ನೆಲಗಡಲೆ, ಉದ್ದು ಬೆಳೆದ ಗದ್ದೆಗೆ ಉಪ್ಪು ನೀರಿನ ದಾಂಗುಡಿ

ಉಪ್ಪಿನಕುದ್ರು: ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಕೆ ವಿಳಂಬದಿಂದ ಸಮಸ್ಯೆ

Team Udayavani, Dec 18, 2020, 4:07 AM IST

KUD

ನೆಲಗಡಲೆ ಬೆಳೆದ ಗದ್ದೆಗೆ ಉಪ್ಪು ನೀರು ನುಗ್ಗಿ ಹಾನಿಯಾಗಿರುವುದು.

ಕುಂದಾಪುರ: ತಲ್ಲೂರು ಗ್ರಾ.ಪಂ. ವ್ಯಾಪ್ತಿಯ ಉಪ್ಪಿನ ಕುದ್ರುವಿನ ಮಯ್ಯರಕೇರಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ನಿರ್ಮಿಸಿದ ಕಿಂಡಿ ಅಣೆಕಟ್ಟಿಗೆ ಸಕಾಲದಲ್ಲಿ ಹಲಗೆ ಅಳವಡಿಸದ ಕಾರಣ ಈಗ ಈ ಭಾಗದ ಗದ್ದೆಗಳಲ್ಲಿ ಬೆಳೆದ ನೆಲಗಡಲೆ, ಉದ್ದಿನ ಬೆಳೆ ಉಪ್ಪು ನೀರಿನ ಪಾಲಾಗಿದೆ. ಇದರಿಂದ ಎಕರೆಗಟ್ಟಲೆ ಕೃಷಿಗೆ ಹಾನಿಯಾಗಿದ್ದು, 50-60 ಮಂದಿ ರೈತರಿಗೆ ಸಂಕಷ್ಟ ತಂದೊಡ್ಡಿದೆ.

ಉಪ್ಪಿನಕುದ್ರುವಿನ ಮಯ್ಯರಕೇರಿ ಯಲ್ಲಿರುವ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಲು ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾ.ಪಂ. ಅಧಿಕಾರಿಗಳು ಮೀನಮೇಷ ಎಣಿಸುತ್ತಿರುವುದರಿಂದ ಈಗ ಮಯ್ಯರಕೇರಿ, ಬೊಬ್ಬರ್ಯ ದೈವಸ್ಥಾನ ಭಾಗದಲ್ಲಿರುವ 60ಕ್ಕೂ ಅಧಿಕ ಮಂದಿ ರೈತರ 30-40 ಎಕರೆ ಗದ್ದೆಗೆ ಉಪ್ಪು ನೀರು ನುಗ್ಗಿದೆ. ಇದರಿಂದ ಈ ಗದ್ದೆಗಳಲ್ಲಿ ಈಗಷ್ಟೇ ಬೆಳೆದ ನೆಲಗಡಲೆ, ಉದ್ದು ಕೃಷಿ ಉಪ್ಪು ನೀರಿನಿಂದ ಹಾನಿಯಾಗಿದೆ.

