ನಾರ್ಕಳಿ ಸಂಪರ್ಕ ರಸ್ತೆ: ನಿತ್ಯ ಸಂಚಾರ ಸರ್ಕಸ್!
Team Udayavani, Aug 25, 2021, 3:20 AM IST
ಆಲೂರು: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ – ಹೋಯಿಗೇರಿ ಸಂಪರ್ಕ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ಈ ಮಾರ್ಗದಲ್ಲಿ ವಾಹನ ಚಲಾಯಿಸುವುದು ಸವಾರರಿಗೆ ಒಂದು ರೀತಿಯ ಸರ್ಕಸ್ನಂತಾಗಿದೆ. ನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ರಾಡಿಯೆದ್ದ ರಸ್ತೆಯಿಂದಾಗಿ ಪಾದಚಾರಿಗಳು ಸಂಕಷ್ಟ ಅನುಭವಿಸುವಂತಾಗಿದೆ.
ಆಲೂರು ಗ್ರಾ.ಪಂ. ವ್ಯಾಪ್ತಿಯ ಹರ್ಕೂರು ಗ್ರಾಮದ ನಾರ್ಕಳಿ- ಹೋಯಿಗೇರಿ ರಸ್ತೆಯು ಸಂಪೂರ್ಣ ಕೆಸರುಮಯವಾಗಿದ್ದು, ವಾಹನ ಸಂಚಾರವೇ ಕಷ್ಟಕರವಾಗಿದೆ. ಈ ಮಣ್ಣಿನ ರಸ್ತೆಯ ಅಭಿವೃದ್ಧಿಗೆ ಅನೇಕ ವರ್ಷಗಳಿಂದ ಗ್ರಾಮಸ್ಥರು ಬೇಡಿಕೆ ಇಡುತ್ತಿದ್ದರೂ, ಇನ್ನೂ ಅಭಿವೃದ್ಧಿಗೆ ಮಾತ್ರ ಕಾಲ ಕೂಡಿ ಬಂದಿಲ್ಲ.
3 ಕಿ.ಮೀ. ಮಣ್ಣಿನ ರಸ್ತೆ:
ನಾರ್ಕಳಿ, ಹೋಯಿಗೇರಿ ಇನ್ನಿತರ ಪ್ರದೇಶಗಳಿಂದ ಮುಖ್ಯ ಪೇಟೆಯಾದ ಆಲೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದ್ದು, ಈ ಭಾಗದಲ್ಲಿ ಸುಮಾರು 400ಕ್ಕೂ ಮಿಕ್ಕಿ ಮನೆಗಳಿವೆ. ನಿತ್ಯ ನೂರಾರು ವಾಹನಗಳು ಈ ಮಾರ್ಗದಲ್ಲಿ ಸಂಚರಿಸುತ್ತವೆ. ಸುಮಾರು 3 ಕಿ.ಮೀ. ಉದ್ದಕ್ಕೂ ಮಣ್ಣಿನ ರಸ್ತೆಯಾಗಿಯೇ ಇದ್ದು, ಅಲ್ಲಲ್ಲಿ ಕೆಸರುಮಯ ಆಗಿದ್ದಲ್ಲದೆ, ಕೆಲವೆಡೆ ರಸ್ತೆಯ ಮಣ್ಣು ಮಳೆಗೆ ಕೊಚ್ಚಿ ಹೋಗಿ, ಹೊಂಡ ಬಿದ್ದಿದ್ದು, ದ್ವಿಚಕ್ರ ಸವಾರರಂತೂ ಸರ್ಕಸ್ ಮಾಡಿಕೊಂಡೇ ಸಂಚರಿಸಬೇಕಾದ ಸ್ಥಿತಿಯಿದೆ.
ಪ್ರಮುಖ ಕೊಂಡಿ :
ನಾಡಿನ ಪ್ರಸಿದ್ಧ ದೇವಸ್ಥಾನವಿರುವ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯನ್ನು ಸಂಪರ್ಕಿಸುವ ರಸ್ತೆ ಇದಾಗಿದೆ. ಅಲ್ಲದೆ ಇಲ್ಲಿನ ರೈತರು ಅಕ್ಕಿ ಮಿಲ್ಗೆ ಹೋಗಬೇಕಾದರೂ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಹಕೂìರು, ನೂಜಾಡಿ – ಬ್ರಹ್ಮೇರಿ – ವಂಡ್ಸೆ, ಹಕ್ಲಾಡಿ, ಕುಂದಬಾರಂದಾಡಿಯಂತಹ ಪ್ರಮುಖ ಊರುಗಳನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯೂ ಇದಾಗಿದೆ.
