ಗಂಗೊಳ್ಳಿಗೆ ಒಂದು ದಿನ ಮೊದಲೇ ಆಗಮಿಸಿದ ಮುತಾಲಿಕ್
Team Udayavani, Apr 15, 2022, 6:59 AM IST
ಕುಂದಾಪುರ: ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಗಂಗೊಳ್ಳಿಗೆ ಒಂದು ದಿನ ಮೊದಲೇ ಅಂದರೆ ಗುರುವಾರ ರಾತ್ರಿ ಆಗಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಎ. 15ರಂದು ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪ್ರಮೋದ್ ಮುತಾಲಿಕ್ ಅವರು ಭಾಗಿಯಾಗದಂತೆ ಬುಧವಾರ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶಿಸಿತ್ತು.
ಕಾರ್ಯಕ್ರಮದ ಮುನ್ನಾದಿನವಾದ ಗುರುವಾರ ರಾತ್ರಿ ಗಂಗೊಳ್ಳಿಗೆ ಆಗಮಿಸಿದ ಮುತಾಲಿಕ್ ಅವರು ದೇವಸ್ಥಾನಕ್ಕೆ ಭೇಟಿ ನೀಡಿ, ಕಾರ್ಯಕ್ರಮದ ಕುರಿತಂತೆ ಹಿಂದೂ ಜಾಗರಣ ವೇದಿಕೆ ಪ್ರಮುಖರ ಜತೆ ಚರ್ಚಿಸಿದರು.
ಈ ವೇಳೆ ಮಾತಾಡಿದ ಮುತಾಲಿಕ್ ಅವರು, ಹಿಂದುತ್ವಕ್ಕಾಗಿಯೇ ಹೋರಾಟ ಮಾಡುತ್ತಿರುವ ನನಗೆ ಹಿಂದುತ್ವದ ಹೆಸರಿನಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರಕಾರವೇ ನಿರ್ಬಂಧ ಹೇರುತ್ತಿರುವುದು ನಿಜಕ್ಕೂ ಬೇಸರ ತರಿಸಿದೆ. ಹಿಂದುತ್ವದ ಬಗ್ಗೆ ಇಲ್ಲಿ ಮಾತನಾಡದೆ ಇನ್ನೆಲ್ಲಿ ಮಾತನಾಡಬೇಕು ಎಂದು ಸರಕಾರ ಹಾಗೂ ಜಿಲ್ಲಾಡಳಿತವನ್ನು ಅವರು ಪ್ರಶ್ನಿಸಿದರು.
ಮತ್ತೂಂದೆಡೆ ಮುತಾಲಿಕ್ ಅವರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ನಿರ್ಧಾರದ ವಿರುದ್ಧ ಎಲ್ಲೆಡೆಯ ಹಿಂದೂ ಪರ ಸಂಘಟನೆಗಳಿಂದ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಪ್ರಮುಖರು ಜಿಲ್ಲೆಯ ಜನಪ್ರತಿನಿಧಿಗಳಿಗೆ ಕರೆ ಮಾಡಿದರೂ ಪ್ರತಿಕ್ರಿಯಿಸದೇ ನಿರ್ಲಕ್ಷ್ಯ ತೋರಿದ್ದು ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಚುನಾವಣೆಯಲ್ಲಿ ಇದಕ್ಕೆ ಉತ್ತರಿಸುವುದಾಗಿ ಹಿಂದೂ ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ಪ್ರಧಾನ ಕಾರ್ಯದರ್ಶಿ ಯಶವಂತ್ ಗಂಗೊಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