ಕುಂದಾಪುರ: ಕೋವಿಡ್‌ ಲಸಿಕೆಗಾಗಿ ಸರದಿ ಸಾಲು


Team Udayavani, Aug 3, 2021, 3:40 AM IST

ಕುಂದಾಪುರ: ಕೋವಿಡ್‌ ಲಸಿಕೆಗಾಗಿ ಸರದಿ ಸಾಲು

ಕುಂದಾಪುರ: ಕೆಲವು ದಿನಗಳ ಅನಂತರ ಬಂದ ಲಸಿಕೆಗಾಗಿ ಸೋಮವಾರ ಇಲ್ಲಿನ ಕಲಾಮಂದಿರ ಸಮೀಪದ ರಸ್ತೆಯಲ್ಲಿ  ಉದ್ದನೆಯ ಸರದಿ ಸಾಲು ಕಂಡು ಬಂತು.

ಕಳೆದ ವಾರ ಲಸಿಕೆ ಸರಬರಾಜು ಇರಲಿಲ್ಲ. ಜುಲೈ ಅಂತ್ಯವರೆಗೂ ನಿರ್ದಿಷ್ಟ ವರ್ಗದವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿತ್ತು. ಕೊರೊನಾ ಮುಂಚೂಣಿ ಕಾರ್ಯಕರ್ತರು, ಚಾಲಕರು, ಅಂಗವಿಕಲರು ಹೀಗೆ ಬೇರೆ ಬೇರೆ ವರ್ಗಗಳನ್ನು ಮಾಡಿ ಅವರಿಗಷ್ಟೇ ಲಸಿಕೆ ನೀಡಲಾಗುತ್ತಿತ್ತು. ಆ.2ರಿಂದ 18 ವಯೋಮಾನ ಕಳೆದ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಸಿಕೆ ಬರುತ್ತದೆ ಎಂದು ಮಾಹಿತಿ ಇದ್ದೇ ಸೋಮವಾರ ಮುಂಜಾನೆ 6 ಗಂಟೆಯಿಂದಲೇ ಲಸಿಕೆ ಕೇಂದ್ರ ಜೂನಿಯರ್‌ ಕಾಲೇಜಿನ ಕಲಾಮಂದಿರ ಬಳಿ ಜನರ ಸಾಲು ಆರಂಭ ವಾಗಿತ್ತು. 10 ಗಂಟೆ ವೇಳೆಗೆ ಮೈದಾನದ ಒಳಗಿಂದ ಕಾಲೇಜಿನ ಮುಖ್ಯದ್ವಾರದ ಮೂಲಕ ರಸ್ತೆಗೆ ಬಂದು ಕಲಾಮಂದಿರ ಗೇಟಿನ ಮೂಲಕ ಪ್ರವೇಶಕ್ಕೆ ಸಿದ್ಧವಾಗಿತ್ತು. ಸಾವಿರದಷ್ಟು ಮಂದಿ ಸಾಲಿನಲ್ಲಿ ಇದ್ದರು ಎಂದು ಅಂದಾಜಿಸಲಾಗಿದೆ. ಪೊಲೀಸರು ಜನಸಂದಣಿಯ ನಿಯಂತ್ರಣ ಕಾರ್ಯ ಮಾಡುತ್ತಿದ್ದರು.

ಕೊವಿಶೀಲ್ಡ್‌ ಹಾಗೂ ಕೊವ್ಯಾಕ್ಸಿನ್‌ ಲಸಿಕೆ ಎರಡೂ ಬಂದಿತ್ತು. 18ರ ವಯೋಮಾನ ದಾಟಿದ ಎಲ್ಲರಿಗೂ ಯಾವುದೇ ನಿರ್ಬಂಧ ಗಳಿಲ್ಲದೆ ಲಸಿಕೆ ನೀಡಲಾಗುತ್ತಿತ್ತು. ಆದ್ದರಿಂದ ಜನರ ಒತ್ತಡ ಹೆಚ್ಚಿತ್ತು. 850ರಷ್ಟು ಮಂದಿಗೆ ನೀಡುವಷ್ಟು ಲಸಿಕೆ ಬಂದಿತ್ತು. ಇಂತಹ ಪರಿಸ್ಥಿತಿ ತಾಲೂಕಿನ ಎಲ್ಲ ಕಡೆಯೂ ಇತ್ತು. ಎಲ್ಲ ಕಡೆಗೂ ಸೋಮವಾರ ಲಸಿಕೆ ಲಭ್ಯವಿದ್ದ ಕಾರಣ ಲಸಿಕೆಗಾಗಿ ಆಗಮಿಸಿದ ಜನರ ಸಂಖ್ಯೆ ದೊಡ್ಡದಿತ್ತು.

600 ಮಂದಿಗೆ ಕೊವಿಶೀಲ್ಡ್‌ ಹಾಗೂ 250 ಮಂದಿಗೆ ಆಗುವಷ್ಟು ಕೊವ್ಯಾಕ್ಸಿನ್‌ ಬಂದಿತ್ತು. ಮೊದಲು ಬಂದವರಿಗೆ ಹಾಗೂ ಪುರಸಭೆ ವ್ಯಾಪ್ತಿಯವರಿಗೆ ಆದ್ಯತೆ ನೀಡಲಾಗುತ್ತಿದ್ದು  ಆಗಮಿಸಿದ ಬಹುತೇಕ ಮಂದಿಗೆ ಲಸಿಕೆ ದೊರೆಯಲಿದೆ.  -ದಿನಕರ ಶೆಟ್ಟಿ, ಲಸಿಕೆ ಕೇಂದ್ರದ ನೋಡಲ್‌ ಅಧಿಕಾರಿ

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.