ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮರವಂತೆಯಲ್ಲಿ ಸರಕು ಲಾರಿಗಳ ಹಾವಳಿ; ಪ್ರವಾಸಿಗರಿಗೆ ತೊಂದರೆ

Team Udayavani, Sep 20, 2020, 6:15 AM IST

ಮುಳ್ಳಿಕಟ್ಟೆಯಲ್ಲಿ ಇನ್ನೂ ಆರಂಭಗೊಳ್ಳದ ವಿಶ್ರಾಂತಿ ವಲಯ

ಮರವಂತೆ ಬೀಚ್‌ಗೆ ಅಡ್ಡಲಾಗಿ ಸರಕು ಲಾರಿಗಳು ನಿಂತಿರುವುದು.

ಕುಂದಾಪುರ: ಸಾಲುಗಟ್ಟಿ ನಿಲ್ಲುವ ಸರಕು ಲಾರಿಗಳಿಂದ ಮರವಂತೆಯ ಪ್ರಾಕೃತಿಕ ಸೊಬಗು ಪ್ರವಾಸಿಗರಿಗೆ ಕಣ್ತುಂಬಿಕೊಳ್ಳಲು ಅಡ್ಡಿಯಾಗುತ್ತದೆ ಎನ್ನುವ ಕಾರಣಕ್ಕೆ ರಾ.ಹೆ. 66ರ ಮುಳ್ಳಿಕಟ್ಟೆಯಲ್ಲಿ “ವಿಶ್ರಾಂತಿ ವಲಯ’ (ರೆಸ್ಟ್‌ ಏರಿಯಾ) ಆರಂಭಿಸುವ ಪ್ರಸ್ತಾವವಿತ್ತು. ಆದರೆ ಅದಿನ್ನೂ ಆರಂಭಗೊಂಡಿಲ್ಲ.

ಮರವಂತೆಯ ಕಡಲ ಕಿನಾರೆಯು ವಿಶ್ವ ಪ್ರಸಿದ್ಧ. ಪ್ರವಾಸಿಗರು ಆಗಮಿಸಿ ಇಲ್ಲಿನ ಮನೋಹರವಾದ ಸೌಂದರ್ಯವನ್ನು ಆಸ್ವಾದಿಸುತ್ತಾರೆ. ಹೆದ್ದಾರಿಗೆ ಹೊಂದಿಕೊಂಡೇ ಇರುವ ಕಿನಾರೆ ಇದಾಗಿರುವು ದರಿಂದ ವಾಹನಗಳಲ್ಲಿ ಸಂಚರಿಸುತ್ತಲೇ ಸೊಬಗು ಕಣ್ತುಂಬಿಕೊಳ್ಳುವವರು ಅನೇಕರಿದ್ದಾರೆ.

ಸಾಲು ಸಾಲು ಲಾರಿಗಳು
ಆದರೆ ಗೋವಾ, ಮುಂಬಯಿ ಕಡೆಗೆ ಸಾಗುವ ಸರಕು ಲಾರಿಗಳನ್ನು ಇಲ್ಲಿ ನಿಲ್ಲಿಸಿ ಚಾಲಕರು ವಿಶ್ರಾಂತಿ ಪಡೆಯುವುದೂ ಸಾಮಾನ್ಯವಾಗಿದೆ. ಇದರಿಂದಾಗಿ ಪ್ರವಾಸಿಗರಿಗೆ ಕಡಲ ಸೊಬಗನ್ನು ವೀಕ್ಷಿಸಲು ಅಡ್ಡಿಯಾಗುತ್ತಿದೆ.

