ರಾಜಾಡಿ ಕಿಂಡಿ ಅಣೆಕಟ್ಟು: ಗೇಟು ಅಳವಡಿಕೆಗೆ ರೈತರ ಆಗ್ರಹ

ಬಾಗಿಲು ಅಳವಡಿಸದಿದ್ದರೆ ಹಿಂಗಾರು ಹಂಗಾಮಿನ ಕೃಷಿಗೆ ಅಡ್ಡಿ

Team Udayavani, Nov 12, 2020, 3:28 AM IST

ರಾಜಾಡಿ ಕಿಂಡಿ ಅಣೆಕಟ್ಟು: ಗೇಟು ಅಳವಡಿಕೆಗೆ ರೈತರ ಆಗ್ರಹ

ರಾಜಾಡಿಯಲ್ಲಿ 4.44 ಕೋ.ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕಿಂಡಿ ಅಣೆಕಟ್ಟು.

ಕುಂದಾಪುರ: ತಲ್ಲೂರು ಗ್ರಾಮದ ರಾಜಾಡಿ ಕಳುವಿನ ಬಾಗಿಲಿನಲ್ಲಿ 4.44 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಗೊಂಡಿದ್ದರಿಂದ ಈ ಭಾಗದ ಹತ್ತಾರು ಊರುಗಳ ನೂರಾರು ಮಂದಿ ರೈತರು ನೆಮ್ಮದಿಯ ನಿಟ್ಟಿಸಿರು ಬಿಡುವಂತಾಗಿದೆ. ಆದರೆ ಕಾಮಗಾರಿಯೆಲ್ಲ ಪೂರ್ಣಗೊಂಡಿದ್ದು, ಇನ್ನೀಗ 10-15 ದಿನಗಳಲ್ಲಿ ಹಿಂಗಾರು ಹಂಗಾಮಿನ ಕೃಷಿ ಚಟುವಟಿಕೆ ಆರಂಭವಾಗಲಿದ್ದು, ಅಣೆಕಟ್ಟಿಗೆ ಬಾಗಿಲು (ರೇಡಿಯಲ್‌ ಗೇಟು) ಅಳವಡಿಸದಿದ್ದರೆ ಗದ್ದೆಗಳಿಗೆ ಉಪ್ಪು ನೀರು ದಾಂಗುಡಿಯಿಡುತ್ತದೆ.

ರಾಜಾಡಿಯ ಈ ಕಿಂಡಿ ಅಣೆಕಟ್ಟುವಿಗೆ ತುರ್ತಾಗಿ ರೇಡಿಯಲ್‌ ಗೇಟುಗಳನ್ನು ಹಾಕಬೇಕು. ಇದರಿಂದ ಈ ಭಾಗದ ನೂರಾರು ಎಕರೆ ಗದ್ದೆಗಳಿಗೆ ಅನುಕೂಲವಾಗಲಿದೆ ಎನ್ನುವುದು ಇಲ್ಲಿನ ರೈತರ ಬೇಡಿಕೆಯಾಗಿದೆ.

4.44 ಕೊ..ರೂ. ವೆಚ್ಚ
ಈ ರಾಜಾಡಿ ಕಳುವಿನ ಬಾಗಿಲು ಬಳಿ ಕಿಂಡಿ ಅಣೆಕಟ್ಟು ನಿರ್ಮಿಸಬೇಕು ಎನ್ನುವುದು ರಾಜಾಡಿ, ತಲ್ಲೂರು, ಕೋಟೆಬಾಗಿಲು, ಹರೇ ಗೋಡು, ಕನ್ಯಾನ ಮತ್ತಿತರ ಭಾಗದ ರೈತರ 15 ವರ್ಷಗಳ ಬೇಡಿಕೆಯಾಗಿತ್ತು. ಅನೇಕ ವರ್ಷಗಳ ಬೇಡಿಕೆಗೆ ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿ ಸ್ಪಂದಿಸಿದ್ದು, ಕಳೆದ ವರ್ಷ ಸಣ್ಣ ನೀರಾವರಿ ಇಲಾಖೆಯಿಂದ ಕಿಂಡಿ ಅಣೆಕಟ್ಟಿಗಾಗಿ 4.44 ಕೋ.ರೂ. ಅನುದಾನವನ್ನು ಮಂಜೂರುಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಜನವರಿ, ಫೆಬ್ರವರಿ ಯಲ್ಲೇ ಕಾಮಗಾರಿ ಪೂರ್ಣ ಗೊಂಡಿದೆ. ಆದರೆ ಈಗ ಮಳೆಗಾಲವು ಮುಗಿದಿರು ವುದರಿಂದ ರೇಡಿಯಲ್‌ ಗೇಟುಗಳನ್ನು ಇಳಿಸಲು ಸೂಕ್ತ ಸಮಯ ಎನ್ನುವುದು ರೈತರ ಆಗ್ರಹವಾಗಿದೆ.

