ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ


Team Udayavani, Nov 29, 2021, 5:38 AM IST

ಅಕಾಲಿಕ ಮಳೆ: ತರಕಾರಿ ಜತೆ ದ್ವಿದಳ ಧಾನ್ಯ ಬೆಳೆಗೂ ಹಿನ್ನಡೆ

ಕೋಟ: ಮುಂಗಾರಿನ ಭತ್ತ ಕಟಾವು ಅಂತ್ಯಗೊಳ್ಳುತ್ತಿದ್ದಂತೆ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿದಳ ಧಾನ್ಯ ಹಾಗೂ ತರಕಾರಿ ಬೆಳೆಯುವುದು ವಾಡಿಕೆ. ಆದರೆ ಈ ಬಾರಿ ಅಕಾಲಿಕ ಮಳೆಯಿಂದಾಗಿ ಭತ್ತ ಕಟಾವು ವಿಳಂಬವಾಗಿದೆ. ಕಟಾವು ಪೂರ್ಣಗೊಂಡಿರುವಲ್ಲಿ ಬೈಹುಲ್ಲು ಗದ್ದೆಯಿಂದ ವಿಲೇವಾರಿಯಾಗಿಲ್ಲ. ಆದ್ದರಿಂದ ದ್ವಿದಳ ಧಾನ್ಯ, ತರಕಾರಿ ಬೆಳೆಗೆ ಸಾಕಷ್ಟು ಹಿನ್ನಡೆಯಾಗಿದೆ.

ಅವಿಭಜಿತ ದ.ಕ. ಜಿಲ್ಲೆಯಲ್ಲಿ ಉದ್ದು, ಹುರುಳಿ, ಹೆಸರು ಹಾಗೂ ಅಳಸಂಡೆ, ಶೇಂಗಾ ಮುಂತಾದ ಬೆಳೆಗಳಿಗೆ ಪೂರಕವಾದ ಭೌಗೋಳಿಕ ವಾತಾವರಣವಿದೆ. ಭತ್ತ ಕಟಾವು ಅಂತ್ಯಗೊಳ್ಳುತ್ತಿದ್ದಂತೆ ಈ ಚಟುವಟಿಕೆಗಳು ಗರಿ ಗೆದರುತ್ತಿದ್ದವು. ಆದರೆ ಈ ಬಾರಿ ಇದುವರೆಗೂ ಪ್ರಕ್ರಿಯೆ ಆರಂಭಗೊಂಡಿಲ್ಲ.

ಉಡುಪಿ ಜಿಲ್ಲೆಯ ಸುಮಾರು 2,750 ಹೆಕ್ಟೇರ್‌ ಪ್ರದೇಶದಲ್ಲಿ ಹಾಗೂ ದ.ಕ. ಜಿಲ್ಲೆಯ 40 ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರಿನಲ್ಲಿ ದ್ವಿದಳ ಧಾನ್ಯ ಬೆಳೆಯಲಾಗುತ್ತದೆ. ಹೊರ ಜಿಲ್ಲೆಗಳಲ್ಲೂ ಅಕಾಲಿಕ ಮಳೆ ದ್ವಿದಳ ಧಾನ್ಯ ಬೆಳೆಗೆ ಸಮಸ್ಯೆ ತಂದಿದೆ. ಹೀಗಾಗಿ ದ್ವಿದಳ ಧಾನ್ಯದ ಉತ್ಪಾದನೆ ಗಣನೀಯವಾಗಿ ಕುಸಿಯಲಿದ್ದು, ಇವುಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.

ಶೇಂಗಾ ಬೆಳೆಗೂ ಹಿನ್ನಡೆ
ಉಡುಪಿ ಜಿಲ್ಲೆಯಲ್ಲಿ 4 ಸಾವಿರಕ್ಕೂ ಹೆಚ್ಚು ಶೇಂಗಾ ಬೆಳೆ ಗಾರರಿದ್ದು 18 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯ ಲಾಗುತ್ತದೆ. ಒಣಭೂಮಿಯಲ್ಲಿ ಶೇಂಗಾ ಬೆಳೆಯುವುದರಿಂದ ನವೆಂಬರ್‌ ಆರಂಭದಲ್ಲಿ ಭೂಮಿಯನ್ನು ಹದಮಾಡಲು ಆರಂಭಿಸಿ ಡಿಸೆಂಬರ್‌ನಲ್ಲಿ ಬಿತ್ತನೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಇದುವರೆಗೂ ಭೂಮಿ ಹದ ಮಾಡಲು ಸಾಧ್ಯವಾಗಿಲ್ಲ. ಆದ್ದರಿಂದ ಶೇಂಗಾ ಬೇಸಾಯಕ್ಕೆ ಸಾಕಷ್ಟು ಹಿನ್ನಡೆಯಾಗಿದ್ದು, ಮಳೆ ಕಡಿಮೆಯಾಗದಿದ್ದರೆ ಸಮಸ್ಯೆಯಾಗಲಿದೆ.

