ಆಲೂರಿಗೆ ಬರಲಿ ಪಿಯು ಕಾಲೇಜು


Team Udayavani, Jun 20, 2022, 1:24 PM IST

9

ಆಲೂರು: ಹರ್ಕೂರು ಹಾಗೂ ಆಲೂರು ಗ್ರಾಮವನ್ನೊಳಗೊಂಡ ಆಲೂರು ಗ್ರಾ.ಪಂ. ವ್ಯಾಪ್ತಿಗೆ ಮುಖ್ಯವಾಗಿ ಸರಕಾರಿ ಪ.ಪೂ. ಕಾಲೇಜೊಂದರ ಬೇಡಿಕೆಯಿದೆ. ಪ್ರೌಢಶಾಲೆಯವರೆಗೆ ಕಲಿತ ವಿದ್ಯಾರ್ಥಿಗಳು ಪಿಯುಸಿಗಾಗಿ ಹತ್ತಾರು ಕಿಲೋ ಮೀಟರ್‌ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಇದೆ.

ಆಲೂರಲ್ಲಿ ಪ.ಪೂ. ಕಾಲೇಜು ಸಾಧ್ಯವಾದರೆ ಹರ್ಕೂರು, ಆಲೂರು, ಕಳಿ ಮಾತ್ರವಲ್ಲದೆ ನಾಡ ಗುಡ್ಡೆಯಂಗಡಿ, ಹುಂತನಗೋಳಿಯಲ್ಲಿ ಶಾಸಕರ ಮುತುವರ್ಜಿಯಲ್ಲಿ ಸೇತುವೆಯೂ ಆಗಿರುವುದರಿಂದ ಕಾಲ್ತೋಡು, ಹೇರೂರು ಗ್ರಾಮಗಳ ಮಕ್ಕಳಿಗೂ ಪಿಯುಸಿ ವ್ಯಾಸಂಗಕ್ಕೆ ಅನುಕೂಲವಾಗಲಿದೆ.

ಈ ಭಾಗದ ಮಕ್ಕಳೆಲ್ಲ ಪಿಯುಸಿಗಾಗಿ ನಾವುಂದ, ಕುಂದಾಪುರ, ಗಂಗೊಳ್ಳಿಗೆ ಹೋಗಬೇಕಿದೆ. ವಂಡ್ಸೆಯಲ್ಲಿ ಕಾಲೇಜಿದ್ದರೂ ಅಲ್ಲಿಗೆ ಸರಿಯಾದ ಬಸ್‌ ವ್ಯವಸ್ಥೆಯಿಲ್ಲ. ಆಲೂರಲ್ಲಿಯೇ ಪ್ರತೀ ವರ್ಷ 100ಕ್ಕೂ ಮಿಕ್ಕಿ ಮಂದಿ ವಿದ್ಯಾರ್ಥಿಗಳು ಎಸೆಸೆಲ್ಸಿ ಮಕ್ಕಳಿದ್ದು, ಸುತ್ತಮುತ್ತಲಿನ ಪ್ರದೇಶಗಳ 200ಕ್ಕೂ ಅಧಿಕ ವಿದ್ಯಾರ್ಥಿಗಳಾಗುತ್ತಾರೆ. ಈ ನೆಲೆಯಲ್ಲಿ ಆಲೂರಿಗೆ ಪ.ಪೂ. ಕಾಲೇಜು ತುರ್ತಾಗಿ ಅಗತ್ಯವಿದೆ.

ಕಾಲೇಜಿನ ಕುರಿತು ಈ ಹಿಂದೆಯೇ ಶಿಕ್ಷಣ ಸಚಿವರಾಗಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈಗ ಈ ಪ್ರಸ್ತಾವ ಶಿಕ್ಷಣ ಇಲಾಖೆಯ ಪ್ರ. ಕಾರ್ಯದರ್ಶಿ ಮಟ್ಟದಲ್ಲಿದೆ. ಅದು ತ್ವರಿತಗತಿಯಲ್ಲಿ ಕಾರ್ಯರೂಪಕ್ಕೆ ಬರುವಲ್ಲಿ ಜನಪ್ರತಿನಿಧಿಗಳು, ಸಂಬಂಧಪಟ್ಟ ಅಧಿಕಾರಿಗಳು ಮುತುವರ್ಜಿ ವಹಿಸಬೇಕಿದೆ.

ಹೊಸ ಕಟ್ಟಡ

ಗ್ರಾ.ಪಂ. ಕಚೇರಿ ಕಟ್ಟಡ 40 ವರ್ಷಗಳಿಗೂ ಹಿಂದಿನದ್ದಾಗಿದ್ದು, ಹೊಸ ಸುಸಜ್ಜಿತ ಕಟ್ಟಡದ ಬೇಡಿಕೆಯೂ ಇದೆ.

