ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

"ಸುದಿನ' ವರದಿಗೆ ಪುರಸಭೆ ಸ್ಪಂದನೆ

Team Udayavani, Oct 19, 2021, 5:34 AM IST

ದುರಸ್ತಿಯಾಯಿತು ರಸ್ತೆ, ಬೆಳಗಿತು ದೀಪ

ಕುಂದಾಪುರ: ಕಳೆದ ಕೆಲವು ಸಮಯಗಳಿಂದ ನಗರದ ಪ್ರಮುಖ ವೃತ್ತಗಳಲ್ಲಿ ದೀಪ ಬೆಳಗದೇ ಕತ್ತಲೆಯಾಗಿ ಸಮಸ್ಯೆಯಾಗುತ್ತಿತ್ತು. ಅಂತೆಯೇ ಸರ್ವಿಸ್‌ ರಸ್ತೆಯಿಂದ ನಗರದೊಳಗೆ ಬರುವ ಕೂಡು ರಸ್ತೆಗಳಿಗೆ ಸಂಪರ್ಕಕ್ಕೆ ನಾದುರಸ್ತಿಯಿಂದ ಸಮಸ್ಯೆಯಾಗುತ್ತಿತ್ತು. ಇದೀಗ ಪುರಸಭೆ ಇವೆರಡರ ಕುರಿತು ಗಮನ ಹರಿಸಿ ಸರಿಪಡಿಸಿದೆ.

ನಗರದ ಶಾಸ್ತ್ರಿ ಸರ್ಕಲ್‌ ಪ್ರಮುಖ ಜಂಕ್ಷನ್‌ ಆಗಿದ್ದು ನಗರದೊಳಗೆ ಪ್ರವೇಶಕ್ಕೆ ಇರುವ ಪ್ರಮುಖ ಸ್ವಾಗತ ಜಾಗವಾಗಿದೆ. ಇಲ್ಲಿ ಹೈ ಮಾಸ್ಟ್‌ ದೀಪಗಳು ಬೆಳಗುತ್ತಿರಲಿಲ್ಲ. ಅಂಗಡಿ ಮುಂಗಟ್ಟುಗಳು ಮುಚ್ಚಿದ ಬಳಿಕ ಕತ್ತಲೆಯ ಕೂಪವಾಗಿ ಇರುತ್ತಿತ್ತು. ಪುರಸಭೆಯೇ ನಿರ್ಮಿಸಿಕೊಟ್ಟ ಬಸ್‌ ತಂಗುದಾಣಗಳಿದ್ದು ದೂರದ ಊರುಗಳಿಗೆ ಹೋಗುವ ಪ್ರಯಾಣಿಕರು, ದೂರದ ಊರುಗಳಿಂದ ಬರುವ ಪ್ರಯಾಣಿಕರು ಇಲ್ಲಿ ಇಳಿದಾಗ ಕತ್ತಲೆಯಿಂದ ಭಯ ಪಡುವ ಸ್ಥಿತಿ ಇತ್ತು.

ನಗರದೊಳಗೆ ಪ್ರವೇಶ ಪಡೆಯುತ್ತಿ ದ್ದಂತೆಯೇ ಪೌಲ್‌ ಹ್ಯಾರಿಸ್‌ ಅಥವಾ ಪಾರಿಜಾತ ಸರ್ಕಲ್‌ನಲ್ಲಿಯೂ ದೀಪಗಳು ಬೆಳಗುತ್ತಿರಲಿಲ್ಲ. ಕತ್ತಲೆಯಾದ ಕೂಡಲೆ ಪಾದಚಾರಿಗಳಿಗೆ, ದೂರುದೂರುಗಳಿಂದ ಬಂದು ನಗರದೊಳಗೆ ಹೋಗದೆ ಇಲ್ಲೇ ಪ್ರಯಾಣಿಕರನ್ನು ಇಳಿಸಿ ಹೋಗುವ ವಾಹನಗಳಿದ್ದಾಗ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು.

