ಮಳೆಹಾನಿ: ತುರ್ತು ಪರಿಹಾರ ಕ್ರಮಕ್ಕೆ ಸೂಚನೆ


Team Udayavani, Jun 21, 2019, 12:03 PM IST

kundapura-tdy-4..

ಕುಂದಾಪುರ, ಜೂ. 20: ಮಳೆಗಾಲದ ಸಂದರ್ಭದಲ್ಲಿ ಮಳೆಗಾಳಿ ಪ್ರವಾಹದಿಂದ ಯಾವುದೇ ಜೀವಹಾನಿ, ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಬಹುದಾದ ಹಾನಿ ನಷ್ಟ್ಟ ಗಳನ್ನು ತಡೆಗಟ್ಟುವ ಸಲುವಾಗಿ ಹಾಗೂ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮುನ್ನೆಚ್ಚರಿಕೆ ನೀಡಲು ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಪ್ರಾಕೃತಿಕ ವಿಕೋಪದದಿಂದ ಸಂಭವಿಸಬಹುದಾದ ಘಟನೆಗಳನ್ನು ಎದುರಿಸಲು ತಾಲೂಕು ಆಡಳಿತವು ಸರ್ವಸನ್ನದ್ಧವಾಗಿರುವುದಾಗಿ ಸಹಾಯಕ ಕಮಿಷನರ್‌ ಡಾ| ಎಸ್‌.ಎಸ್‌. ಮಧುಕೇಶ್ವರ್‌ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಷ್ಟ್ರೀಯ ಹೆದ್ದಾರಿ ಅಪೂರ್ಣ ಕಾಮಗಾರಿ ಆಗುತ್ತಿರುವ ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹಗೊಳ್ಳದೆ ಸರಾಗವಾಗಿ ಹರಿದು ಹೋಗಲು ಕ್ರಮವಹಿಸುವಂತೆ, ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಅನುಕೂಲವಾಗುವಂತೆ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ನೀರು ಸರಾಗವಾಗಿ ಹರಿದು ಹೋಗಲು ಡ್ರೈನೇಜ್‌ ಕಲ್ಪಿಸಬೇಕು ಎಂದು ಮುಖ್ಯಾಧಿಕಾರಿ ಹಾಗೂ ಪಿಡಿಓಗಳ ಸಹಕರಾರದೊಂದಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ನವಯುಗ ಕನ್‌ಸ್ಟ್ರಕ್ಷನ್ಸ್‌ ಹಾಗೂ ಐಆರ್‌ಬಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗುಂಡಿ ಮುಚ್ಚಿಸಿ

ಸರಕಾರಿ ಸ್ಥಳದಲ್ಲಿರುವ ತೆರೆದ ಕೊಳವೆ ಬಾವಿ ಹಾಗೂ ಇಂಗುಗುಂಡಿ, ಕೊಜೆಹೊಂಡ, ಕಲ್ಲುಕೋರೆ ಹೊಂಡ ಇರುವಲ್ಲಿ ರೇಡಿಯಂನಿಂದ ಕೂಡಿರುವ ಫಲಕಗಳನ್ನು ಅಳವಡಿಸಬೇಕು. ಖಾಸಗಿ ಸ್ಥಳಗಳಲ್ಲಿರುವ ಅಪಾಯಕಾರಿ ಹೊಂಡಗಳನ್ನು ಸಂಬಂಧಪಟ್ಟ ಜಾಗದ ಮಾಲೀಕರಿಂದ ಮುಚ್ಚಿಸಬೇಕು, ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲು ಗ್ರಾಮ ಪಂಚಾಯತ್‌ ಅಭಿ ವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ನಾದುರಸ್ತಿಯಲ್ಲಿರುವ ರಸ್ತೆ ಹಾಗೂ ಕಿರು ಸೇತುವೆಗಳ ರಿಪೇರಿ ಬಗ್ಗೆ ಕ್ರಮವಹಿಸುವಂತೆ, ಪ್ರಾಕೃತಿಕ ವಿಕೋಪದಡಿ ವಾಸ್ತವ್ಯದ ಮನೆ ಇತರ ಕಟ್ಟಡಗಳು ಹಾನಿಯಾದ ಬಗ್ಗೆ ಹಾನಿಯ ಶೇಕಡಾವಾರು ವರದಿ ಮತ್ತು ಅಂದಾಜು ನಷ‌rವನ್ನು ಜರೂರು ವರದಿ ಮಾಡುವಂತೆ ತಿಳಿಸಲಾಯಿತು. ಎಲ್ಲೆಲ್ಲಿ ಕಾಲು ಸಂಕದಿಂದ ಮಕ್ಕಳು ಶಾಲೆಗೆ ಬರುತ್ತಾರೆ ಎಂಬುದರ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ.

