ಹದಗೆಟ್ಟ ಆಮ್ರಕಲ್ಲು – ಸೂರ್ಗೋಳಿ ಕ್ರಾಸ್‌ ರಸ್ತೆ

 15 ವರ್ಷಗಳ‌ ಹಿಂದೆ ಡಾಮರು ಕಾಮಗಾರಿ  ; ದುರಸ್ತಿಗೆ ಗ್ರಾಮಸ್ಥರ ಆಗ್ರಹ

Team Udayavani, Jan 4, 2022, 5:30 AM IST

ಹದಗೆಟ್ಟ ಆಮ್ರಕಲ್ಲು – ಸೂರ್ಗೋಳಿ ಕ್ರಾಸ್‌ ರಸ್ತೆ

ಗೋಳಿಯಂಗಡಿ: ಆಮ್ರಕಲ್ಲು – ಸೂರ್ಗೋಳಿ ಕ್ರಾಸ್‌ ರಸ್ತೆಯಲ್ಲಿ ಬಹಳಷ್ಟು ಹೊಂಡ – ಗುಂಡಿಗಳು ¬ಉಂಟಾ ಗಿ ದ್ದರಿಂದ ಸಂಚಾರ ದುಸ್ತರವಾಗಿದೆ. ನಿತ್ಯ ನೂರಾರು ಮಂದಿ ಸಂಚರಿಸುವ 4 ಕಿ.ಮೀ. ದೂರದ ಈ ರಸ್ತೆಯ ಅಭಿವೃದ್ಧಿಗೆ ಅಲ್ಲಿನ ಜನರು ಆಗ್ರಹಿಸಿದ್ದಾರೆ.

ಬೆಳ್ವೆ, ಹಿಲಿಯಾಣ, ನಾಲ್ಕೂರು ಈ 3 ಗ್ರಾಮಗಳನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದ್ದು, ಪ್ರತೀ ನಿತ್ಯ ನೂರಾರು ಮಂದಿ ಬೇರೆ ಬೇರೆ ಕಡೆಗಳಿಗೆ ಸಂಚರಿಸಲು ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಬೃಹತ್‌ ಹೊಂಡಮಯ ವಾಗಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಪ್ರಯಾಸ ತರುವಂತಿದೆ.

ಹತ್ತಿರದ ಮಾರ್ಗ
ಈ ರಸ್ತೆಯು ಆಮ್ರಕಲ್ಲು, ತಾರಿಕಟ್ಟೆ ಹಾಗೂ ಸೂರ್ಗೋಳಿ ಭಾಗದ ಜನರಿಗೆ ಬೇರೆ ಬೇರೆ ಕಡೆಗಳಿಗೆ ಸಂಚರಿಸಲು ಮುಖ್ಯ ರಸ್ತೆಯಾಗಿದೆ. ಇದಲ್ಲದೆ ಬೆಳ್ವೆ, ಅಲಾºಡಿ ಭಾಗದ ಜನರಿಗೆ ಮಂದಾರ್ತಿ ದೇವಸ್ಥಾನಕ್ಕೆ ತೆರಳಲು ಹತ್ತಿರದ ಮಾರ್ಗವಾಗಿದೆ. ಬೆಳ್ವೆಯಿಂದ ಮಂದಾರ್ತಿಗೆ ಬೇರೆ ರಸ್ತೆಯಿದ್ದರೂ, ಈ ಮಾರ್ಗವಾಗಿ ಸುಮಾರು 2 ಕಿ.ಮೀ.ನಷ್ಟು ಹತ್ತಿರವಾಗಲಿದೆ. ಆದರೆ ಹದಗೆಟ್ಟ ರಸ್ತೆಯಿಂದಾಗಿ ಈ ರಸ್ತೆಯ ಬದಲು ದೂರದ ಮಾರ್ಗವನ್ನೇ ಅವಲಂಬಿಸುವಂತಾಗಿದೆ.

