Road mishap ಶಂಕರನಾರಾಯಣ: ಬೈಕಿಗೆ ಕಾರು ಢಿಕ್ಕಿ; ಸವಾರರು ಗಂಭೀರ
Team Udayavani, Nov 21, 2023, 9:23 PM IST
ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಸಿಂಗಿನಕೋಡ್ಲು ಬಳಿ ನ. 20ರಂದು ರಾಜ್ಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ.
ಪರಿಣಾಮ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ಸವಾರ ಸಮಿತ್ ಅವರು ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಮತ್ತು ಹಿಂಬದಿ ಸವಾರ ಪ್ರದೀಪ ಪೂಜಾರಿ ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.