ಕಲ್ಲು ಮಣ್ಣಿನ ಹಾದಿಯಲ್ಲಿ ನಿತ್ಯ ಸಂಚಾರ ಸಂಕಷ್ಟ


Team Udayavani, Aug 19, 2021, 3:30 AM IST

ಕಲ್ಲು ಮಣ್ಣಿನ ಹಾದಿಯಲ್ಲಿ ನಿತ್ಯ ಸಂಚಾರ ಸಂಕಷ್ಟ

ಕೊಲ್ಲೂರು: ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಹಳ್ಳಿಬೇರು, ಗೋಳಿಗುಡ್ಡೆ ಹಾಗೂ  ಮೇಘನಿಗೆ ಸಾಗುವ ಕೆಸರುಮಯ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಹಿತ ಪಾದಚಾರಿಗಳು ಸಂಚರಿಸುವುದು ಭಾರೀ ಕಷ್ಟವಾಗಿದೆ.

ಕೊಲ್ಲೂರಿನ ಸೌಪರ್ಣಿಕಾ ನದಿಯ ಸನಿಹದ ಅಗಲ ಕಿರಿದಾದ ಸೇತುವೆ ದಾಟಿದಾಗಲೇ ತೆರಳುವ ಹಾದಿ ಮಣ್ಣಿನ ರಸ್ತೆಯಾಗಿದ್ದು, ಈ ಭಾಗದಲ್ಲಿ ಡಾಮರು ಕಾಣದೇ ನೂರಾರು ವರ್ಷ ಕಳೆದಿದೆ. ಕೊಲ್ಲೂರಿನಿಂದ 12 ಕಿ.ಮೀ. ದೂರದಲ್ಲಿರುವ ಶ್ರೀ ಮೂಕಾಂಬಿಕಾ ಅಭಯಾರಣ್ಯದ ಸುಪರ್ದಿಯಲ್ಲಿರುವ ಹಾದಿಯ ಸ್ಥಿತಿ ಮಳೆಗಾಲದಲ್ಲಿ ಕಾಲ್ನಡಿಗೆಯಲ್ಲಿ ಸಾಗುವುದಕ್ಕೂ ತುಂಬಾ ಕಷ್ಟಕರವಾಗಿ ಪರಿಣಮಿಸಿದೆ.

ಮೇಘನಿಯಿಂದ ಜನ ವಲಸೆ : 

ಬಹಳಷ್ಟು ಕಾಲ ಮೇಘನಿಯಲ್ಲಿ ನೆಲೆಸಿದ್ದ ಒಟ್ಟು 7 ಕುಟುಂಬಗಳ ಪೈಕಿ 4 ಕುಟುಂಬಸ್ಥರು ಈಗಾಗಲೇ ನಿತ್ಯ ಜೀವನಕ್ಕೆ ತೊಡಕಾಗಿರುವ ಅಲ್ಲಿನ ರಸ್ತೆ ಸಮಸ್ಯೆಯಿಂದಾಗಿ ಬೇರೆ ಊರುಗಳಿಗೆ ಸ್ಥಳಾಂತರಗೊಂಡಿರುತ್ತಾರೆ. ಅಲ್ಲಿ ವಾಸವಾಗಿರುವ 3 ಕುಟುಂಬದವರು ಕೆಸರುಮಯ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ಕೊಲ್ಲೂರಿಗೆ ಸಾಗಬೇಕಾದ ಪರಿಸ್ಥಿತಿ ಇದೆ.

ಹಳ್ಳಿಬೇರಿನ ಜನಜೀವನ ಇನ್ನಷ್ಟು ಹೈರಾಣ : 