15 ವರ್ಷದ ಹಿಂದೆ ಕಾಮಗಾರಿ
ಈ ಮಾರ್ಗಕ್ಕೆ ಶಾಸಕರ ಮುತುವರ್ಜಿಯಲ್ಲಿ 15 ವರ್ಷದ ಹಿಂದೆ ಡಾಮರು ಕಾಮಗಾರಿಯಾಗಿತ್ತು. ಅಲ್ಲಿಂದ ಇಲ್ಲಿಯವರೆಗೆ ಈ ಮಾರ್ಗದ ಯಾವುದೇ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಕೆಲವೊಮ್ಮೆ ಹೊಂಡ-ಗುಂಡಿಗಳಿಗೆ ತೇಪೆ ಹಾಕುವ ಕಾರ್ಯ ಆಗಿದ್ದು, ಬಿಟ್ಟರೆ, ರಸ್ತೆ ಮರು ಡಾಮರು ಕಾಮಗಾರಿ ಈವರೆಗೆ ನಡೆದಿಲ್ಲ.

ಮರು ಡಾಮರು ಕಾಮಗಾರಿಯಾಗಲಿ
ಈ ಆಮ್ರಕಲ್ಲು – ತಾರಿಕಟ್ಟೆ- ಸೂರ್ಗೋಳಿ ಕ್ರಾಸ್‌ ರಸ್ತೆ ಹದಗೆಟ್ಟು ಅನೇಕ ಸಮಯವಾಗಿದೆ. ನಿತ್ಯ ಈ ಮಾರ್ಗದಲ್ಲಿ 200ಕ್ಕೂ ಅಧಿಕ ವಾಹನಗಳು ಸಂಚರಿಸುತ್ತವೆ. ರಸ್ತೆಯ ಅಲ್ಲಲ್ಲಿ ದೊಡ್ಡ ಹೊಂಡ ಬಿದ್ದಿರುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಯಿರುವುದರಿಂದ ಶೀಘ್ರ ಈ ರಸ್ತೆಯ ಮರು ಡಾಮರು ಕಾಮಗಾರಿ ಆಗಲಿ ಎನ್ನುವುದಾಗಿ ಈ ಭಾಗದ ಗ್ರಾಮಸ್ಥರು ಆಗ್ರ ಹಿಸಿದ್ದಾರೆ.

ಬೇಡಿಕೆ ಸಲ್ಲಿಕೆ
ಇದು ಕುಂದಾಪುರ ಹಾಗೂ ಸ್ವಲ್ಪ ಭಾಗ ಉಡುಪಿ ಕ್ಷೇತ್ರಕ್ಕೂ ಬರುತ್ತದೆ. ನಾವು ಈಗಾಗಲೇ ನಮ್ಮ ಶಾಸಕರಿಗೆ ಈ ರಸ್ತೆಯ ಅಭಿವೃದ್ಧಿ ಬಗ್ಗೆ ಬೇಡಿಕೆ ಸಲ್ಲಿಸಿದ್ದೇವೆ. ಉಡುಪಿಯ ಶಾಸಕರಿಗೂ ಅಲ್ಲಿನ ಸ್ಥಳೀಯ ಜನಪ್ರತಿನಿಧಿಗಳು ಗಮನಕ್ಕೆ ತಂದಿದ್ದಾರೆ. ಈಗಾಗಲೇ ಸುತ್ತಮುತ್ತಲಿನ ಅನೇಕ ರಸ್ತೆ ಅಭಿವೃದ್ಧಿಯಾಗಿದ್ದು, ಆದರೆ ಈ ರಸ್ತೆ ಅನೇಕ ವರ್ಷದ ಹಿಂದೆ ಡಾಮರು ಕಾಮಗಾರಿಯಾಗಿದ್ದು, ಈ ರಸ್ತೆಯ ದುರಸ್ತಿಗೂ ಅನುದಾನ ಮಂಜೂರಾಗುವ ನಿರೀಕ್ಷೆಯಿದೆ.
-ಸೂರ್ಗೋಳಿ ಚಂದ್ರಶೇಖರ ಶೆಟ್ಟಿ, ಅಧ್ಯಕ್ಷರು, ಬೆಳ್ವೆ ಗ್ರಾ.ಪಂ.

 

ಟಾಪ್ ನ್ಯೂಸ್

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.