ಇನ್ನಿತರ ಸಮಸ್ಯೆಗಳೇನು? :
- ರಸ್ತೆ ಅವ್ಯವಸ್ಥೆಯಿಂದಾಗಿ ಇಲ್ಲಿನ ಗ್ರಾಮಸ್ಥರು ಪಡಿತರ ತರಲು ಅಥವಾ ಪೇಟೆಗೆ ಹೋಗಲು ಸಂಕಷ್ಟ ಅನುಭವಿಸುವಂತಾಗಿದೆ.
- ಯಾರಿಗಾದರೂ ತುರ್ತಾಗಿ ಅನಾರೋಗ್ಯ ಉಂಟಾದರೆ ಈ ಕೆಸರುಮಯ ರಸ್ತೆಯಿಂದಾಗಿ ಸಂಚರಿಸುವುದೇ ದೊಡ್ಡ ಸಾಹಸವಾಗಿದೆ.
- ಇನ್ನೀಗ ಶಾಲಾರಂಭವಾಗಲಿದ್ದು, ಇಲ್ಲೇ ಪಕ್ಕದಲ್ಲಿ ಶಾಲೆಯಿದ್ದು, ರಾಡಿಯೆದ್ದ ರಸ್ತೆಯಿಂದಾಗಿ ಮಕ್ಕಳು ನಡೆದುಕೊಂಡು ಹೋಗಲು ಸಹ ಸಮಸ್ಯೆಯಾಗಿದೆ.
ರಸ್ತೆ ಅಭಿವೃದ್ಧಿಯಾಗಲಿ:
ನರಕ ಸದೃಶ ಈ ರಸ್ತೆಯಿಂದಾಗಿ ಎಲ್ಲರಿಗೂ ತುಂಬಾ ಸಮಸ್ಯೆಯಾಗುತ್ತಿದೆ. ಮಕ್ಕಳ ಹಾಗೂ ವಾಹನಗಳ ಓಡಾಟಕ್ಕೂ ತೊಂದರೆಯಾಗುತ್ತಿದೆ. 3-4 ಪ್ರಮುಖ ಊರುಗಳನ್ನು ಸಂಪರ್ಕಿಸುವ ರಸ್ತೆ ಇದಾಗಿದ್ದರೂ, ಇನ್ನೂ ಯಾವುದೇ ಅಭಿವೃದ್ಧಿಯಾಗಿಲ್ಲ. ಪಂಚಾಯತ್ನವರು ಈ ಬಗ್ಗೆ ಗಮನಹರಿಸಿಲ್ಲ. ಇನ್ನಾದರೂ ಈ ರಸ್ತೆಯ ಅಭಿವೃದ್ಧಿಯಾಗಲಿ. – ಉದಯ ಶೆಟ್ಟಿ ಆಲೂರು, ಸ್ಥಳೀಯರು
4 ಲ. ರೂ. ಮಂಜೂರು:
ಈ ನಾರ್ಕಳಿ- ಹೋಯಿಗೆಯೇರಿ ರಸ್ತೆಯ ಅವ್ಯವಸ್ಥೆ ಬಗ್ಗೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಗ್ರಾಮಸಭೆಗಳಲ್ಲೂ ಈ ಬಗ್ಗೆ ಪ್ರಸ್ತಾವಿಸಲಾಗಿದೆ. ಪಂಚಾಯತ್ನಿಂದ ಈ ಹಿಂದೆಯೇ ಪ್ರಸ್ತಾವನೆ ಕಳುಹಿಸಿದ್ದು, ರಸ್ತೆ ಅಭಿವೃದ್ಧಿಗೆ ತಾ.ಪಂ.ನಿಂದ 4 ಲಕ್ಷ ರೂ. ಅನುದಾನ ಮಂಜೂರಾಗಿದೆ. ಮಳೆಗಾಲದ ಬಳಿಕ ಕಾಮಗಾರಿ ಆರಂಭವಾಗಬಹುದು. – ಸುಶೀಲಾ, ಆಲೂರು ಗ್ರಾ.ಪಂ. ಪಿಡಿಒ
– ಪ್ರಶಾಂತ್ ಪಾದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundapur: ಕುಸಿದು ಬಿದ್ದು ಸಾವು
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