ಲಾರಿ ಚಾಲಕರು, ನಿರ್ವಾಹರಿಕಗೆ ವಿಶ್ರಾಂತಿ ವಲಯ ಆರಂಭಿಸಬೇಕು ಎನ್ನುವ ಬೇಡಿಕೆ ಹಿನ್ನೆಲೆಯಲ್ಲಿ ಮರವಂತೆಯಿಂದ ಸುಮಾರು ಎರಡು ಕಿ.ಮೀ. ದೂರದ ಮುಳ್ಳಿಕಟ್ಟೆಯಲ್ಲಿ ಅಗತ್ಯ ಜಾಗ ಗುರುತಿಸಲಾಗಿದೆ. ಸದ್ಯ ಅಲ್ಲಿ ಶೌಚಾಲಯ ನಿರ್ಮಾಣ ಆಗಿದ್ದು ಬಿಟ್ಟರೆ ಇನ್ನಿತರ ಮೂಲ ಸೌಕರ್ಯ ಒದಗಿಸುವ ಕೆಲಸಗಳು ಆಗಿಲ್ಲ. ಕಂದಾಯ ಇಲಾಖೆಯ ಅಧಿಕಾರಿಗಳಲ್ಲಿ ಜಾಗ ಹಸ್ತಾಂತರದ ಬಗ್ಗೆ ಕೇಳಿದರೆ ನಮಗೆ ಏನೂ ಗೊತ್ತಿಲ್ಲ ಎನ್ನುತ್ತಾರೆ. ಪ್ರವಾಸಿಗರ ವೀಕ್ಷಣೆಗೆ ಅಡ್ಡಿ ಎಂಬ ಕಾರಣಕ್ಕೆ ಈ ಮೊದಲು ಇಲ್ಲಿನ ಗೂಡಂಗಡಿಗಳನ್ನು ತೆರವು ಮಾಡಲಾಗಿತ್ತು. ಈಗ ಸಾಲುಗಟ್ಟಲೆ ಲಾರಿಗಳು ನಿಂತಿದ್ದರೂ ಪರ್ಯಾಯ ವ್ಯವಸ್ಥೆ ಯಾಕಿಲ್ಲ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಬೇಡಿಕೆ ಈಡೇರಿಲ್ಲ
ಫೆ. 12ರಂದು ಕುಂದಾಪುರ-ಗೋವಾ ಚತುಷ್ಪಥ ಹೆದ್ದಾರಿಯ ಶಿರೂರು ಟೋಲ್‌ಗೇಟ್‌ನಲ್ಲಿ ಸುಂಕ ಸಂಗ್ರಹ ಆರಂಭವಾಗಿತ್ತು. ಟೋಲ್‌ಗೇಟಲ್ಲಿ ಸುಂಕ ಸಂಗ್ರಹ ಆರಂಭವಾಗಿ 7 ತಿಂಗಳು ಕಳೆದಿದೆ. ಆದರೆ ಇನ್ನೂ ಕೂಡ ಮುಳ್ಳಿಕಟ್ಟೆಯಲ್ಲಿ ವಿಶ್ರಾಂತಿ ವಲಯದ ಬೇಡಿಕೆ ಮಾತ್ರ ಈಡೇರಿಲ್ಲ.

ಏನೆಲ್ಲ ಇರುತ್ತೆ ?
ವಿಶ್ರಾಂತಿ ವಲಯದಲ್ಲಿ ಘನ ಹಾಗೂ ಎಲ್ಲ ರೀತಿಯ ವಾಹನಗಳ ನಿಲುಗಡೆಗೆ ವಿಶಾಲವಾಗದ ಜಾಗ, ಕ್ಯಾಂಟೀನ್‌, ವಿಶ್ರಾಂತಿ ಗೃಹ, ಕುಡಿಯುವ ನೀರು, ಸ್ನಾನಗೃಹ, ಶೌಚಾಲಯ, ಸೇರಿದಂತೆ ಇನ್ನಿತರ ಸೌಲಭ್ಯಗಳು ಇರಲಿವೆ. ಲಾರಿ, ಇನ್ನಿತರ ವಾಹನಗಳ ದುರಸ್ತಿ, ಟಯರ್‌ ಪಂಕ್ಚರ್‌ ವ್ಯವಸ್ಥೆಗಳೂ ಇರಲಿವೆ.

ಶೀಘ್ರ ಆಗಲಿ
ಮರವಂತೆಯಲ್ಲಿ ಸಾಲುಗಟ್ಟಿ 20-30 ಲಾರಿಗಳು ಪ್ರತಿ ನಿತ್ಯ ನಿಲ್ಲುತ್ತವೆ. ಇದರಿಂದ ಇಲ್ಲಿಗೆ ಬರುವ ಪ್ರವಾಸಿಗರಿಗೆ ತುಂಬಾ ತೊಂದರೆಯಾಗುತ್ತದೆ. ಇದಲ್ಲದೆ ಆಗಾಗ ಇಲ್ಲಿ ಅಪಘಾತಗಳು ಕೂಡ ಆಗುತ್ತಿರುತ್ತವೆೆ. ಆದಷ್ಟು ಬೇಗ ಬೇರೆ ಕಡೆ ರೆಸ್ಟ್‌ ಏರಿಯಾ
ಆದರೆ ಒಳ್ಳೆಯದಿತ್ತು.
– ಹರೀಶ್‌ ಖಾರ್ವಿ ತ್ರಾಸಿ, ಸ್ಥಳೀಯರು

ಭೂಸ್ವಾಧೀನ ಪ್ರಕ್ರಿಯೆ
ವಿಶ್ರಾಂತಿ ವಲಯಕ್ಕಾಗಿ ಹೊಸಾಡು ಗ್ರಾ.ಪಂ. ವ್ಯಾಪ್ತಿಯ ಮುಳ್ಳಿಕಟ್ಟೆಯಲ್ಲಿ ಜಾಗವನ್ನು ಗುರುತಿಸಿ, ಭೂಸ್ವಾಧೀನ ನಡೆಯುತ್ತಿದೆ. ಕಂದಾಯ ಇಲಾಖೆಗೆ ಈ ಬಗ್ಗೆ ಸೂಚನೆ ನೀಡಲಾಗಿದೆ. ಆ ಬಳಿಕ ಮೂಲಸೌಕರ್ಯ ಸಹಿತ ವಿವಿಧ ಸೌಲಭ್ಯಗಳನ್ನು ಒದಗಿಸುವ ಕಾರ್ಯ ನಡೆಯಲಿದೆ.
– ಕೆ. ರಾಜು, ಸಹಾಯಕ ಆಯುಕ್ತರು, ಕುಂದಾಪುರ ಉಪ ವಿಭಾಗ

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.