ಕೈಗಾರಿಕೆ ಆರಂಭವಾಗಲಿ…

ಆಲೂರಲ್ಲಿ ಕಲಿತ ಯುವಜನರು ಉದ್ಯೋಗ ಅರಸಿಕೊಂಡು ಬೇರೆ ಜಿಲ್ಲೆಗಳು, ಪರ ಊರಿಗೆ ವಲಸೆ ಹೋಗಬೇಕಿದೆ. ಇಲ್ಲಿ ಯಾವುದೇ ಕೈಗಾರಿಕೆ, ಉದ್ಯಮವಾಗಲಿ ಇಲ್ಲ. ಗ್ರಾಮದ ಜನರಿಗೆ ಉದ್ಯೋಗ ಕಲ್ಪಿಸುವಂಥ ಬಟ್ಟೆ ಅಥವಾ ಇನ್ನಿತರ ಯಾವುದಾದರೂ ಕೈಗಾರಿಕೆ ಸ್ಥಾಪನೆಯಾದರೆ ಅನುಕೂಲವಾಗಲಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವೇ ನಂಬರ್‌ 102ರಲ್ಲಿ 330.67 ಎಕರೆ ಜಾಗವಿದೆ. ಇದರಲ್ಲಿ ಒಂದಷ್ಟು ಮೀಸಲು ಅರಣ್ಯ ಸಮಸ್ಯೆಯಿದ್ದರೂ, ಅದನ್ನು ನಿವಾರಿಸಿ, ಕೈಗಾರಿಕೆ ಆರಂಭಿಸಲು ಅವಕಾಶವಿದೆ.

ನಿವೇಶನ ಕೊಡಿ: ಆಲೂರಿಗೆ ಅಗತ್ಯವಾಗಿ ಪಿಯುಸಿ ಕಾಲೇಜು ಬೇಕಿದೆ. ಇನ್ನು ಗ್ರಾಮದಲ್ಲಿ ಅನೇಕ ಮಂದಿ ನಿವೇಶನ ರಹಿತರಿದ್ದು, ಸಾಕಷ್ಟು ಸರಕಾರಿ ಜಾಗವಿದ್ದರೂ, ಡೀಮ್ಡ್ ಫಾರೆಸ್ಟ್‌ ಸಮಸ್ಯೆ ನಿವಾರಿಸಿದರೆ ಇದು ಸುಗಮವಾಗಲಿದೆ. ವಸತಿ ರಹಿತರಿಗೂ ತ್ವರಿತಗತಿಯಲ್ಲಿ ಮನೆ ಮಂಜೂರಾಗಬೇಕಿದೆ. ಇನ್ನು ಇಲ್ಲಿನ ಯುವಜನರಿಗೆ ಉದ್ಯೋಗ ಕಲ್ಪಿಸಲು ಕೈಗಾರಿಕೆಗಳು ಆರಂಭವಾಗಬೇಕು. –ಪ್ರಶಾಂತ್‌ ಕುಲಾಲ್‌ ಆಲೂರು, ಗ್ರಾಮಸ್ಥರು

ಪ್ರಯತ್ನಿಸಲಾಗುವುದು: ನಿವೇಶನ ರಹಿತರಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಗ್ರಾಮಸ್ಥರಿಗೆ ತಿಳಿಸಿದ್ದು, ಅದನ್ನು ನಿರ್ಣಯಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗುವುದು. ಪಿಯುಸಿ ಕಾಲೇಜು ಬೇಡಿಕೆ ಬಗ್ಗೆ ಈ ಹಿಂದೆಯೇ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮತ್ತೆ ಸಂಬಂಧಪಟ್ಟ ಸಚಿವರು, ಇಲಾಖಾ ಅಧಿಕಾರಿಗಳ ಗಮನಕ್ಕೆ ತರಲಾಗುವುದು. –ರವಿ ಶೆಟ್ಟಿ ಉಪಾಧ್ಯಕ್ಷರು, ಆಲೂರು ಗ್ರಾ.ಪಂ.

„ ಪ್ರಶಾಂತ್‌ ಪಾದೆ

 

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Gangolli ಬೈಕ್‌ ಢಿಕ್ಕಿ ; ಸವಾರರಿಗೆ ಗಾಯ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Siddapura ಸಾಲ ಬಾಧೆಯಿಂದ ಯುವಕ ಆತ್ಮಹತ್ಯೆ

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

Kollur ಮೇಲ್‌ ಹೊಸೂರು: 1.50 ಲಕ್ಷ ರೂ.ಮೌಲ್ಯದ ಅಡಿಕೆ ನಾಪತ್ತೆ; ದೂರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.