ಬಿಲ್‌ ಬಾಕಿಗಾಗಿ ವಿದ್ಯುತ್‌ ನಿಲುಗಡೆ: ಬಿಎಸ್ಸೆನ್ನೆಲ್‌ ದೂರವಾಣಿ ಕೇಂದ್ರಗಳು ಸ್ತಬ್ಧ !

ಎಲ್ಲೆಡೆ ಸಮಸ್ಯೆ; 27.85 ಕೋ.ರೂ. ಪಾವತಿ; 2020 ಮಾ.31ರ ವರೆಗೆ ಕಾಲಾವಕಾಶ

Team Udayavani, Nov 6, 2019, 3:48 AM IST

dd-32

ಸಾಂದರ್ಭಿಕ ಚಿತ್ರ

ಕುಂದಾಪುರ: ಬಿಎಸ್ಸೆನ್ನೆಲ್‌ ವಿದ್ಯುತ್‌ ಬಿಲ್‌ ಪಾವತಿಸದ ಕಾರಣ ದೂರವಾಣಿ ವಿನಿಮಯ ಕೇಂದ್ರಗಳಿಗೆ ಮೆಸ್ಕಾಂ ವಿದ್ಯುತ್‌ ಸಂಪರ್ಕ ಕಡಿತಗೊಳಿಸುತ್ತಿದ್ದು, ಸರಕಾರಿ ಸ್ವಾಮ್ಯದ ಎರಡು ಸಂಸ್ಥೆಗಳ ತಿಕ್ಕಾಟದಿಂದ ಜನರು ತೊಂದರೆಗೀಡಾಗುತ್ತಿದ್ದಾರೆ.

ಐದು ಕಡೆ
ಕುಂದಾಪುರ ತಾಲೂಕಿನ ತಲ್ಲೂರು, ಕರ್ಕುಂಜೆ, ಆಲೂರು, ಬೆಳ್ಳಾಲ, ಗಂಗೊಳ್ಳಿ ಮೊದಲಾದೆಡೆ ಬಿಎಸ್ಸೆನ್ನೆಲ್‌ ದೂರವಾಣಿ ವಿನಿಮಯ ಕೇಂದ್ರಗಳ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದೆ. ಬಿಎಸ್ಸೆನ್ನೆಲ್‌ ಅಧಿಕಾರಿಗಳ ವಿನಂತಿ ಮೇರೆಗೆ ಒಂದೆರಡು ಕಡೆ ಮರುಸಂಪರ್ಕ ನೀಡಲಾಗಿದ್ದರೂ ಬಿಲ್‌ ಬಾಕಿ ಅಧಿಕ ಇರುವ ಕಾರಣ ಅನಿಯತ ಸಂಪರ್ಕ ನೀಡುವುದು ಅಸಾಧ್ಯ ಎನ್ನಲಾಗಿದೆ.

ತೊಂದರೆ
ಪಾವತಿ ಸಂದರ್ಭ ದೊಡ್ಡ ಎಕ್ಸ್‌ಚೇಂಜ್‌ಗಳ ಬಾಕಿ ಬಿಲ್‌ಗೆ ಆದ್ಯತೆ ನೀಡುತ್ತಿರುವ ಕಾರಣ ಸಣ್ಣಪುಟ್ಟ ಕೇಂದ್ರಗಳು ಬಾಕಿಯಾಗುತ್ತಿವೆ. ಇದ ರಿಂದ ಗ್ರಾಮಾಂತರ ಪ್ರದೇಶದಲ್ಲಿ ಬ್ಯಾಂಕಿಂಗ್‌ ವ್ಯವಹಾರ, ಪಡಿತರ ವ್ಯವಹಾರ ಇತ್ಯಾದಿಗೆ ತೊಂದರೆಯಾಗುತ್ತಿದೆ. ಜನರೇಟರ್‌ಗೆ ಡೀಸೆಲ್‌ಗೆ ಅನುದಾನ ಇಲ್ಲದ ಕಾರಣ ಅನೇಕ ಕಡೆ ಮೊಬೈಲ್‌ ಟವರ್‌ಗಳು ಸ್ತಬ್ಧವಾಗುತ್ತಿವೆ.