ಮಳೆಗಾಲದಲ್ಲಿ ತೀರ ಹದಗೆಟ್ಟ ಅಗಲ ಕಿರಿದಾದ ಕೆಸರುಮಯ ರಸ್ತೆಯಲ್ಲಿ ಜನ ಸಂಚರಿಸಬೇಕಾಗಿದೆ. ಜೀಪು, ರಿಕ್ಷಾ,  ಕಾರು ಸಹಿತ ಇನ್ನಿತರ ವಾಹನಗಳು ಈ ಮಾರ್ಗದಲ್ಲಿ ಸಂಚರಿಸುವುದು ಕಷ್ಟಸಾಧ್ಯವಾಗಿದೆ. ಹಾಗಾಗಿ ಇಲ್ಲಿನ ನಿವಾಸಿಗಳು ವ್ಯಾಪಾರ ವ್ಯವಹಾರ ಸಹಿತ ನಿತ್ಯ ಜೀವನಕ್ಕೆ 8 ಕಿ.ಮೀ. ದೂರದ ಕೊಲ್ಲೂರಿಗೆ ನಡೆದುಕೊಂಡು ಹೋಗಬೇಕಾಗಿದೆ. ದ್ವಿಚಕ್ರ ವಾಹನದಲ್ಲಿ ಹರಸಾಹಸಪಟ್ಟು ಸಾಗಬೇಕಾಗಿದೆ. ಮಳೆಗಾಲದಲ್ಲಂತೂ ಇಲ್ಲಿನ ನಿವಾಸಿಗಳ ಗೋಳು ಕೇಳುವವರಿಲ್ಲದಂತಾಗಿದೆ.  ಕೂಲಿ ಕಾರ್ಮಿಕರಾದ ನಮಗೆ ಇಲ್ಲಿನ ರಸ್ತೆಯ ದುಸ್ಥಿತಿ ಬಹಳಷ್ಟು ತೊಂದರೆ ಉಂಟು ಮಾಡಿದೆ ಎಂದು ಹಳ್ಳಿಬೇರು ನಿವಾಸಿಗಳಾದ ಮಂಜುನಾಥ ಮರಾಠಿ, ಗಂಗು ಮರಾಠಿ ಅವರು ಹೇಳುತ್ತಾರೆ

ಮಾಜಿ ಶಾಸಕರ ಪ್ರಯತ್ನ  :

ಮಾಜಿ ಶಾಸಕ ಲಕ್ಷ್ಮೀನಾರಾಯಣ ಅವರು ಕೆಲವು ಕಡೆ ಕಾಂಕ್ರೀಟ್‌ ರಸ್ತೆ ನಿರ್ಮಿಸಿದ್ದಾರೆ. ಆದರೆ ಅದರ ಮುಂದುವರಿದ ಹಾದಿಯ ದುಸ್ಥಿತಿಗೆ ಅರಣ್ಯ ಇಲಾಖೆಯ ಕಾನೂನು ತೊಡಕಾಗಿದೆ.

ಖಾಯಂ ಶಿಕ್ಷಕರಿಲ್ಲದ ಹಳ್ಳಿಬೇರು ಸರಕಾರಿ ಹಿ.ಪ್ರಾ.ಶಾಲೆ :

ಕುಗ್ರಾಮವಾದ ಹಳ್ಳಿಬೇರಿನಲ್ಲಿ 1ನೇ ತರಗತಿಯಿಂದ 7ನೇ ತರಗತಿ ತನಕ ಸರಕಾರಿ ಶಾಲೆಯಿದ್ದು,ಅಲ್ಲಿ ಸುಮಾರು 60ಕ್ಕೂ ಮಿಕ್ಕಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಎಲ್ಲ ಸೌಕರ್ಯ ಹೊಂದಿರುವ ಈ ಶಾಲೆಯಲ್ಲಿ ಕಳೆದ 2 ವರ್ಷಗಳಿಂದ ಖಾಯಂ ಶಿಕ್ಷಕರಿಲ್ಲ. ಅತಿಥಿ ಶಿಕ್ಷಕರಿದ್ದಾರೆ. ಕೊಲ್ಲೂರು ಶಾಲೆಯಿಂದ ಶಿಕ್ಷಕರನ್ನು ಎರವಲಾಗಿ ಪಡೆಯುವ ಪರಿಸ್ಥಿತಿ ಎದುರಾಗಿದೆ. ವಾಹನ ಸಂಚಾರವಿಲ್ಲದೆ ಕೊಲ್ಲೂರಿನಿಂದ ಸುಮಾರು 8-10 ಕಿ.ಮೀ. ದೂರದ ಈ ಶಾಲೆಗೆ ಸೇವೆ ಸಲ್ಲಿಸಲು ಅನೇಕ ಶಿಕ್ಷಕರು ಹಿಂಜರಿಯುತ್ತಿರುವುದು ಕೇಳಿಬರುತ್ತಿದೆ.ಹಾಗಾಗಿ ಕೋವಿಡ್‌-19 ಈ ಸಂದರ್ಭದಲ್ಲಿ ಈ ಭಾಗದ ವಿದ್ಯಾರ್ಥಿಗಳು ಶಿಕ್ಷಣ ವಂಚಿತರಾಗುವ ಆತಂಕದ ವಾತಾವರಣ ಎದುರಾಗುತ್ತಿದೆ.

