲು ವ್ಯವಸ್ಥೆ ಮಾಡಿಕೊಡಿ ಎಂದು ಆಗ್ರ ಹಿಸಿದ್ದಾರೆ. ಯಾವುದೇ ಕಾರಣಕ್ಕೂ ಹರಿಯುವ ನೀರಿಗೆ ತಡೆ ಒಡ್ಡಬೇಡಿ, ಕಷ್ಟಪಟ್ಟು ಮಾಡಿದ ಕೃಷಿ ನಾಶವಾಗುತ್ತದೆ ಎಂದು ಕೋಟೇಶ್ವರ, ಬೀಜಾಡಿ ಭಾಗದ ರೈತರು ಆಗ್ರಹಿಸಿದ್ದಾರೆ. ಇದೇ ಕಾರಣಕ್ಕೆ ರವಿವಾರ ಒಂದಷ್ಟು  ಜನ ಸೇರಿ ಮಾತಿನ ಚಕಮಕಿಯೂ ನಡೆದಿತ್ತು. ಪೊಲೀಸರು, ಅಧಿಕಾರಿಗಳು ಭೇಟಿ ನೀಡುವಂತಾಯಿತು.

ಹೊಳೆಯಲ್ಲಿ  ಸಂಚಾರ ಅನಿವಾರ್ಯ :

ಪಾದಚಾರಿಗಳು ಹೊಳೆ ದಾಟಿ ಬರುತ್ತಾರೆ. ನೀರಿನ ಹರಿವು ಹೆಚ್ಚಿದ್ದಾಗ ಇದು ಅಪಾಯಕ್ಕೆ ದಾರಿ. ಅಷ್ಟಲ್ಲದೆ ಕೆಲವರು ದ್ವಿಚಕ್ರ ವಾಹನಗಳು, ಸೈಕಲ್‌ ಮೊದಲಾದವನ್ನೂ ದಾಟಿಸುತ್ತಾರೆ. ಬೇರೆಲ್ಲ ವಾಹನಗಳೂ ಕೋಟೇಶ್ವರದ ಸಮೀಪ ಇರುವ ಎಂಕೋಡಿ ರಸ್ತೆ ಮೂಲಕ ಅಥವಾ ಕುಂದಾಪುರ ಚರ್ಚ್‌ ರಸ್ತೆ ಮೂಲಕ ಕೋಡಿಗೆ ಹೋಗಬೇಕು. ಈ ಅನನುಕೂಲ ಸದ್ಯದ ಮಾಹಿತಿ ಪ್ರಕಾರ ಇನ್ನೂ ಒಂದು ತಿಂಗಳು ಮುಂದುವರಿಯಲಿದೆ. ಕಾಮಗಾರಿ ವೇಗ ಪಡೆಯುತ್ತಿದ್ದರೆ ಈ ಮಳೆಗಾಲದಲ್ಲಿ ಜನರಿಗೆ ಈ ತಾಪತ್ರಯ ಇರುತ್ತಿರಲಿಲ್ಲ. ವಿಳಂಬದ ಕಾರಣ ದಿಂದಾಗಿ ಜನ ಸಂಕಷ್ಟ ಪಡುವಂತಾಗಿದೆ.

ಮಳೆ ಕಡಿಮೆಯಾದ ಬಳಿಕ ಅಥವಾ 1 ವಾರದ ಅನಂತರ ತಾತ್ಕಾಲಿಕವಾಗಿ ಮೋರಿ ಮಾಡಿ ಓಡಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಆ.15ರ ಅನಂತರ ಕಾಮಗಾರಿ ಆರಂಭವಾಗಲಿದ್ದು ಮುಕ್ಕಾಲಂಶ ಆದ ಸೇತುವೆ ಪೂರ್ಣವಾಗಲಿದೆ. ಬಾಕಿ ಉಳಿದ ಸೇತುವೆಯ ಕಾಮಗಾರಿಗೆ ಚಾಲನೆ ದೊರೆಯಲಿದೆ. ಕಾಮಗಾರಿ ಆರಂಭವಾದರೆ  50 ದಿನಗಳ ಅವಧಿ ಸಾಲುತ್ತದೆ.  ಹರ್ಷವರ್ಧನ, ಸಹಾಯಕ ಎಂಜಿನಿಯರ್‌, ಲೋಕೋಪಯೋಗಿ ಇಲಾಖೆ, ಕುಂದಾಪುರ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.