ಮೆಸ್ಕಾಂ ಕಾಮಗಾರಿಗೂ ಯೋಜನೆ ವಿವರ ಫ‌ಲಕ: ಮನವಿ


Team Udayavani, Mar 24, 2022, 2:39 PM IST

mescom

ಕೋಟ: ಮೆಸ್ಕಾಂ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳು ನಡೆಯುವಾಗ ಯೋಜನೆಯ ವಿವರವನ್ನು ಫಲಕಗಳ ಮೂಲಕ ಬಹಿರಂಗ ಗೊಳಿಸಬೇಕು ಎಂದು ಕೋಟದಲ್ಲಿ ಮಾ. 23ರಂದು ನಡೆದ ಮೆಸ್ಕಾಂ ಜನ ಸಂಪರ್ಕ ಸಭೆಯಲ್ಲಿ ಮನವಿ ಸಲ್ಲಿಸಲಾಗಿದೆ.

ಎಲ್ಲ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳೂ ಯಾವ ಅನುದಾನ ದಲ್ಲಿ ನಡೆಯುತ್ತಿದೆ, ಯಾರ ಶಿಫಾರಸಿನ ಮೇರೆಗೆ ನಡೆಯುತ್ತಿದೆ. ಗುತ್ತಿಗೆದಾರರು ಯಾರು ಎನ್ನುವ ಮಾಹಿತಿಯನ್ನು ಫಲಕದಲ್ಲಿ ಅಳವಡಿಸಲಾಗುತ್ತದೆ. ಈ ರೀತಿ ಮಾಡುವುದರಿಂದ ಪಾರದರ್ಶಕತೆ ಹಾಗೂ ಅಸಮರ್ಪಕ ಕಾಮಗಾರಿ ತಡೆ ಸ್ವಲ್ಪ ಮಟ್ಟಿಗೆ ಸಾಧ್ಯವಿದೆ. ಮುಂದಿನ ದಿನಗಳಲ್ಲಿ ಮೆಸ್ಕಾಂ ಕೂಡ ಈ ಸಂಪ್ರದಾಯವನ್ನು ಪಾಲಿಸಬೇಕು ಎಂದು ರಾಘವೇಂದ್ರ ಐರೋಡಿ ಮನವಿ ಮಾಡಿದರು.

ಐರೋಡಿಯ ಸಿಗಡಿಪೋಂಡ್‌ ಪ್ರದೇಶ ದಲ್ಲಿ ಸುಮಾರು 28ಕ್ಕೂ ಹೆಚ್ಚು ಮನೆಗಳಲ್ಲಿ ವಿದ್ಯುತ್‌ ವೋಲ್ಟೇಜ್ ಸಮಸ್ಯೆ ಇದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. 100 ವೋಲ್ಟ್ನ ಹೆಚ್ಚುವರಿ ವಿದ್ಯುತ್‌ ಪರಿವರ್ತಕ ಈ ಭಾಗದಲ್ಲಿ ಅಳವಡಿಸಿದರೂ ಈ ಭಾಗಕ್ಕೆ ಸಂಪರ್ಕ ದೊರೆತಿಲ್ಲ. ಸಮಸ್ಯೆ ಶೀಘ್ರ ಪರಿಹರಿಸಬೇಕೆಂದು ಸುಮಾರು 20ಕ್ಕೂ ಹೆಚ್ಚು ಗ್ರಾಮಸ್ಥರು ಆಗ್ರಹಿಸಿದರು.

ಸಾರ್ವಜನಿಕ ಆಕ್ಷೇಪಣೆ ಇರುವುದರಿಂದ ವೋಲ್ಟೇಜ್ ಸಮಸ್ಯೆ ಪರಿಹರಿಸಲು ತೊಡಕಾಗಿದೆ. ಮುಂದೆ ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಮೆಸ್ಕಾಂ ಇಲಾಖೆಯ ಎ.ಇ.ಟಿ. ಶ್ರೀಕಾಂತ್‌, ಡಿ.ಸಿ.ಎ. ರಮೇಶ್‌. ಎ.ಇ.ಇ. ಪ್ರತಾಪ್‌, ಎಸ್‌.ಒ.ಗಳಾದ ವೈಭವ ಶೆಟ್ಟಿ, ಮಹೇಶ್‌, ಪ್ರಶಾಂತ್‌, ಕೋಟತಟ್ಟು ಗ್ರಾ.ಪಂ. ಸದಸ್ಯ ರವೀಂದ್ರ ತಿಂಗಳಾಯ, ಸ್ಥಳೀಯರಾದ ಶ್ರೀಕಾಂತ್‌ ಶೆಣೈ ಉಪಸ್ಥಿತರಿದ್ದರು. ಎಸ್‌.ಇ. ನರಸಿಂಹ ಪಂಡಿತ್‌, ಎ.ಒ.ಒ. ಸಂತೋಷ್‌, ಇ.ಇ. ರಾಕೇಶ್‌ ಗ್ರಾಹಕರೊಂದಿಗೆ ಆನ್‌ಲೈನ್‌ ಮೂಲಕ ಸಂವಾದ ನಡೆಸಿದರು.