ಇತರ ಸಮಸ್ಯೆಗಳೇನು? :

ಜ  ಮೇಘನಿ, ಗೋಳಿಗುಡ್ಡೆ, ಹಳ್ಳಿಬೇರಿನಲ್ಲಿ ಒಟ್ಟು ಸುಮಾರು 400 ಮಂದಿ ವಾಸವಾಗಿದ್ದಾರೆ. ಅನೇಕ ಮಂದಿಗೆ ಅಭಯಾರಣ್ಯದ ನೀತಿ ಯಿಂದಾಗಿ  ಹಕ್ಕು ಪತ್ರ ಲಭಿಸಿಲ್ಲ. ಮೂಲ ನಿವಾಸಿಗಳಿಗೆ ಮನೆಯ ಆರ್‌ಟಿಸಿ ಪಡೆದು ಸರಕಾರದ ಸೌಲಭ್ಯಕ್ಕಾಗಿ ಇಲಾಖೆಗೆ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ.

ಸಂಪನ್ಮೂಲದ ಕೊರತೆ :

ಅರಣ್ಯ ಇಲಾಖೆ ಎನ್‌ಒಸಿ ನೀಡಿದಲ್ಲಿ ರಸ್ತೆ ದುರಸ್ತಿ ಕಾರ್ಯ ಮಾಡಬಹುದಾಗಿದೆ. ಅಲ್ಲದೆ 10-15 ಕಿ.ಮೀ ದೂರ ವ್ಯಾಪ್ತಿಯ ಕಾಂಕ್ರೀಟ್‌ ರಸ್ತೆ ನಿರ್ಮಾಣಕ್ಕೆ ಪಂಚಾಯತ್‌ನಲ್ಲಿ ಸಂಪನ್ಮೂಲದ ಕೊರತೆ ಇದೆ.ಅರಣ್ಯ ಇಲಾಖೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿದೆ.– ರುಕ್ಕನ ಗೌಡ,  ಪಿಡಿಒ  ಗ್ರಾ.ಪಂ.ಕೊಲ್ಲೂರು

ಪ್ರಯಾಸದ ಪ್ರಯಾಣ : 

12 ಕಿ.ಮೀ. ದೂರ ವ್ಯಾಪ್ತಿಯನ್ನು ಕಾಲ್ನಡಿಗೆಯಲ್ಲಿ ಸಾಗಿ ಕೊಲ್ಲೂರಿಗೆ ದಿನನಿತ್ಯ ಬರಬೇಕಾಗಿದೆ. ದುಸ್ಥಿತಿಯ ರಸ್ತೆಯಲ್ಲಿ ಪ್ರಯಾಣವು ಕಷ್ಟಸಾಧ್ಯವಾಗಿದೆ. ಅರಣ್ಯದ ನಡುವಿನ ದೈನಂದಿನ ಸಂಚಾರಕ್ಕೂ ಆತಂಕ ಮಯವಾಗಿದೆೆ. ಇದಕ್ಕೊಂದು ಪರಿಹಾರ ಅತೀ ಅಗತ್ಯ.    – ಭವಾನಿ, ಆಶಾ ಕಾರ್ಯಕರ್ತೆ,ಕೊಲ್ಲೂರು ಪ್ರಾ. ಆರೋಗ್ಯ ಕೇಂದ್ರ

 

-ಡಾ| ಸುಧಾಕರ ನಂಬಿಯಾರ್‌

ಟಾಪ್ ನ್ಯೂಸ್

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-mng

ನೇಹಾ ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.