ಪತ್ರ ವ್ಯವಹಾರ
ಅ.21ರಂದು ಕೇಂದ್ರ ದೂರಸಂಪರ್ಕ ಖಾತೆ ಕಾರ್ಯದರ್ಶಿ ಅಂಶು ಪ್ರಕಾಶ್‌ ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಬಿಎಸ್ಸೆನ್ನೆಲ್‌ನ ಹಣಕಾಸು ಮುಗ್ಗಟ್ಟು ನಿವಾರಣೆಗೆ ಕ್ರಮ ಕೈಗೊಳ್ಳ ಲಾಗುತ್ತಿದೆ. 23 ಸಾವಿರ ವಯರ್‌ಲೆಸ್‌ ಎಕ್ಸ್‌ ಚೇಂಜ್‌ಗಳು ಕಾರ್ಯನಿರ್ವಹಿಸುತ್ತಿದ್ದು, ವಿದ್ಯುತ್‌ ಬಿಲ್‌ ಪಾವತಿಸದ ಕಾರಣ ಸಂಪರ್ಕ ಕಡಿತ ಮಾಡಿದರೆ ಗ್ರಾಮಾಂತರದಲ್ಲಿ ಸಂಪರ್ಕಕ್ಕೆ ಅಡಚಣೆಯಾಗುತ್ತದೆ. ಆದ್ದರಿಂದ 2020ರ ಮಾ.31ರವರೆಗೆ ವಿದ್ಯುತ್‌ ಬಿಲ್‌ ಪಾವತಿಸದಿದ್ದರೂ ಸಂಪರ್ಕ ಕಡಿತ ಮಾಡದಂತೆ ಎಸ್ಕಾಂಗಳಿಗೆ ಸೂಚಿಸಬೇಕೆಂದು ತಿಳಿಸಿದ್ದರು. ಆದರೆ ಎಸ್ಕಾಂ ಅಧಿಕಾರಿಗಳು ಅ.22ರಂದು ಸಂಪರ್ಕ ಕಡಿತ ಮಾಡುವಂತೆ ಆದೇಶಿಸಿದ್ದಾರೆ. ಈಗಾಗಲೇ 27.85 ಕೋ.ರೂ. ಪಾವತಿಸಿದ್ದು, ಇನ್ನು 3 ತಿಂಗಳಲ್ಲಿ ಬಾಕಿ ಪಾವತಿಸುವುದಾಗಿ ಬಿಎಸ್ಸೆನ್ನೆಲ್‌ ಸಿಜಿಎಂ ಸುಶಿಲ್‌ ಕುಮಾರ್‌ ಮಿಶ್ರಾ ಮುಖ್ಯ ಕಾರ್ಯದರ್ಶಿಗೆ ತಿಳಿಸಿ ದ್ದಾರೆ. ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರೂ ಸಂಪರ್ಕ ಕಡಿತಗೊಳಿಸದಂತೆ ಪತ್ರಿಸಿದ್ದಾರೆ.

ದೊಡ್ಡ ಸಂಸ್ಥೆ
ರಾಜ್ಯದಲ್ಲಿ ಬಿಎಸ್ಸೆನ್ನೆಲ್‌ 9.1 ಲಕ್ಷ ಸ್ಥಿರ ದೂರವಾಣಿ, 2.96 ಲಕ್ಷ ಬ್ರಾಡ್‌ಬ್ಯಾಂಡ್‌ ಇಂಟರ್‌ನೆಟ್‌ ಸಂಪರ್ಕಗಳು, 72 ಲಕ್ಷ ಮೊಬೈಲ್‌ ಸಂಪರ್ಕಗಳು, 53,700 ಹೈ ಸ್ಪೀಡ್‌ ಬ್ರಾಡ್‌ಬ್ಯಾಂಡ್‌, 21,200 ಲೀಸ್ಡ್ ಲೈನ್‌ಗಳನ್ನು ಹೊಂದಿದೆ. 2,958 ಎಕ್ಸ್‌ಚೇಂಜ್‌ಗಳು, 5,743ರಷ್ಟು 2ಜಿ, 3,370ರಷ್ಟು 3ಜಿ ಟವರ್‌ಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯ – ಕೇಂದ್ರ ಸರಕಾರಿ ಕಚೇರಿಗಳಲ್ಲದೆ ಬ್ಯಾಂಕ್‌ಗಳು, ಬಹುರಾಷ್ಟ್ರೀಯ ಕಂಪೆನಿ ಗಳು ಸೇರಿದಂತೆ ಅನೇಕ ಸಂಸ್ಥೆಗಳ ಜತೆ ವ್ಯವಹಾರ ನಡೆಸುತ್ತಿದೆ. ಪಂಚಾಯತ್‌ಗಳಿಗೆ ಒಎಫ್ಸಿ ನೀಡಿ ದೇಶದಲ್ಲಿ ಎರಡನೇ ಸ್ಥಾನ ಪಡೆದಿದೆ.

ಪಾವತಿಸಲಾಗುತ್ತಿದೆ
ಹಣ ದೊರೆತಂತೆ ಭಾಗಶಃ ಪಾವತಿಯನ್ನೂ ಬಿಎಸ್ಸೆನ್ನೆಲ್‌ ಮಾಡುತ್ತಾ ಬಂದಿದೆ. ಹಿರಿಯ ಅಧಿಕಾರಿಗಳು ಪತ್ರ ವ್ಯವಹಾರ ನಡೆಸಿದ್ದು, ಮುಂಬರುವ ಮಾರ್ಚ್‌ವರೆಗೆ ವಿದ್ಯುತ್‌ ಕಡಿತ ಮಾಡದಂತೆ ಆದೇಶ ನೀಡಲಾಗಿದೆ. ಅದನ್ನು ಸ್ಥಳೀಯವಾಗಿಯೂ ಕಳುಹಿಸಲಾಗಿದೆ.
– ವಿಜಯಲಕ್ಷ್ಮೀ ಆಚಾರ್ಯ ಡಿಜಿಎಂ, ಬಿಎಸ್ಸೆನ್ನೆಲ್‌, ಉಡುಪಿ

ಎಂಪಿಗೆ ದೂರು
ಗ್ರಾಮಾಂತರ ಪ್ರದೇಶದಲ್ಲಿ ಎಕ್ಸ್‌ಚೇಂಜ್‌ ಆಫ್ ಆದರೆ ಹತ್ತಾರು ಸಮಸ್ಯೆಗಳಾಗುತ್ತವೆ. ಖಾಸಗಿ ದೂರವಾಣಿ ಸೇವೆಯೂ ಇರುವುದಿಲ್ಲ. ಈ ಕುರಿತು ಸಂಸದರ ಗಮನಕ್ಕೆ ತರಲಾಗಿದೆ.
– ನಾರಾಯಣ ನಾಯ್ಕ, ನೇರಳಕಟ್ಟೆ ಬಿಎಸ್‌ಎನ್‌ಎಲ್‌ ಗ್ರಾಹಕರು

– ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.