ಕೃಷಿಯಿಂದಲೇ ವಿಮುಖ
ಉಪ್ಪಿನಕುದ್ರು ಭಾಗದಲ್ಲಿ ಮುಂಗಾರಿನಲ್ಲಿ ಭತ್ತದ ಕೃಷಿ ಬೆಳೆದರೆ, ಹಿಂಗಾರು ಹಂಗಾಮಿನಲ್ಲಿ ನೆಲಗಡಲೆ, ಉದ್ದಿನಂತಹ ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುತ್ತಾರೆ. ಇಲ್ಲಿನ ರೈತರಿಗೆ ಅನುಕೂಲವಾಗಲೆಂದೆ 10 ವರ್ಷಗಳ ಹಿಂದೆ ಮಯ್ಯರಕೇರಿಯಲ್ಲಿ ಕೋಟ್ಯಂತರ ರೂ. ಖರ್ಚು ಮಾಡಿ ಕಿಂಡಿ ಅಣೆಕಟ್ಟನ್ನು ನಿರ್ಮಿಸಲಾಗಿತ್ತು. ಆದರೆ ಅದರ ಸಮರ್ಪಕ ನಿರ್ವಹಣೆಯಿಲ್ಲದೆ, ಇಲ್ಲಿನ ರೈತರಿಗೆ ಪ್ರಯೋಜನವಾಗದಂತಾಗಿದೆ. ಇದರಿಂದಾಗಿ ಬಹುತೇಕ ಮಂದಿ ರೈತರು ಕೃಷಿಯಿಂದಲೇ ವಿಮುಖರಾಗಿ, ಗದ್ದೆಗಳನ್ನು ಹಡಿಲು ಬಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಲಗೆ ಅಳವಡಿಕೆಗೆ ಆಗ್ರಹ
ನಾವು ಕಳೆದ ಹಲವು ದಿನಗಳಿಂದ ಇಲ್ಲಿನ ಕಿಂಡಿ ಅಣೆಕಟ್ಟಿಗೆ ಹಲಗೆ ಅಳವಡಿಸಲು ಗ್ರಾ.ಪಂ. ಹಾಗೂ ಅಧಿಕಾರಿಗಳನ್ನು ಒತ್ತಾಯಿಸುತ್ತಲೇ ಇದ್ದೇವೆ. ಆದರೆ ಪಂಚಾಯತ್‌ನವರು ಹಾಗೂ ಅಧಿಕಾರಿಗಳು ಯಾರದೋ ವಿಚಾರಕ್ಕೆ ಕಟ್ಟು ಬಿದ್ದು ಹಲಗೆ ಅಳವಡಿಸಲು ಮುಂದಾಗುತ್ತಿಲ್ಲ. ಅವರಿಗೆ ಕೃಷಿಕರ ಹಿತ ಬೇಕಾಗಿಲ್ಲ. ಇನ್ನಾದರೂ ಎಚ್ಚೆತ್ತುಕೊಂಡು ಶೀಘ್ರ ಹಲಗೆ ಅಳವಡಿಸಲಿ ಎನ್ನುವುದಾಗಿ ಉಪ್ಪಿನಕುದ್ರು ಪರಿಸರದ ರೈತರು ಆಗ್ರಹಿಸಿದ್ದಾರೆ.

ಕೃಷಿ ಮಾಡುವುದಾದರೂ ಹೇಗೆ?
ನಾವು ಮುಂಗಾರಿನಲ್ಲಿ ಭತ್ತ ಬೆಳೆಯುತ್ತೇವೆ. ಹಿಂಗಾರಿನಲ್ಲಿ ನೆಲಗಡಲೆ, ಸ್ವಲ್ಪ ಉದ್ದು ಬೆಳೆಸಿದ್ದೇವೆ. ಆದರೆ ಈಗ ಹಲಗೆ ಅಳವಡಿಸದ ಕಾರಣ, ಗದ್ದೆಗಳಿಗೆ ಉಪ್ಪು ನೀರು ನುಗ್ಗಿ ಬೆಳೆದ ಕೃಷಿ ಪೂರ್ತಿ ಹಾಳಾಗಿದೆ. ಹೀಗೆ ಆದರೆ ಕೃಷಿ ಮಾಡುವುದಾದರೂ ಹೇಗೆ?  ಈ ಬಗ್ಗೆ ಪಂಚಾಯತ್‌ನವರಿಗೆ, ಅಧಿಕಾರಿಗಳಿಗೆ ಹೇಳಿದರೂ ಯಾವುದೇ ಪ್ರಯೋಜನ ಮಾತ್ರ ಆಗಿಲ್ಲ.
– ಶೇಖರ್‌ ಉಪ್ಪಿನಕುದ್ರು, ಕೃಷಿಕರು

ಶೀಘ್ರ ಹಲಗೆ ಅಳವಡಿಕೆ
ಉಪ್ಪಿನಕುದ್ರುವಿನ ರೈತರ ಸಮಸ್ಯೆ ಗಮನಕ್ಕೆ ಬಂದಿದ್ದು, ಮಯ್ಯರಕೇರಿಯ ಕಿಂಡಿ ಅಣೆಕಟ್ಟಿಗೆ ಆದಷ್ಟು ಶೀಘ್ರ ಹಲಗೆ ಅಳವಡಿಸಲಾಗುವುದು. ಈ ಬಗ್ಗೆ ಆದ್ಯತೆ ನೀಡಿ ಪಂಚಾಯತ್‌ನಿಂದ ಕ್ರಮ ವಹಿಸಲಾಗುವುದು.
– ನಾಗೇಂದ್ರ, ಪಿಡಿಒ ತಲ್ಲೂರು ಗ್ರಾ.ಪಂ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Kota; 1 ಕೋಟಿ ರೂ. ಮೌಲ್ಯದ 1.2 ಕೆಜಿ ಚಿನ್ನ ವಶ: ಚಿತ್ರ ನಿರ್ಮಾಪಕನ ಮನೆಯಿಂದ ಕದ್ದಾತ ಸೆರೆ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

Heavy Rain ಸಿದ್ದಾಪುರ: ಮನೆಗೆ ಮರ ಬಿದ್ದು ಮೂವರಿಗೆ ಗಾಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.