ಇದನ್ನೂ ಓದಿ:ವಿಶೇಷಚೇತನರು-ವಯೋದ್ಧರಿಗೆ ಅಂಚೆ ಮತದಾನಕ್ಕೆ ಅವಕಾಶ

ಸರ್ವಿಸ್‌ ರಸ್ತೆಯಿಂದ ನಗರದೊಳಗೆ ಅಥವಾ ನಗರದ ವಿವಿಧ ಭಾಗಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಪ್ರವೇಶಿಕೆ ಕಷ್ಟವಾಗುತ್ತಿತ್ತು. ಕುಂದೇಶ್ವರ ದ್ವಾರದ ಎದುರಿನಿಂದ ರಾಧಾ ಮೆಡಿಕಲ್‌ ಬಳಿಯಾಗಿ ಸರ್ವಿಸ್‌ ರಸ್ತೆಗೆ ಹೋಗುವಲ್ಲಿ ದ್ವಿಚಕ್ರ ವಾಹನ ಚಾಲಕರು, ರಿಕ್ಷಾ ಚಾಲಕರು ಒಂದು ರಸ್ತೆಯಿಂದ ಇನ್ನೊಂದು ರಸ್ತೆಗೆ ವಾಹನ ದಾಟಿಸಲು ಪರದಾಡುತ್ತಿದ್ದರು. ಇದಲ್ಲದೇ ನಂದಿಬೆಟ್ಟು ರಸ್ತೆ, ಶ್ರೀದೇವಿ ಆಸ್ಪತ್ರೆ ರಸ್ತೆ, ಎಲ್‌ಐಸಿ ರಸ್ತೆಯಲ್ಲೂ ಸಮಸ್ಯೆಗಳಿವೆ. ಈ ಕುರಿತು “ಉದಯವಾಣಿ’ “ಸುದಿನ’ ಅ.11ರಂದು “ಕತ್ತಲಲ್ಲಿ ವೃತ್ತಗಳು, ಸಂಪರ್ಕ ಕೂಡದ ರಸ್ತೆಗಳು’ ಎಂದು ವರದಿ ಮಾಡಿತ್ತು. ವರದಿಗೆ ಸ್ಪಂದಿಸಿದ ಪುರಸಭೆ ಶಾಸ್ತ್ರಿ ಸರ್ಕಲ್‌ ಹಾಗೂ ಪೌಲ್‌ ಹ್ಯಾರಿಸ್‌ ಸರ್ಕಲ್‌ಗೆ ದೀಪಗಳನ್ನು ಅಳವಡಿಸಿದೆ. ರಾಧಾ ಮೆಡಿಕಲ್‌ ಬಳಿಯಿಂದ ಸರ್ವಿಸ್‌ ರಸ್ತೆಗೆ ಸೇರುವಲ್ಲಿ ತುರ್ತು ಆದ್ಯತೆ ನೆಲೆಯಲ್ಲಿ ದುರಸ್ತಿ ಪಡಿಸಿದೆ. ಉಳಿದ ರಸ್ತೆಗಳಿಗೆ ಕಾಯಕಲ್ಪ ಇನ್ನಷ್ಟೇ ಆಗಬೇಕಿದೆ. ಎಲ್‌ಐಸಿ ರಸ್ತೆ ಹಾಗೂ ಶ್ರೀದೇವಿ ಆಸ್ಪತ್ರೆ ರಸ್ತೆಯಲ್ಲಿ ವಾಹನಗಳು ಬೀಳುವ ಸ್ಥಿತಿಗೆ ಯಾವಾಗ ಕಡಿವಾಣ ಬೀಳಲಿದೆ ಎನ್ನುವುದು ಇನ್ನೂ ತಿಳಿದಿಲ್ಲ.

ಆದ್ಯತೆಯಲ್ಲಿ ದುರಸ್ತಿ
ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಅನೇಕ ಬಾರಿ ಹೇಳಿದ್ದರೂ ಇನ್ನೂ ದುರಸ್ತಿ ಕಾರ್ಯ ನಡೆಸಿಲ್ಲ. ಸರ್ವಿಸ್‌ ರಸ್ತೆಯಿಂದ ಕೂಡು ರಸ್ತೆಗೆ ಸಂಪರ್ಕ ಕಲ್ಪಿಸುವಲ್ಲಿ ತೊಂದರೆಯಾಗುತ್ತಿತ್ತು. ಇದೀಗ ಆದ್ಯತೆ ನೆಲೆಯಲ್ಲಿ ಪುರಸಭೆ ದುರಸ್ತಿ ಮಾಡಿದೆ.
-ವೀಣಾ ಭಾಸ್ಕರ ಮೆಂಡನ್‌
ಅಧ್ಯಕ್ಷರು, ಪುರಸಭೆ

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.