ಅಕಾಲಿಕ ಮಳೆ: ಸುಗ್ಗಿ ಬೆಳೆ ಕಟಾವಿಗೂ ಅಡ್ಡಿ

ಭತ್ತದ ಕೃಷಿಕರಿಗೆ ಮುಂಗಾರಿನಂತೆ ಸುಗ್ಗಿಯಲ್ಲೂ ತಪ್ಪದ ವರುಣನ ಕಾಟ

Team Udayavani, Mar 25, 2022, 10:38 AM IST

crop

ಕುಂದಾಪುರ: ವಾಯುಭಾರ ಕುಸಿತದಿಂದಾಗಿ ಕೆಲವು ದಿನಗಳಿಂದ ವಿವಿಧೆಡೆ ಉತ್ತಮ ಮಳೆಯಾಗುತ್ತಿದೆ. ಆದರೆ ಈ ಅಕಾಲಿಕ ಮಳೆ ಭತ್ತದ ಕೃಷಿಕರನ್ನು ಕಂಗೆಡಿಸಿದೆ. ಕಳೆದ ಮುಂಗಾರಿನಲ್ಲಿ ಕಟಾವಿಗೆ ಅಡ್ಡಿಯಾಗಿದ್ದ ಮಳೆ, ಈಗ ಸುಗ್ಗಿ ಬೆಳೆಯ ಕಟಾವಿಗೂ ತೊಡಕಾಗಿ ಪರಿಣಮಿಸಿದೆ.

ಗುರುವಾರ ಬೆಳಗ್ಗಿನ ಜಾವ ಸುರಿದ ಭಾರೀ ಮಳೆಯು ಕುಂದಾಪುರದ ಹಲವೆಡೆಗಳಲ್ಲಿ ಕಟಾವಿಗೆ ಬಾಕಿ ಇರುವ ಭತ್ತದ ಕೃಷಿಕರ ನಿದ್ದೆಗೆಡಿಸಿದೆ. ಕುಂದಾಪುರದ ಕಾವ್ರಾಡಿಯ ಮುಂಬಾರು, ಕಂಬಳಗದ್ದೆ, ಸಿದ್ದಾಪುರ, ಹಾಲಾಡಿ, ಹೊಸಂಗಡಿ, ಅಮಾಸೆಬೈಲು, ಮಡಾಮಕ್ಕಿ ಸೇರಿದಂತೆ ಹಲವೆಡೆಗಳಲ್ಲಿ ಕಟಾವು ಕಾರ್ಯ ಬಾಕಿಯಿದೆ.

ಕೆಲವೆಡೆಗಳಲ್ಲಿ ಒಂದೆರಡು ವಾರಗಳ ಮೊದಲೇ ಕಟಾವು ಕಾರ್ಯ ಮುಗಿದಿರುವುದರಿಂದ ಕೆಲವು ರೈತರು ನಿರಾತಂಕವಾಗಿದ್ದಾರೆ. ಇನ್ನು ಕೆಲವೆಡೆಗಳಲ್ಲಿ ಒಂದೆರಡು ದಿನಗಳ ಹಿಂದೆ ಕಟಾವು ಮಾಡಿ, ಬಿಸಿಲಿಗೆ ಪೈರು ಒಣಗಲೆಂದು ಬಿಟ್ಟಿದ್ದು, ಅದು ಮಳೆಗೆ ಸಂಪೂರ್ಣ ಒದ್ದೆಯಾಗಿದೆ. ಮತ್ತೆ ಕೆಲವೆಡೆಗಳಲ್ಲಿ ಕಟಾವಿಗೆ ಬಾಕಿ ಇರುವ ಪೈರು ಗಾಳಿ – ಮಳೆಗೆ ಬಾಗಿ ನಿಂತು ನೀರಲ್ಲಿ ಒದ್ದೆಯಾಗಿದೆ. ಮಳೆ ಕಡಿಮೆಯಾದರೂ ಗದ್ದೆಯಲ್ಲಿ ನೀರು ಇರುವುದರಿಂದ ತತ್‌ಕ್ಷಣಕ್ಕೆ ಕಟಾವು ಯಂತ್ರವನ್ನು ಗದ್ದೆಗೆ ಇಳಿಸುವುದು ಕಷ್ಟ ಅನ್ನುವ ಆತಂಕ ಕೃಷಿಕರದ್ದಾಗಿದೆ.

ನೆಲಗಡಲೆ ಕೃಷಿಕರಿಗೆ ಸಮಸ್ಯೆ

ಕಿರಿಮಂಜೇಶ್ವರ, ಉಪ್ಪುಂದ, ಹೇರಂಜಾಲು, ಕಂಬದಕೋಣೆ, ನಾಗೂರು, ಬೈಂದೂರು ಮತ್ತಿತರ ಭಾಗಗಳಲ್ಲಿ ಹೆಚ್ಚಾಗಿ ಬೆಳೆಯುವ ನೆಲಗಡಲೆ ಕೃಷಿಕರಿಗೆ ಈ ಅಕಾಲಿಕ ಮಳೆ ಅಡ್ಡಿಪಡಿಸಿದೆ. ನೆಲಗಡಲೆ ಕೊಯ್ಲಿಗೆ ಮಳೆಯಿಂದಾಗಿ ಅಡ್ಡಿಯಾಗಿದ್ದು, ಕೆಲವೆಡೆಗಳಲ್ಲಿ ನೆಲಗಡಲೆ ಕೀಳುವ ಪ್ರಕ್ರಿಯೆ ನಡೆಯುತ್ತಿದ್ದು, ಅದನ್ನು ಗದ್ದೆಯಲ್ಲಿ ಒಣಗಲು ಬಿಡುತ್ತಾರೆ. ಆದರೆ ಮಳೆಯಿಂದಾಗಿ ಒದ್ದೆಯಾಗಿದ್ದು, ಅದನ್ನು ಒಣಗಿಸಲು ಸಹ ಕಷ್ಟವಾಗಿದೆ.

ಕಾತಿ, ಸುಗ್ಗಿಯಲ್ಲೂ ಮಳೆ ಸಮಸ್ಯೆ

ಭತ್ತದ ಪೈರು ಬೆಳೆದು, ಕಟಾವಿಗೆ ಸಮಯವಾಗಿರುವುದರಿಂದ ನಾಳೆ ಕಟಾವು ಮಾಡಬೇಕು ಅಂತ ಅಂದುಕೊಂಡಿದ್ದೇವು. ಕಟಾವು ಯಂತ್ರದವರಿಗೂ ಹೇಳಿದ್ದೆವು. ಆದರೆ ಬುಧವಾರ ರಾತ್ರಿ, ಗುರುವಾರ ಬೆಳಗ್ಗೆ ಜೋರು ಮಳೆಯಾಗಿದ್ದರಿಂದ ಕಟಾವು ಮಾಡಲು ಸಮಸ್ಯೆಯಾಗಿದೆ. ಮುಂಗಾರಿನಲ್ಲಂತೂ ಬೆಳೆದ ಕೃಷಿ ಕೈಗೆ ಸಿಕ್ಕಿರಲಿಲ್ಲ. ಈಗ ಸುಗ್ಗಿ ಬೆಳೆಯೂ ಹೀಗೆ ಆದರೆ ಹೇಗೆ ? – ರಾಜೇಂದ್ರ ಬೆಚ್ಚಳ್ಳಿ, ರೈತ 

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.