ಶಾಲೆಗಳ ದುರಸ್ತಿ

ತೀರ ನಾದುರಸ್ತಿಯಲ್ಲಿರುವ ಅಪಾಯವುಂಟಾಗುವ ಸಾಧ್ಯತೆ ಇರುವ ಶಾಲಾ ಕಟ್ಟಡಗಳನ್ನು ಪರಿಶೀಲಿಸಿ ದುರಸ್ತಿಗಾಗಿ ಜಿ. ಪಂ.ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸ ಲಾಯಿತು. ಶಾಲಾ ವಠಾರವನ್ನು ಶುಚಿತ್ವದಿಂದ ಇರಿಸಿಕೊಂಡು ನೆರೆಪೀಡಿತ ಪ್ರದೇಶಗಳು, ಸಂತ್ರಸ್ತರ ತಾತ್ಕಾಲಿಕ ವಸತಿ ಹಾಗೂ ಗಂಜಿಕೇಂದ್ರ ನಿರ್ಮಿಸಲು ಶಾಲಾ ಕಟ್ಟಡಗಳನ್ನು ಒದಗಿಸಲು ಹಾಗೂ ತುರ್ತು ಸಂದರ್ಭದಲ್ಲಿ ಶಾಲಾ ಶಿಕ್ಷಕರನ್ನು ನೆರೆ ಪರಿಹಾರ ಕಾರ್ಯಕ್ಕೆ ಬಳಸಿಕೊಳ್ಳಲು ಸೂಚಿಸಲಾಯಿತು.

ಗಂಜಿ ಕೇಂದ್ರದಲ್ಲಿ ಸಂತ್ರಸ್ತರಿಗೆ ಊಟದ ವ್ಯವಸ್ಥೆ

ಬಗ್ಗೆ ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಸಂಬಂಧಪಟ್ಟ ಶಾಲಾ ಮುಖ್ಯೋಪಾಧ್ಯಾಯರಿಗೆ ಸೂಚನೆ ನೀಡಲಾಗಿದೆ. ಶಾಲೆಗಳು ಪ್ರಾರಂಭವಾದ ಅನಂತರ ಪ್ರತಿದಿನ ಪ್ರಾರ್ಥನೆ ಮುಗಿದ ಅನಂತರ ಪ್ರಾಕೃತಿಕ ವಿಕೋಪದ ಬಗ್ಗೆ ತಿಳಿವಳಿಕೆ ನೀಡಲು ಶಿಕ್ಷಣ ಇಲಾಖೆಗೆ ಸೂಚಿಸಲಾಯಿತು.

ನದಿ ಉಪನದಿ ಹರಿಯುವ ಪ್ರದೇಶಗಳಲ್ಲಿ ನಿಗಾ ವಹಿಸುವುದು ಹಾಗೂ ನದಿಪಾತ್ರದಲ್ಲಿ ವಾಸಿಸುವ ಗ್ರಾಮಸ್ಥರ ಬಗ್ಗೆ ತೀವ್ರ ನಿಗಾವಹಿಸಬೇಕು. ಮುಂಜಾಗ್ರತೆಯಾಗಿ ನೀರಿನ ಒಳಹರಿವು ಹಾಗೂ ಹೊರ ಹರಿವಿನ ಮಟ್ಟದ ಮಾಹಿತಿಯನ್ನು ನೀರಾವರಿ ಇಲಾಖೆಯವರು ನೀಡುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.