ವಾಹನ ಸಂಚಾರ ಬಿಡಿ; ನಡೆದುಕೊಂಡು ಹೋಗುವುದೇ ದೊಡ್ಡ ಸವಾಲು

ವಂಡ್ಸೆ - ಅಡಿಕೆಕೊಡ್ಲು ಸಂಪರ್ಕಿಸುವ ರಸ್ತೆ ಅವ್ಯವಸ್ಥೆ

Team Udayavani, Dec 6, 2021, 6:01 PM IST

ವಾಹನ ಸಂಚಾರ ಬಿಡಿ; ನಡೆದುಕೊಂಡು ಹೋಗುವುದೇ ದೊಡ್ಡ ಸವಾಲು

ವಂಡ್ಸೆ: ಇಲ್ಲಿನ ಪೇಟೆಯಿಂದ ತುಸು ದೂರದಲ್ಲಿರುವ ಕಾನಮ್ಮ ದುರ್ಗಾಪರಮೇಶ್ವರಿ ಮತ್ತು ಅಡಿಕೆಕೊಡ್ಲುವಿಗೆ ಸಂಧಿಸುವ ರಸ್ತೆಯು ಕೆಸರುಗದ್ದೆಯಂತಾಗಿದ್ದು, ವಾಹನ ಸಂಚಾರ ಬಿಡಿ, ನಡೆದುಕೊಂಡು ಹೋಗುವುದೇ ದೊಡ್ಡ ಸವಾಲಾಗಿ ಪರಿಣಮಿಸಿದೆ.

ವಂಡ್ಸೆ ಪೇಟೆಯಿಂದ ಈ ಮಾರ್ಗವು ಸುಮಾರು 2 ಕಿ.ಮೀ. ದೂರವಿದ್ದು, ಒಟ್ಟಾರೆ ಇಲ್ಲಿ 100 ಮನೆಗಳಿವೆ. ಅದರಲ್ಲೂ ವಂಡ್ಸೆ ಕಡೆಯಿಂದ ಆರಂಭದಲ್ಲಿ ಸುಮಾರು 100 ಮೀಟರ್‌ ವರೆಗೆ ರಸ್ತೆ ಗದ್ದೆಯಂತಾಗಿದೆ. ಅನೇಕ
ವರ್ಷದಿಂದ ಇಲ್ಲಿನ ಜನ ಈ ರಸ್ತೆಯ ಅಭಿವೃದ್ಧಿಗೆ ಒತ್ತಾಯಿಸು ತ್ತಿದ್ದರೂ ಯಾವುದೇ ಪ್ರಯೋಜನ ಮಾತ್ರ ಆಗಿಲ್ಲ. ಇದರಿಂದಾಗಿ ಈ ಮಾರ್ಗವನ್ನು ಆಶ್ರಯಿಸಿರುವವರು, ವಾಹನ ಸವಾರರು ಪ್ರತಿನಿತ್ಯ ಸರ್ಕಸ್‌ ಮಾಡುತ್ತ ಸಂಚರಿಸುತ್ತಿದ್ದಾರೆ.

ಭರವಸೆ ಮಾತ್ರ
ಚುನಾವಣೆ ಸಂದರ್ಭ ಜನಪ್ರತಿನಿಧಿಗಳು ಭರವಸೆ ನೀಡಿ ತೆರಳುತ್ತಾರೆ. ಮಹಿಳೆಯರು, ಶಾಲೆಗೆ ಹೋಗುವ ಮಕ್ಕಳ ಸಂಕಷ್ಟ ಹೇಳತೀರದಾಗಿದೆ. ಗ್ರಾಮ ಸಭೆಯಲ್ಲೂ ಪ್ರತಿ ವರ್ಷ ಈ ರಸ್ತೆಯ ವಿಚಾರ ಪ್ರಸ್ತಾವವಾಗುತ್ತದೆ. ಮತ್ತೆ ನನೆಗುದಿಗೆ ಬೀಳುತ್ತದೆ. ಈ ರಸ್ತೆಗಾಗಿ ಕೆಲವರು ತಮ್ಮ ಸ್ವಂತ ಜಾಗವನ್ನು ಬಿಟ್ಟು ಕೊಟ್ಟಿದ್ದರು. ಇವರಿಗೂ ಈಗ ಮನೆ ತಲುಪಲು ಪ್ರಯಾಸಪಡಬೇಕಾದ ಪರಿಸ್ಥಿತಿ ಇಲ್ಲಿನಜನರದ್ದಾಗಿದೆ.

ಶಾಸಕ, ಸಂಸದರಿಗೆ ಪ್ರಸ್ತಾವನೆ
10 ವರ್ಷಗಳ ಹಿಂದೆ ಈ ಊರಿಗೆ ಸಂಪರ್ಕ ರಸ್ತೆಯನ್ನು ಪಂಚಾಯತ್‌ ವತಿಯಿಂದ ಮಾಡಲಾಗಿತ್ತು. ಆದರೆ ಸುಮಾರು 2 ಕಿ.ಮೀ. ದೂರದ ಈ ರಸ್ತೆಯ ಅಭಿವೃದ್ಧಿ ಪಂಚಾಯತ್‌ ಅನುದಾನದಿಂದ ಸಾಧ್ಯವಿಲ್ಲ. ಅದಕ್ಕಾಗಿ ಪಂಚಾಯತ್‌ನಿಂದ ಈಗಾಗಲೇ ಶಾಸಕರು ಹಾಗೂ ಸಂಸದರಿಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಅನುದಾನ ಬಂದಲ್ಲಿ ಕಾಂಕ್ರೀಟ್‌ ರಸ್ತೆ ಮಾಡಬಹುದು.
-ಉದಯ ಕುಮಾರ್‌ ಶೆಟ್ಟಿ, ಅಧ್ಯಕ್ಷರು, ವಂಡ್ಸೆ ಗ್ರಾ.ಪಂ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.