ಇದನ್ನೂ ಓದಿ:ಪರ್ಕಳ ಅಪಘಾತ ವೇಳೆ ಘರ್ಷಣೆ: ಮಣಿಪಾಲ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಗಳು

ಅಕಾಲಿಕ ಮಳೆಯಿಂದ ಭತ್ತ ಕಟಾವು ತಡವಾಗಿದೆ. ಆದರೆ ಮಳೆ ಕಡಿಮೆಯಾದಾಗ ದ್ವಿದಳ ಧಾನ್ಯ ಬಿತ್ತನೆ ಮಾಡಬಹುದಾಗಿದ್ದು ಮಣ್ಣಿನ ತೇವಾಂಶ ಮುಂತಾದ ಸಮಸ್ಯೆಗಳು ಎದುರಾಗುವುದಿಲ್ಲ. ಆದ್ದರಿಂದ ರೈತರು ಆತಂಕಪಡುವ ಅಗತ್ಯವಿಲ್ಲ. ಪೂರಕ ಮಾಹಿತಿಗಳನ್ನು ಪಡೆದು ಬೇಸಾಯದಲ್ಲಿ ತೊಡಗಿದರೆ ಈ ಬಾರಿಯೂ ಉತ್ತಮ ಬೆಳೆ ತೆಗೆಯಲು ಅವಕಾಶವಿದೆ.
– ನವೀನ್‌, ಬೇಸಾಯ ತಜ್ಞರು,
ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ

ದ್ವಿದಳ ಧಾನ್ಯಕ್ಕೆ ಹೆಚ್ಚು ತೇವಾಂಶ ಅಗತ್ಯ. ಹೀಗಾಗಿ ಕಟಾವು ಮಾಡಿದ ಬೈಹುಲ್ಲು ವಿಲೇವಾರಿ ಮಾಡಿ ಧಾನ್ಯ ಬಿತ್ತುವ ತನಕ ಪೂರಕ ತೇವಾಂಶವಿರುವುದು ಅನುಮಾನ ಹಾಗೂ ಡಿಸೆಂಬರ್‌ ಮಧ್ಯಾವಧಿಯಲ್ಲಿ ಶೇಂಗಾ ನಾಟಿ ಕೂಡ ಕಷ್ಟ. ಹೀಗಾಗಿ ಈ ಬಾರಿ ಹಿಂಗಾರು ಬೆಳೆ ಕೂಡ ನಷ್ಟವಾಗುವ ಸಂಭವವಿದೆ.
– ಶಿವಮೂರ್ತಿ ಉಪಾಧ್ಯ ಪಡುಕರೆ, ರೈತ

ಉಡುಪಿ ಜಿಲ್ಲೆಯಲ್ಲಿ ದ್ವಿದಳ
ಧಾನ್ಯ ಬೇಸಾಯ ಪ್ರಮಾಣ
-ಉದ್ದು – 2,500 ಹೆಕ್ಟೇರ್‌
-ಹುರುಳಿ -30 ಹೆಕ್ಟೇರ್‌
-ಹೆಸರು – 50 ಹೆಕ್ಟೇರ್‌
-ಅಳಸಂಡೆ – 154 ಹೆಕ್ಟೇರ್‌
-ಕಲ್ಲಂಗಡಿ – 60 ಹೆಕ್ಟೇರ್‌

– ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Siddapura ಹೆಂಗವಳ್ಳಿ: ಮರದಿಂದ ಬಿದ್ದು ಆಸ್ಪತ್ರೆ ಸೇರಿದ್ದ ಕೃಷಿಕ ಚಿಕಿತ್ಸೆ ಫಲಿಸದೆ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

9-temple

Temple History: ಶ್ರೀ ವಡಭಾಂಡೇಶ್ವರ ಬಲರಾಮ ದೇವಸ್ಥಾನ; ಹಿನ್ನೆಲೆ, ಇತಿಹಾಸ,ವಿಶೇಷಗಳು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.