ನಾವುಂದ: ಬೈಕ್ ಸ್ಕಿಡ್; ಪತ್ರಿಕಾ ವಿತರಕ ಸಾವು
Team Udayavani, Nov 3, 2022, 11:28 PM IST
ಉಪ್ಪುಂದ: ಬೈಕ್ ಸ್ಕಿಡ್ ಆದ ಪರಿಣಾಮ ಪತ್ರಿಕಾ ವಿತರಕ ಮೃತಪಟ್ಟ ಘಟನೆ ಅರೆಹೊಳೆ ಕ್ರಾಸ್ ಬಳಿ ಸಂಭವಿಸಿದೆ.
ಕಿರಿಮಂಜೇಶ್ವರ ಗ್ರಾಮದ ಅರೆಹೊಳೆ ಕ್ರಾಸ್ ಸಿಲ್ವರ್ಕಾಲನಿ ನಿವಾಸಿ ಗಿರೀಶ ಮೋಗವೀರ (27) ಮೃತ ಪಟ್ಟವರು.
ಅವರು ನ.2ರಂದು ರಾತ್ರಿ ನಾವುಂದ ಬಳಿಯ ಪೆಟ್ರೋಲ್ ಬಂಕ್ನಲ್ಲಿ ಪೆಟ್ರೋಲ್ ಹಾಕಿಕೊಂಡು ಮನೆ ಕಡೆಗೆ ಹೋಗು ತ್ತಿದ್ದ ಸಂದರ್ಭ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡರು.
ತತ್ಕ್ಷಣ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅನಂತರ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದು ಕೊಂಡುಹೋಗಿದ್ದು ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟಿದ್ದಾರೆ. ಅವರು ಮನೆ ನಿರ್ಮಾಣದ ಯೋಜನೆಯಲ್ಲಿದ್ದರು.