ನೂರಾರು ಎಕರೆ ಗದ್ದೆ
ಈ ಕಿಂಡಿ ಅಣೆಕಟ್ಟುವಿನಿಂದ ರಾಜಾಡಿ, ಕೋಟೆಬಾಗಿಲು, ತಲ್ಲೂರು, ಕನ್ಯಾನ, ಹರೇಗೋಡು, ತೋಟಬೈಲು, ಗುಬ್ಬುಕೋಣ ಸುತ್ತಮುತ್ತಲಿನ ಪರಿಸರದ ಸಾವಿರಾರು ಮಂದಿ ರೈತರ ನೂರಕ್ಕೂ ಮಿಕ್ಕಿ ಎಕರೆ ಗದ್ದೆಗಳಿಗೆ ಅನುಕೂಲವಾಗಲಿದೆ. ಈಗ ಹಲಗೆ (ಗೇಟು) ಅಳವಡಿಸದಿದ್ದರೆ ಈ ಎಲ್ಲ ಪ್ರದೇಶಗಳ ಗದ್ದೆಗಳಿಗೂ ಉಪ್ಪು ನೀರು ನುಗ್ಗಿ, ಹಿಂಗಾರು ಹಂಗಾಮಿನ ಕೃಷಿ ಕಾರ್ಯಕ್ಕೆ ಅಡ್ಡಿಯಾಗಲಿದೆ.

ಶಾಸಕರಿಗೂ ಮನವಿ
ರಾಜಾಡಿಯ ಕಿಂಡಿ ಅಣೆಕಟ್ಟಿನ ಗೇಟುಗಳನ್ನು ಕೂಡಲೇ ಅಳವಡಿಸಲು ತ್ವರಿತವಾಗಿ ಕ್ರಮಕೈಗೊಳ್ಳಬೇಕು ಹಾಗೂ ಈಗಾಗಲೇ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟಿಸಬೇಕು ಎನ್ನುವುದಾಗಿ ಇಲ್ಲಿನ ರೈತರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟಿಯವರಿಗೆ ಮನವಿ ಸಲ್ಲಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಈ ಬಗ್ಗೆ ಕೂಡಲೇ ಗಮಹರಿಸಲಾಗುವುದು. ಉದ್ಘಾಟನೆ ಸಂಬಂಧ ಸಂಸದರ ಬಳಿ ಮಾತನಾಡಿ ದಿನ ನಿಗದಿಪಡಿಸ ಲಾಗುವುದು ಎನ್ನುವುದಾಗಿ ಭರವಸೆ ನೀಡಿದ್ದಾರೆ.

ಶೀಘ್ರ ಅಳವಡಿಕೆ
ರಾಜಾಡಿ ಕಿಂಡಿ ಅಣೆಕಟ್ಟಿನ ಗೇಟುಗಳನ್ನು ಶೀಘ್ರ ಅಳವಡಿಸಲಾಗುವುದು. ಇನ್ನು ಕೂಡ ಕೆಲವೆಡೆಗಳಲ್ಲಿ ಮುಂಗಾರು ಹಂಗಾಮಿನ ಭತ್ತದ ಕಟಾವು ಕಾರ್ಯ ಮುಗಿದಿಲ್ಲ. ಕಟಾವು ಪೂರ್ಣಗೊಳ್ಳದೇ ಗೇಟು ಹಾಕಿದಲ್ಲಿ, ಗದ್ದೆಗಳಿಗೆ ನೀರು ನುಗ್ಗಿ, ಹಾನಿಯಾಗುವ ಸಂಭವವೂ ಇದೆ. ಕಟಾವು ಮುಗಿದ ತತ್‌ಕ್ಷಣ ಅಳವಡಿಸಲಾಗುವುದು.
– ನಾಗಲಿಂಗ ಎಚ್‌., ಕಿರಿಯ ಎಂಜಿನಿಯರ್‌, ಸಣ್ಣ ನೀರಾವರಿ ಇಲಾಖೆ ಕುಂದಾಪುರ

ಗದ್ದೆಗೆ ಉಪ್ಪು ನೀರು
ಹರೇಗೋಡು ಸೇರಿದಂತೆ ಸುತ್ತಮುತ್ತಲಿನ ನೂರಾರು ಎಕರೆ ಗದ್ದೆಗಳಿಗೆ ಈಗಾಗಲೇ ಉಪ್ಪು ನೀರು ನುಗ್ಗುತ್ತಿದ್ದು, ಕೂಡಲೇ ಕಿಂಡಿ ಅಣೆಕಟ್ಟುವಿಗೆ ಗೇಟು ಅಳವಡಿಸದಿದ್ದರೆ ಎರಡನೇ ಬೆಳೆಗೆ ಸಮಸ್ಯೆಯಾಗಲಿದೆ. ಈ ಬಗ್ಗೆ ಶಾಸಕರ ಗಮನಕ್ಕೂ ತರಲಾಗಿದೆ.
– ವಿಶ್ವನಾಥ ಗಾಣಿಗ ಹರೇಗೋಡು, ಕೃಷಿಕರು

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.