ಉಪ್ಪುಂದ; ವಿದ್ಯುತ್ ಶಾಕ್ನಿಂದ ವಿದ್ಯಾರ್ಥಿ ಸಾವು
ತತ್ಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
Team Udayavani, Apr 27, 2022, 9:26 AM IST
ಉಪ್ಪುಂದ: ವಿದ್ಯುತ್ ತಂತಿ ತಗಲಿದ ಪರಿಣಾಮ ವಿದ್ಯಾರ್ಥಿ ಮೃತಪಟ್ಟ ಘಟನೆ ಕೆರ್ಗಾಲ್ ಗ್ರಾ.ಪಂ. ವ್ಯಾಪ್ತಿಯ ನಾಯ್ಕನಕಟ್ಟೆಯಲ್ಲಿ ಎ. 24ರಂದು ತಡರಾತ್ರಿ ಸಂಭವಿಸಿದೆ.ಬಿಜೂರು ಗ್ರಾಮದ ನೆಲ್ಲಿಹಕ್ಲು ನಿವಾಸಿ ವಸಂತಿ ಶೆಟ್ಟಿ ಅವರ ಪುತ್ರ ಚೇತನ್ ಶೆಟ್ಟಿ (16) ಮೃತಪಟ್ಟವರು.
ಇದನ್ನೂ ಓದಿ: 5 ವರ್ಷದ ಸ್ಪರ್ಧಾತ್ಮಕ ಪರೀಕ್ಷೆ ತನಿಖೆಯಾಗಲಿ: ಶರಣಪ್ರಕಾಶ
ಉಪ್ಪುಂದದಲ್ಲಿ ಪ್ರಥಮ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ಚೇತನ್ ಶೆಟ್ಟಿ ಕಾಲೇಜಿಗೆ ರಜೆ ಇರುವುದರಿಂದ ಹೊಸ್ಕೋಟೆಯಲ್ಲಿ ಶಾಮಿಯಾನ ಕೆಲಸಕ್ಕೆ ಸೇರಿಕೊಂಡಿದ್ದರು.
ಎ. 24ರಂದು ನಾಯ್ಕನಕಟ್ಟೆ ಮನೆಯೊಂದರಲ್ಲಿ ಉಪನಯನ ಕಾರ್ಯಕ್ರಮ ಇದ್ದುದರಿಂದ ಕಬ್ಬಿಣದ ಏಣಿಯ ಮೇಲೆ ನಿಂತು ಶಾಮಿಯಾನ ಅಳವಡಿಸುತ್ತಿರುವಾಗ ಶಾಮಿಯಾನದ ಸುತ್ತ ಹಾಕಿರುವ ಲೈಟಿಂಗ್ ವಯರ್ನಲ್ಲಿ ಇದ್ದ ಗುಂಡು ಪಿನ್ ಆಕಸ್ಮಿಕವಾಗಿ ಅವರ ಎದೆಯ ಬಳಿಗೆ ತಾಗಿ ವಿದ್ಯುತ್ ಶಾಕ್ ತಗಲಿದ ಪರಿಣಾಮ ಕೆಳಕ್ಕೆ ಬಿದ್ದಿದ್ದಾರೆ.
ತತ್ಕ್ಷಣ ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