ಸ್ಪನ್‌ ಪೋಲ್‌ ಅಳವಡಿಕೆಗೆ ಮನವಿ

ಸಾಲಿಗ್ರಾಮ ಭಾಗದಲ್ಲಿ ವಿದ್ಯುತ್‌ ಕಂಬಗಳಲ್ಲಿ ಹತ್ತಾರು ವೈಯರ್‌ಗಳು ಜೋತುಬೀಳುತ್ತಿದ್ದು ಕೆಲವು ಕಡೆ ಅಪಾಯಕಾರಿ ಸ್ಥಿತಿಯಲ್ಲಿದೆ. ಆದ್ದರಿಂದ ಇವುಗಳನ್ನು ತೆರವುಗಳಿಸಿ ಸ್ಪನ್‌ ಪೋಲ್‌ ಅಳವಡಿಸಿ ಹಾಗೂ ವಿದ್ಯುತ್‌ ಕಂಬಕ್ಕೆ ಅಳವಡಿಸಿದ ಖಾಸಗಿ ಜಾಹೀರಾತು ಫಲಕ, ವೈಯರ್‌ಗಳನ್ನು ತೆರವುಗೊಳಿಸಬೇಕು, ಸರಕಾರಿ ಜಾಗದಲ್ಲಿ ರಸ್ತೆಗೆ ತಾಗಿಕೊಂಡು ಅಳವಡಿಸಿದ ಖಾಸಗಿ ವಿದ್ಯುತ್‌ ಪರಿವರ್ತಕಗಳನ್ನು ತೆರವುಗೊಳಿಸಬೇಕು ಎಂದು ನಾಗರಾಜ್‌ ಗಾಣಿಗ ಸಾಲಿಗ್ರಾಮ ಮನವಿ ಮಾಡಿದರು.

ನಿರ್ಣಯ ಅನುಷ್ಠಾನವಾಗಲಿ

ಕೋಟದಲ್ಲಿ ಎ.ಇ.ಇ. ಕಚೇರಿಗೆ ಸ್ವಂತ ಕಟ್ಟಡ ನಿರ್ಮಿಸುವಂತೆ ನಾಲ್ಕು ವರ್ಷದಿಂದ ಬೇಡಿಕೆ ಸಲ್ಲಿಸಲಾಗುತ್ತಿದೆ ಹಾಗೂ ಮೆಸ್ಕಾಂ ಸರ್ವಿಸ್‌ ಸ್ಟೇಷನ್‌ನಲ್ಲಿ ಪೂರ್ಣ ಪ್ರಮಾಣದ ಸಿಬ್ಬಂದಿ , ಮೂಲ ಸೌಕರ್ಯಗಳು ಇಲ್ಲದಿರುವುದರಿಂದ ಕಾರ್ಯ ನಿರ್ವಹಣೆಗೆ ಸಮಸ್ಯೆಯಾಗುತ್ತಿದೆ ಎಂದು ಹಲವು ಸಭೆಯಲ್ಲಿ ಪ್ರಸ್ತಾವಿಸಲಾಗಿದೆ. ಆದರೆ ಈ ಸಮಸ್ಯೆ ಬಗೆಹರಿದಿಲ್ಲ. ಸಭೆಯ ನಿರ್ಣಯ ಅನುಷ್ಠಾನವಾಗದಿದ್ದರೆ ಜನ ಸಂಪರ್ಕ ಸಭೆಗಳು ವ್ಯರ್ಥ ಎಂದು ಸಾಮಾಜಿಕ ಹೋರಾಟಗಾರ ಕೋಟ ಗಿರೀಶ್‌ ನಾಯಕ್‌ ಅಸಮಾಧಾನ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

Airtel: ಕರ್ನಾಟಕದಲ್ಲಿ 6.9 ಮಿಲಿಯನ್ 5G ಗ್ರಾಹಕರು

10

3ನೇ ಸೆಮಿಸ್ಟರ್ ಸಮಾಜಶಾಸ್ತ್ರ ಪರೀಕ್ಷೆಗೆ 1ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ವಿತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!

Siddapura ವಾರಾಹಿಯಲ್ಲಿ ನೀರಿನ ಕೊರತೆ

Siddapura ವಾರಾಹಿಯಲ್ಲಿ ನೀರಿನ ಕೊರತೆ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

Udupi; ಆಟೋ ರಿಕ್ಷಾ ಪಲ್ಟಿ: ಮೂವರಿಗೆ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-cm-mysore

State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

12

5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ.!

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Lok Sabha Election: ಗಂಗಾ ಪೂಜೆಯ ಬಳಿಕ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Miyazaki: ಧಾರವಾಡ ಮಾವು‌ ಮೇಳದಲ್ಲಿ ಗಮನ ಸೆಳೆದ 2.5 ಲಕ್ಷ ರೂ.ಬೆಲೆಯ ಮಿಯಾ ಜಾಕಿ ಮಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.